Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೆರುವಾಜೆಯಲ್ಲಿ ಖಾಲಿ ಕೊಡ ಹಿಡಿದು...

ಪೆರುವಾಜೆಯಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 April 2016 2:53 PM IST
share
ಪೆರುವಾಜೆಯಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ

ಸುಳ್ಯ, ಎ. 26: ಪೆರುವಾಜೆ ಗ್ರಾ.ಪಂ ವ್ಯಾಪ್ತಿಯ ಮುರ್ಕೇತಿ ಪರಿಸರದಲ್ಲಿ ವಾರದಿಂದ ನಳ್ಳಿ ನೀರಿಲ್ಲದೆ ಜನರಿಗೆ ತೊಂದರೆ ಆಗಿದೆ ಎಂದು ಸ್ಥಳೀಯ ನಿವಾಸಿಗಳು ಗ್ರಾ.ಪಂ ಮುಂಭಾಗದಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮುರ್ಕೇತಿ ವಾರ್ಡ್ ನೀರಿನ ಸಮಿತಿ ಅಧ್ಯಕ್ಷ ಯತೀಶ್ ಕುಮಾರ್, ಕಳೆದ ಕೆಲ ದಿನಗಳಿಂದ ಮುರ್ಕೇತಿ ಪರಿಸರದಲ್ಲಿ ನೀರಿನ ಸಮಸ್ಯೆ ಇದೆ. ಇದರಿಂದ ಜನರಿಗೆ ತೊಂದರೆ ಆಗಿದೆ. ಇದಕ್ಕೆ ಸ್ಪಂದನೆ ನೀಡದಿದ್ದರೆ ಪ್ರತಿಭಟನಾ ಸ್ಥಳದಿಂದ ಕದಲುವುದಿಲ್ಲ ಎಂದು ಪಂಚಾಯತ್ ವಿರುದ್ಧ ಘೋಷಣೆ ಕೂಗಿದರಲ್ಲದೆ, ಸ್ಥಳೀಯರ ಜತೆ ಪಂಚಾಯತ್ ಮುಂಭಾಗದಲ್ಲಿ ಧರಣಿ ಕುಳಿತರು.

ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಅಧ್ಯಕ್ಷೆ ಅನಸೂಯ, ಉಪಾಧ್ಯಕ್ಷ ಸುನಿಲ್ ರೈ, ಸ್ಥಳೀಯ ವಾರ್ಡ್ ಸದಸ್ಯ ಇಬ್ರಾಹಿಂ ಅಂಬೆಟಡ್ಕ ಪ್ರತಿಭಟನ ನಿರತರ ಅಹವಾಲು ಆಲಿಸಿದರು. ಬಳಿಕ ಪ್ರತಿಕ್ರಿಯಿಸಿದ ಅವರು, ಪೆರುವಾಜೆ ಗ್ರಾ.ಪಂ ಹೊಸ ಪಂಚಾಯತ್. ಇದಕ್ಕೆ ಅನುದಾನ ಬಂದಿಲ್ಲ. ಪಂಪ್ ದುರಸ್ತಿ ಹಣ ಪಾವತಿಗೆ ಸಮಸ್ಯೆ ಆಗಿದೆ. ಆದರೂ, ಪಂಚಾಯತ್ ವತಿಯಿಂದ ಜನರ ಸಮಸ್ಯೆಗೆ ಸ್ಪಂದಿಸುವ ಪ್ರಯತ್ನ ನಡೆದಿದೆ. ನಯಾಪೈಸೇ ಅನುದಾನ ಇಲ್ಲದೆ ಆಡಳಿತ ನಡೆಸುವುದು ಎಷ್ಟು ಕಷ್ಟ ಅನ್ನುವ ವಿಚಾರ ಎಲ್ಲರಿಗೂ ಗೊತ್ತಿರಬಹುದು ಎಂದು ಹೇಳಿದರು.

