Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು:ರಾತ್ರಿ ಸಂಚರಿಸುವ ಗ್ಯಾಸ್...

ಮಂಗಳೂರು:ರಾತ್ರಿ ಸಂಚರಿಸುವ ಗ್ಯಾಸ್ ಟ್ಯಾಂಕರ್‌ಗಳ ವಶಕ್ಕೆ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 April 2016 6:01 PM IST
share
ಮಂಗಳೂರು:ರಾತ್ರಿ ಸಂಚರಿಸುವ ಗ್ಯಾಸ್ ಟ್ಯಾಂಕರ್‌ಗಳ ವಶಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು,ಎ.26: ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಗ್ಯಾಸ್ ಟ್ಯಾಂಕರ್‌ಗಳ ಸಂಚಾರಕ್ಕೆ ನಿರ್ಬಂಧವಿದ್ದರೂ, ಗ್ಯಾಸ್ ಟ್ಯಾಂಕರ್‌ಗಳು ಸಂಚರಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತಿತಿದ್ದು, ಈ ನಿಟ್ಟಿನಲ್ಲಿ ನಿರ್ಬಂತ ಅವಯಲ್ಲಿ ಸಂಚರಿಸುವ ಟ್ಯಾಂಕರ್‌ಗಳನ್ನು ವಶಪಡಿಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ.

ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಈ ಸಂಬಂಧ ತೈಲಕಂಪೆನಿಗಳ ಅಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗದು. ಗ್ಯಾಸ್ ಟ್ಯಾಂಕರ್‌ಗಳ ಸಂಚಾರಕ್ಕೆ ಸಂಬಂಧಿಸಿ ಜಿಲ್ಲಾಡಳಿತವು ಹಲವು ಸೂಚನೆಗಳನ್ನು ನೀಡಿದ್ದರೂ,ಕಂಪೆನಿಗಳು ಪರಿಣಾಮಕಾರಿಯಾಗಿ ಪಾಲಿಸುತ್ತಿಲ್ಲ. ಹೀಗಾಗಿ ಜಿಲ್ಲೆಯ ಹಲವೆಡೆ ಆಗಿಂದಾಗ್ಗೆ ಗ್ಯಾಸ್ ಟ್ಯಾಂಕರ್‌ಗಳ ಅಪಘಾತ ಸಂಭವಿಸಿ, ಸಾರ್ವಜನಿಕರ ಜನಜೀವನಕ್ಕೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ರಾತ್ರಿ ವೇಳೆ ಗ್ಯಾಸ್ ಟ್ಯಾಂಕರ್‌ಗಳ ಸಂಚಾರ ಕಂಡುಬಂದರೆ ಅವುಗಳನ್ನು ವಶಪಡಿಸಿಕೊಳ್ಳುವಂತೆ ಪೊಲೀಸ್ ಮತ್ತು ಆರ್‌ಟಿಓ ಇಲಾಖೆಗೆ ಜಿಲ್ಲಾಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಾರ್ವಜನಿಕರು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಟ್ಯಾಂಕರ್‌ಗಳ ಸಂಚಾರ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಅವರು ತಿಳಿಸಿದರು.

ಗ್ಯಾಸ್ ಟ್ಯಾಂಕರ್‌ಗಳಲ್ಲಿ ತಲಾ ಇಬ್ಬರು ಡ್ರೆವರ್ ಹಾಗೂ ಒಬ್ಬ ಕ್ಲೀನರ್ ಇರುವುದು ಕಡ್ಡಾಯವಾಗಿದೆ. ಆದರೆ ಒಬ್ಬ ಡ್ರೆವರ್ ಮಾತ್ರ ಸಂಚರಿಸುತ್ತಿರುವುದು ಕಂಡುಬರುತ್ತಿದೆ. ತೈಲ ಕಂಪೆನಿಗಳಿಗೆ ಡ್ರೆವರ್‌ಗಳ ಮಾಹಿತಿಯೇ ಇರುವುದಿಲ್ಲ. ಸಾವಿರಾರು ಟ್ಯಾಂಕರ್‌ಗಳು ಆಗಮಿಸುತ್ತಿದ್ದೂ, ಸಮರ್ಪಕವಾದ ಸುರಕ್ಷತಾ ಕ್ರಮ ಅನುಸರಿಸುತ್ತಿಲ್ಲ. ಕೇವಲ ಕಂಪೆನಿಯ ಒಳಗೆ ಮಾತ್ರ ಸುರಕ್ಷತಾ ಕ್ರಮಗಳು ಸಾಕಾಗುವುದಿಲ್ಲ. ಟ್ಯಾಂಕರ್ ಸಂಚರಿಸುವ ರಸ್ತೆಯುದ್ದಕ್ಕೂ, ಸುರಕ್ಷತಾ ಕ್ರಮಗಳನ್ನು ಪಾಲನೆಯಾಗುವುದು ಖಾತ್ರಿ ವಹಿಸುವುದು ಗ್ಯಾಸ್ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದರು.

