Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶನ್ 2030 ಕ್ಕೆ ಸೌದಿ ಸಂಪುಟ...

ವಿಶನ್ 2030 ಕ್ಕೆ ಸೌದಿ ಸಂಪುಟ ಅನುಮೋದನೆ

ತೈಲ ಆದಾಯದ ಮೇಲಿನ ಅವಲಂಬನೆ ಕಡಿಮೆ ಮಾಡುವ ಆರ್ಥಿಕ ಯೋಜನೆ

ವಾರ್ತಾಭಾರತಿವಾರ್ತಾಭಾರತಿ25 April 2016 6:56 PM IST
share
ವಿಶನ್ 2030 ಕ್ಕೆ  ಸೌದಿ ಸಂಪುಟ ಅನುಮೋದನೆ

ರಿಯಾದ್, ಎ. 25: ಆರ್ಥಿಕ ಮತ್ತು ಅಭಿವೃದ್ಧಿ ವ್ಯವಹಾರಗಳ ಮಂಡಳಿ (ಸಿಇಡಿಎ) ಅಭಿವೃದ್ಧಿಪಡಿಸಿದ ದೇಶದ ‘‘ವಿಶನ್ 2030’’ (ಸೌದಿ 2030ರ ಮುನ್ನೋಟ)ಕ್ಕೆ ಸೌದಿ ಅರೇಬಿಯ ಸಚಿವ ಸಂಪುಟ ಅಂಗೀಕಾರ ನೀಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ದೊರೆ ಸಲ್ಮಾನ್, ಈ ಯೋಜನೆಯನ್ನು ರೂಪಿಸುವಲ್ಲಿ ಸಿಇಡಿಎ ಪಟ್ಟ ಶ್ರಮವನ್ನು ಕೊಂಡಾಡಿದರು. ಇದನ್ನು ಅನುಷ್ಠಾನಗೊಳಿಸುವಲ್ಲಿ ಜೊತೆಯಾಗಿ ಕೆಲಸ ಮಾಡುವಂತೆ ಅವರು ನಾಗರಿಕರಿಗೆ ಕರೆ ನೀಡಿದರು.

ಸೌದಿ ಅರೇಬಿಯದ ‘2030ರ ಮುನ್ನೋಟ’ದ ಕರಡಿನ ಪರಿಶೀಲನೆಗಾಗಿ ಸಚಿವ ಸಂಪುಟ ಸೋಮವಾರದ ಇಡೀ ದಿನವನ್ನು ಮೀಸಲಿಟ್ಟಿತು.

ಬಳಿಕ ಅಲ್ ಅರೇಬಿಯ ಸುದ್ದಿ ಚಾನೆಲ್‌ಗೆ ಸಂದರ್ಶನವೊಂದನ್ನು ನೀಡಿದ ಸೌದಿ ಅರೇಬಿಯದ ಉಪ ಯುವರಾಜ, ರಕ್ಷಣಾ ಸಚಿವ ಹಾಗೂ ಸಿಇಡಿಎ ಮುಖ್ಯಸ್ಥ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್, ದೇಶದ ಸರಕಾರಿ ಸ್ವಾಮ್ಯದ ತೈಲ ಉತ್ಪಾದಕ ದೈತ್ಯ ಸೌದಿ ಅರಾಮ್ಕಾದ ಶೇಕಡ 5ಕ್ಕಿಂತಲೂ ಕಡಿಮೆ ಶೇರುಗಳನ್ನು ಸಾರ್ವಜನಿಕ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ನಿರ್ಧರಿಸಲಾಯಿತು ಎಂದು ತಿಳಿಸಿದರು.

ಅರಾಮ್ಕ ಅಲ್ಲ, ನಿರ್ದೇಶಕರ ಮಂಡಳಿಯ ಉಸ್ತುವಾರಿಯಲ್ಲಿ ಎರಡು ಲಕ್ಷ ಕೋಟಿ ಡಾಲರ್ ಸಂಪತ್ತು ನಿಧಿಯೊಂದನ್ನು ಸ್ಥಾಪಿಸುವ ಯೋಜನೆಯೊಂದರ ಬಗ್ಗೆಯೂ ಅವರು ಚರ್ಚಿಸಿದರು. ಈ ನಿಧಿಯ ಆದಾಯವನ್ನು ಸೌದಿ ಅರೇಬಿಯದ ನಗರಗಳನ್ನು ಅಭಿವೃದ್ಧಿಪಡಿಸಲು ಬಳಸಲಾಗುವುದು.

ತೈಲದ ಮೇಲೆ ದೇಶದ ಅವಲಂಬನೆಯನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡುವುದು, ಖಾಸಗೀಕರಣಗಳಿಗೆ ಒತ್ತು ನೀಡುವುದು, ಸಬ್ಸಿಡಿಗಳನ್ನು ಇನ್ನಷ್ಟು ಕಡಿತಗೊಳಿಸುವುದು, ಅರಾಮ್ಕಿದ ಸ್ವಲ್ಪ ಭಾಗ ಶೇರುಗಳ ಮಾರಾಟ ಮತ್ತು 2 ಲಕ್ಷ ಕೋಟಿ ಮೊತ್ತದ ಸಂಪತ್ತು ನಿಧಿಯ ಸ್ಥಾಪನೆ- ಮುಂತಾದ ಯೋಜನೆಗಳು ‘ಸೌದಿ 2030ರ ಮುನ್ನೋಟ’ದ ಪ್ರಮುಖ ಅಂಶಗಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X