ಇದಕ್ಕೆ ಪ್ರತಿಭಟನಕಾರರು, ನಮಗೆ ಮುರ್ಕೇತಿ ಪರಿಸರದಲ್ಲಿ ನೀರಿನ ವ್ಯವಸ್ಥೆ ಆಗಬೇಕು. ಸಮಸ್ಯೆ ಆದಾಗ ಸ್ಪಂದಿಸುವುದು ಪಂಚಾಯತ್‌ನ ಕರ್ತವ್ಯ ಎಂದು ಮರು ಉತ್ತರಿಸಿದರು. ಕೆಲ ತಾಸುಗಳ ಕಾಲ ಮಾತಿನ ಚಕಮಕಿಯ ಬಳಿಕ, ಎ.26 ರೊಳಗೆ ನೀರಿನ ಪೂರೈಕೆಗೆ ವ್ಯವಸ್ಥೆ ಕಲ್ಪಿಸುವುದಾಗಿ ಪಂಚಾಯತ್ ಭರವಸೆ ನೀಡಿತ್ತು. ಬಳಿಕ ಪ್ರತಿಭಟನೆ ಕೈ ಬಿಡಲಾಯಿತು.
 

ನೀರು ಇಲ್ಲದಾಗ ಜನರು ಪಂಚಾಯತ್ ಮುಂದೆ ಪ್ರತಿಭಟನೆ ಮಾಡುತ್ತಾರೆ. ಆದರೆ ಬಿಲ್ ಬಾಕಿ ಆದರೆ ಯಾರು ಬರುವುದಿಲ್ಲ. ಮುರ್ಕೇತಿ ಪರಿಸರದಲ್ಲಿ 40 ಸಾವಿರಕ್ಕೂ ಅಕ ಬಿಲ್ ಪಾವತಿಗೆ ಬಾಕಿ ಇದೆ. ಎ.26 ರಿಂದಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಮತ್ತು ಮುರ್ಕೇತಿ ಪರಿಸರದಲ್ಲಿ ವಾಟರ್ ಮೆನ್ ನಜೀರ್ ಮೇಲೆ ಹಲ್ಲೆ ನಡೆಸಿರುವ ವಿರುದ್ಧ ದೂರು ನೀಡಲು ಪಂಚಾಯತ್ ತೀರ್ಮಾನಿಸಿತು.

ಮುರ್ಕೇತಿ ಪರಿಸರದ ನಾಗನಮಜಲಿನಲ್ಲಿ ಮೂರು ವರ್ಷದ ಹಿಂದೆ ಜಿ.ಪಂ ವತಿಯಿಂದ ಜಾಕ್‌ವೆಲ್ ನಿರ್ಮಾಣ ಕಾರ್ಯ ಇನ್ನೂ ಅಪೂರ್ಣ ಸ್ಥಿತಿಯಲ್ಲಿದೆ. ಎ.30 ರೊಳಗೆ ಇದನ್ನು ಪೂರ್ಣಗೊಳಿಸದಿದ್ದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನ ನಿರತರು ಆಗ್ರಹಿಸಿದಾಗ, ಅದು ಜಿ.ಪಂ ವ್ಯಾಪ್ತಿಯಲ್ಲಿ ಬಗೆಹರಿಸಬೇಕಾದ ಸಮಸ್ಯೆ. ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ನೀವು ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಗ್ರಾಮದ ಸದಸ್ಯರ ನೆಲೆಯಲ್ಲಿ ನಾವು ಬೆಂಬಲ ನೀಡುವುದಾಗಿ ಉಪಾಧ್ಯಕ್ಷ ಸುನಿಲ್ ರೈ ಹೇಳಿದರು. ಇದಕ್ಕೆ ಪ್ರತಿಭಟನ ನಿರತರು ಒಪ್ಪಿಗೆ ಸೂಚಿಸಿದರು.

ಪ್ರತಿಭಟನೆಯಲ್ಲಿ ಮೋನಪ್ಪ, ಮಹಮ್ಮದ್, ಸಂಜೀವ ಪೂಜಾರಿ, ರವಿ ಪೂಜಾರಿ, ಶ್ರೀಧರ, ಗಂಗಾಧರ, ದಿನೇಶ, ಮೋನಪ್ಪ, ಕುಸುಮಾ, ಶೀಲಾ, ಗೌತಮಿ, ಜಯಂತಿ, ಅಸ್ಮಾ. ಜಮೀಳಾ ಮೊದಲಾದವರು ಭಾಗವಹಿಸಿದ್ದರು. ಬೆಳ್ಳಾರೆ ಹೊರಠಾಣಾ ಸಿಬಂದಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X