ಗ್ಯಾಸ್ ಟ್ಯಾಂಕರ್ ಅಪಘಾತವಾಗಿ, ಗ್ಯಾಸ್ ಸೋರಿಕೆ ಯಾವ ಪ್ರಮಾಣದಲ್ಲಿದ್ದರೂ, ಅದನ್ನು ನಿಯಂತ್ರಿಸಿ ತಡೆಗಟ್ಟುವ ಜವಾಬ್ದಾರಿ ಸಂಬಂಧಪಟ್ಟ ತೈಲ ಕಂಪೆನಿಗಳದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಗ್ಯಾಸ್ ಕಂಪೆನಿಗಳು ಸೇರಿ ಮಂಗಳೂರು-ಬೆಂಗಳೂರು ರಸ್ತೆ ಹಾಗೂ ಮಂಗಳೂರು-ಉಡುಪಿ ಹೆದ್ದಾರಿಗಳಲ್ಲಿ ತುರ್ತು ನಿರ್ವಹಣಾ ಕೇಂದ್ರ ಹಾಗೂ ಟ್ಯಾಂಕರ್‌ಗಳನ್ನು ಎತ್ತಲು ಕ್ರೇನನ್ನು ಇಡಬೇಕು. ಮುಂದಿನ ಒಂದುವಾರದೊಳಗೆ ಈ ಬಗ್ಗೆ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು.

ಗ್ಯಾಸ್ ಟ್ಯಾಂಕರ್‌ಗಳು ಅವಘಡಕ್ಕೀಡಾಗಿ, ಗ್ಯಾಸ್ ಸೋರಿಕೆಯಾಗಿ ಸಾರ್ವಜನಿಕ ಜೀವ, ಆಸ್ತಿ ಪಾಸಿಗೆ ಹಾನಿಯಾದಾಗ ಗ್ಯಾಸ್ ಕಂಪೆನಿಗಳು ಸಂತ್ರಸ್ತರಿಗೆ ಅಲ್ಪ ಪರಿಹಾರ ಕೊಟ್ಟು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ ಜಿಲ್ಲಾಧಿಕಾರಿಗಳು, ಮುಂದಿನ ದಿನಗಳಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಗ್ಯಾಸ್ ಟ್ಯಾಂಕರ್‌ಗಳ ಚಿಕ್ಕ ಅಪಘಾತವಾದರೂ ಕಠಿಣ ಕ್ರಮಗಳನ್ನು ಕೈಗೊಳ್ಳಲಾವುದು. ಗ್ಯಾಸ್ ಟ್ಯಾಂಕರ್‌ಗಳ ಮಾಲೀಕರು ಯಾರೇ ಆಗಿದ್ದರೂ, ಸಾರ್ವಜನಿಕ ರಸ್ತೆಗಳಲ್ಲಿ ಅವುಗಳ ಸುರಕ್ಷಿತ ಸಂಚಾರದ ಬಗ್ಗೆ ಗ್ಯಾಸ್ ಕಂಪೆನಿಗಳೇ ಜವಾಬ್ದಾರಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸ್ಪೀಡ್ ಗವರ್ನರ್ ಅಳವಡಿಸಲು ಕ್ರಮ

