Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಿಕ್ಷೆ ಬೇಡಿ, ಕಳ್ಳತನಕ್ಕೆ ಇಳಿದಿದ್ದ...

ಭಿಕ್ಷೆ ಬೇಡಿ, ಕಳ್ಳತನಕ್ಕೆ ಇಳಿದಿದ್ದ ನಟಿ ಪತ್ತೆ

ಬಣ್ಣದ ಬದುಕಿನ ಹಿಂದಿನ ಸತ್ಯ

ವಾರ್ತಾಭಾರತಿವಾರ್ತಾಭಾರತಿ26 April 2016 1:25 PM IST
share
ಭಿಕ್ಷೆ ಬೇಡಿ, ಕಳ್ಳತನಕ್ಕೆ ಇಳಿದಿದ್ದ ನಟಿ ಪತ್ತೆ

ಮುಂಬೈ, ಎ. 26 : ಕೈಯಲ್ಲಿ ಯಾವುದೇ ಕೆಲಸವಿಲ್ಲದೆ ಅಲೆಮಾರಿಯಂತಾಗಿ ಹೋದ ನಟಿಯೊಬ್ಬಳು ಲೋಖಂಡ್ವಾಲದ ರಸ್ತೆಗಳಲ್ಲಿ ಭಿಕ್ಷೆ ಬೇಡಿ, ಕಳ್ಳತನ ಮಾಡುತ್ತಿರುವುದು ಪತ್ತೆಯಾಗಿದ್ದು ಮಾನಸಿಕ ಸ್ಥಿಮಿತವಿಲ್ಲದಂತೆ ಕಂಡು ಬಂದ ಆಕೆಯನ್ನು ಪೊಲೀಸರು ವಶಪಡಿಸಿಕೊಂಡು ಥಾಣೆಯ ಮಾನಸಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಂಧಿತ ನಟಿಯನ್ನು ಮಿತಾಲಿ ಶರ್ಮ (25) ಎಂದು ಗುರುತಿಸಲಾಗಿದೆ. ಆಕೆಯ ನಟನಾ ವೃತ್ತಿ ಮೊಟಕುಗೊಂಡ ನಂತರ ಆಕೆಯ ಕುಟುಂಬವೂ ಆಕೆಯನ್ನು ದೂರ ಮಾಡಿತ್ತೆನ್ನಲಾಗಿದೆ. ಆಕೆ ಭೋಜಪುರಿ ಚಿತ್ರವೊಂದರಲ್ಲಿ ನಟಿಸಿದ್ದು ಒಂದೆರಡು ಜಾಹೀರಾತುಗಳಲ್ಲಿಯೂ ಕಾಣಿಸಿಕೊಂಡಿದ್ದಾಳೆನ್ನಲಾಗಿದೆ.

ದೆಹಲಿಯ ನಿವಾಸಿಯಾಗಿರುವ ಮಿತಾಲಿ ಓಶಿವಾರಾದ ಹೌಸಿಂಗ್ ಸೊಸೈಟಿಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರೊಂದರ ಗಾಜನ್ನು ಹುಡಿ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಳು. ತನ್ನನ್ನು ಸೆರೆ ಹಿಡಿಯಲು ಬಂದ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ಆಕೆ ಹಲ್ಲೆ ನಡೆಸಿದರೂ ಪೊಲೀಸರು ಆಕೆಯನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆಕೆಗೆ ಚಿತ್ರಗಳಲ್ಲಿ ನಟಿಸಲು ಆಫರ್ ಬರುವುದು ನಿಂತಾಗ ಆಕೆ ಖಿನ್ನತೆಗೆ ಜಾರಿದ್ದು ಮುಂಬೈನಲ್ಲಿ ಒಬ್ಬಳೇ ರಸ್ತೆ ಬದಿಗಳಲ್ಲಿ ವಾಸಿಸುತ್ತಿದ್ದಳೆನ್ನಲಾಗಿದೆ.
ಪೊಲೀಸರು ಆಕೆಯನ್ನು ಬಂಧಿಸಿದ ಕೂಡಲೇ ಆಕೆ ಆಹಾರಕ್ಕೆ ಬೇಡಿಕೆಯಿಟ್ಟಿದ್ದು ಆಕೆ ಆಹಾರ ಸೇವಿಸದೆ ಒಂದೆರಡು ದಿನಗಳಾಗಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.

ಆಕೆ ಯಾರ ಜತೆಗೂ ಮಾತನಾಡುತ್ತಿಲ್ಲವಾಗಿದ್ದು ಆಕೆ ಸಹಜ ಸ್ಥಿತಿಗೆ ಬರಲು ಕನಿಷ್ಠ ಹತ್ತು ದಿನಗಳಾದರೂ ಬೇಕೆಂದು ಥಾಣೆಯ ಮಾನಸಿಕ ಆಸ್ಪತ್ರೆಯ ಡಾ. ಅಂಜಲಿ ದೇಶಪಾಂಡೆ ಹೇಳಿದ್ದಾರೆ.

ತೊಂಬತ್ತರ ದಶಕದಲ್ಲಿ ಮಾಡೆಲ್ ಆಗಿ ಮಿಂಚಿದ್ದ ಗೀತಾಂಜಿ ನಾಗ್ಪಾಲ್ ಎಂಬಾಕೆ 2007ರಲ್ಲಿ ರಸ್ತೆ ಬದಿಯಲ್ಲಿ ವಾಸಿಸುವುದು ಪತ್ತೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X