ದೇವಳಕ್ಕೆ ನುಗ್ಗಿ ನಗದು ಕಳವು
ಬ್ರಹ್ಮಾವರ, ಎ.25: ಉಪ್ಪೂರು ಅಮ್ಮುಂಜೆಯಲ್ಲಿರುವ ಬಬ್ಬುಸ್ವಾಮಿ ದೇವಸ್ಥಾನಕ್ಕೆ ಎ.22ರಿಂದ 24ರ ಮಧ್ಯಾವಧಿಯಲ್ಲಿ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿಯಲ್ಲಿದ್ದ ಹಣ ಕಳವು ಮಾಡಿದ್ದಾರೆ.
ದೇವಳದ ಮುಖ್ಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿದ್ದ ಸುಮಾರು 1,600 ರೂ. ಕಳವುಗೈದಿದ್ದು, ಅಲ್ಲಿರುವ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story