ಎಲ್‌ಪಿಜಿ ಟ್ಯಾಂಕರ್‌ಗಳ ಜಿಪಿಎಸ್ ವ್ಯವಸ್ಥೆಯನ್ನು ಪೊಲೀಸ್ ಕಂಟ್ರೋಲ್ ರೂಂಗೆ ಸಂಪರ್ಕಿಸಲಾಗುವುದು. ಅಲ್ಲದೇ, ಟ್ಯಾಂಕರ್‌ಗಳಿಗೆ ಕಡ್ಡಾಯವಾಗಿ ಸ್ಪೀಡ್ ಗವರ್ನರ್ ಅಳವಡಿಸಲಾಗುವುದು. ಈ ನಿಟ್ಟಿನಲ್ಲಿ ಗ್ಯಾಸ್ ಟ್ಯಾಂಕರ್‌ಗಳಿಗೆ ಏಪ್ರಿಲ್ ತಿಂಗಳ ಬಿಲ್ ಪಾವತಿಯನ್ನು ಸ್ಪೀಡ್ ಗವರ್ನರ್ ಅಳವಡಸಿದ ಬಳಿಕವಷ್ಟೇ ಪಾವತಿಸಲು ಎ.ಬಿ. ಇಬ್ರಾಹಿಂ ಅವರು ಗ್ಯಾಸ್ ಕಂಪೆನಿಗಳ ಅಕಾರಿಗಳಿಗೆ ಆದೇಶಿಸಿದರು.

ತೈಲ ಕಂಪೆನಿಗಳೊಂದಿಗೆ ಚರ್ಚಿಸಿ, ಕಲ್ಲಡ್ಕ ಮತ್ತು ಶಿರಾಡಿ ಮಧ್ಯೆ ಎರಡು ಕಡೆ ಟ್ಯಾಂಕರ್‌ಗಳ ಪಾರ್ಕಿಂಗ್ ಟರ್ಮಿನಲ್‌ಗೆ ಜಾಗ ಗುರುತಿಸುವಂತೆ ಆರ್‌ಟಿಓ ಅಕಾರಿಗಳಿಗೆ ಸೂಚಿಸಿದ ಜಿಲ್ಲಾಕಾರಿಗಳು, ಇದಕ್ಕಾಗಿ ಜಿಲ್ಲಾಡಳಿತ ಜಾಗ ನೀಡಲಿದೆ. ಗುಂಡ್ಯ-ಉಪ್ಪಿನಂಗಡಿ ಮಧ್ಯೆ ಅಗ್ನಿಶಾಮಕ ಠಾಣೆ ತೆರೆಯಲು ಜಾಗ ನೀಡಲಾಗುವುದು. ನಿಗದಿತ ಪಾರ್ಕಿಂಗ್ ಹೊರತುಪಡಿಸಿ, ರಸತೆ ಬದಿಗಳಲ್ಲಿ, ಜನವಸತಿ ಪ್ರದೇಶಗಳಲ್ಲಿ ಟ್ಯಾಂಕರ್‌ಗಳ ಪಾರ್ಕಿಂಗ್‌ಗೆ ನಿಷೇಧ ವಿಸಿ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇತ್ತೀಚೆಗೆ ಸೂರಿಕುಮೇರ್‌ನಲ್ಲಿ ನಡೆದ ಗ್ಯಾಸ್ ಟ್ಯಾಂಕರ್ ಅಪಘಾತದ ನಿರ್ವಹಣೆಗೆ ತಗುಲಿದ ಸಂಪೂರ್ಣ ಖರ್ಚುವೆಚ್ಚ, ಸಂತ್ರಸ್ತರಿಗೆ ಪರಿಹಾರವನ್ನು ಸಂಭಂಧಪಟ್ಟ ಗ್ಯಾಸ್ ಕಂಪೆನಿಯಿಂದಲೇ ವಸೂಲು ಮಾಡಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ. ಶರಣಪ್ಪಎಸ್.ಡಿ., ಅಪರ ಜಿಲ್ಲಾಕಾರಿ ಕುಮಾರ್, ಎಎಸ್‌ಪಿ ವಿನ್ಸಂಟ್ ಶಾಂತಕುಮಾರ್, ಕಾರ್ಖಾನೆ ಸುರಕ್ಷತಾ ಇಲಾಖೆ ಉಪನಿರ್ದೇಶಕ ನಂಜಪ್ಪ, ವಿವಿಧ ಗ್ಯಾಸ್, ತೈಲ ಕಂಪೆನಿಗಳ ಅಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X