Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ವಾಣಿಜ್ಯ ಬೆಳೆಯಾಗಿ ಗೇರು...

ಪುತ್ತೂರು: ವಾಣಿಜ್ಯ ಬೆಳೆಯಾಗಿ ಗೇರು ಮತ್ತು ಕರಿಮೆಣಸು ಹೆಚ್ಚು ಲಾಭದಾಯಕ ಕೃಷಿಯಾಗಿದೆ-ಸುರೇಂದ್ರ ಹೆಗ್ಡೆ

ಕಡಮಜಲು ಸ್ವೇದ ಬಿಂದು ಗೇರು ತೋಟದಲ್ಲಿ ಗೇರು, ಕರಿಮೆಣಸು ಕೃಷಿ ಮಾಹಿತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ26 April 2016 4:17 PM IST
share
ಪುತ್ತೂರು: ವಾಣಿಜ್ಯ ಬೆಳೆಯಾಗಿ ಗೇರು ಮತ್ತು ಕರಿಮೆಣಸು ಹೆಚ್ಚು ಲಾಭದಾಯಕ ಕೃಷಿಯಾಗಿದೆ-ಸುರೇಂದ್ರ ಹೆಗ್ಡೆ

ಪುತ್ತೂರು: ಗೇರು ಬೆಳೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ ತರುವಂತಹ ಒಂದು ವಾಣಿಜ್ಯ ಬೆಳೆಯಾಗಿದೆ. ಗೇರು ಮತ್ತು ಕರಿಮೆಣಸು ಬೆಳೆಯನ್ನು ರೈತ ವಾಣಿಜ್ಯ ಬೆಳೆಯಾಗಿ ಬೆಳೆದರೆ ಹೆಚ್ಚು ಲಾಭವನ್ನು ಪಡೆಯಬಹುದು. ಈಗಾಗಲೇ ಬ್ಯಾಂಕ್ ಕೂಡ ಪ್ರೋತ್ಸಾಹ ರೂಪದಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತಿದೆ.ಭಾರತದಿಂದ ಅತ್ಯಂತ ಹೆಚ್ಚು ಗೇರು ಉತ್ಪನ್ನ ಹೊರ ದೇಶಗಳಿಗೆ ರಫ್ತು ಆಗುತ್ತಿದೆ ಅದೇ ರೀತಿ ಕರಿಮೆಣಸು ಉತ್ಪನ್ನಗಳ ರಫ್ತಿನಲ್ಲಿ ಭಾರತ 3 ನೇ ಸ್ಥಾನದಲ್ಲಿದೆ. ರೈತರು ತಾಂತ್ರಿಕ ವಿಧಾನಗಳನ್ನು ಅಳವಡಿಸಿಕೊಂಡು ಕೃಷಿ ಮಾಡುವ ಮೂಲಕ ಹೆಚ್ಚು ಲಾಭವನ್ನು ಪಡೆಯಬಹುದು ಎಂದು ವಿಜಯ ಬ್ಯಾಂಕ್ ಮಂಗಳೂರು ವಲಯ ಕಛೇರಿಯ ಉಪ ಮಹಾಪ್ರಬಂಧಕ ಸುರೇಂದ್ರ ಹೆಗ್ಡೆ ಹೇಳಿದರು.

ಅವರು ಎ.26 ರಂದು ಕೆದಂಬಾಡಿ ಗ್ರಾಮದ ಕಡಮಜಲು ಸ್ವೇದ ಬಿಂದು ಗೇರು ತೋಟದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಬೆಳ್ಳಿ ಹಬ್ಬದ ಆಚರಣೆಯ ಅಂಗವಾಗಿ ಆಯೋಜನೆ ಮಾಡಿದ್ದ ಗೇರು ಮತ್ತು ಕರಿಮೆಣಸು ಕೃಷಿ ಮಾಹಿತಿ ಕಾರ್ಯಾಗಾರವನ್ನು ಗೇರು ಮತ್ತು ಕರಿಮೆಣಸಿನ ಗಿಡಕ್ಕೆ ನೀರು ಉಣಿಸುವ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದರು.

ವೈಜ್ಞಾನಿಕ ಗೇರು ಕೃಷಿಕ, ಸ್ವೇದ ಬಿಂದು ಗೇರು ತೋಟದ ಮಾಲೀಕ ಕಡಮಜಲು ಸುಭಾಷ್ ರೈ ಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ ಹೇಮನಾಥ ಶೆಟ್ಟಿ, ತಿಂಗಳಾಡಿ ಪಂಚಮಿ ಕ್ಯಾಶ್ಯೂ ಎಕ್ಸ್‌ಪೋರ್ಟ್‌ನ ಮಾಲಕ ಮಿತ್ರಂಪಾಡಿ ಪುರಂದರ ರೈ, ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ತಿಂಗಳಾಡಿ, ವಿ.ಆರ್.ಡಿ.ಎಫ್ ಮಂಗಳೂರು ಇದರ ಮುಖ್ಯ ಪ್ರಬಂಧಕ ಉದಯ್ ಹೆಗಡೆ, ಕೆಯ್ಯೂರು ಗ್ರಾ.ಪಂ ಸದಸ್ಯ, ಪ್ರಗತಿಪರ ಗೇರು ಕೃಷಿಕ ಎ.ಕೆ ಜಯರಾಮ ರೈ, ವಿ.ಆರ್.ಡಿ.ಎಫ್ ಮಂಗಳೂರು ಇದರ ಉಪಾಧ್ಯಕ್ಷ ಪ್ರೇಮನಾಥ ಆಳ್ವ, ಕುಂಬ್ರ ವಿಜಯ ಬ್ಯಾಂಕ್‌ನ ಶಾಖಾಧಿಕಾರಿ ಗೌತಮ್ ಎನ್.ಶರವು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು ಇದರ ನಿವೃತ್ತ ಹಿರಿಯ ವಿಜ್ಞಾನಿ ಡಾ.ಯದು ಕುಮಾರ್ ಮತ್ತು ಹಿರಿಯ ವಿಜ್ಞಾನಿ ಡಾ.ಗಂಗಾಧರ್ ನಾಯಕ್‌ರವರುಗಳಿಂದ ಗೇರು ಮತ್ತು ಕರಿಮೆಣಸು ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ನೂರಾರು ಮಂದಿ ರೈತರು ಮಾಹಿತಿಯ ಪ್ರಯೋಜನ ಪಡೆದುಕೊಂಡರು. ವಿ.ಆರ್.ಡಿ.ಎಫ್ ಮಂಗಳೂರು ಇದರ ಕಾರ್ಯದರ್ಶಿ ಬಿ.ರಾಜೇಂದ್ರ ರೈ ಸ್ವಾಗತಿಸಿದರು. ವಿ.ಆರ್.ಡಿ.ಎಫ್ ಮಂಗಳೂರು ಇದರ ಸಿ.ಇ.ಒ ಬಸಪ್ಪ ಮುಧೋಳ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಆಡಳಿತ ಮಂಡಳಿಯ ಸದಸ್ಯ ಜಯಪ್ರಕಾಶ ರೈ, ಈಶ್ವರಮಂಗಲ ಗ್ರಾಮ ಸಮಿತಿಯ ಅಧ್ಯಕ್ಷ ಡಾ. ಶ್ರೀ ಕುಮಾರ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X