Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭೀತಿಯ ವಾತಾವರಣದಿಂದ ಮುಕ್ತಿಗೊಳ್ಳುವುದು...

ಭೀತಿಯ ವಾತಾವರಣದಿಂದ ಮುಕ್ತಿಗೊಳ್ಳುವುದು ಅನಿವಾರ್ಯ: ಸಿಎಂ ಉಮ್ಮನ್ ಚಾಂಡಿ

ವಾರ್ತಾಭಾರತಿವಾರ್ತಾಭಾರತಿ26 April 2016 11:52 PM IST
share
ಭೀತಿಯ ವಾತಾವರಣದಿಂದ ಮುಕ್ತಿಗೊಳ್ಳುವುದು ಅನಿವಾರ್ಯ: ಸಿಎಂ ಉಮ್ಮನ್ ಚಾಂಡಿ


 ಕಾಸರಗೋಡು, ಎ.26: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಉಂಟಾಗಿರುವ ಭೀತಿಯ ವಾತಾವರಣದಿಂದ ಮುಕ್ತಿಗೊಳ್ಳಬೇಕಾದ ಅನಿವಾರ್ಯತೆ ಇದೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ಮಾತ್ರ ಧ್ವನಿ ಎತ್ತುತ್ತಿದೆ ಎಂದು ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದರು.
ಮಂಗಳವಾರ ಕಾಸರಗೋಡು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಜನಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
  ಸಿಪಿಎಂ ಪಕ್ಷವು ಕೇವಲ ಧ್ವನಿ ಎತ್ತಲು ಮಾತ್ರ ಹೊರತು ಕೋಮುವಾದಿ ಶಕ್ತಿಗಳನ್ನು ತಡೆಯಲು ಮುಂದೆ ಬರುತ್ತಿಲ್ಲ. ಬಿಹಾರದಲ್ಲಿ ನಡೆದ ಚುನಾವಣೆ ಯಲ್ಲಿ ಎಲ್ಲ ಜಾತ್ಯತೀತ ಪಕ್ಷಗಳು ಬಿಜೆಪಿ ವಿರುದ್ಧ ಹೋರಾಡಿದಾಗ ಸಿಪಿಎಂ ಬಿಜೆಪಿಯ ಗೆಲುವಿಗೆ ನಿಂತಿದೆ. ಇಲ್ಲಿ ಸಿಪಿಎಂ ಜಾತ್ಯತೀತ ಪಕ್ಷಗಳ ಒಕ್ಕೂಟದ ಅಭ್ಯರ್ಥಿ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಇದರಿಂದ ಸಣ್ಣ ಮತಗಳ ಅಂತರದಿಂದ ಹತ್ತರಷ್ಟು ಸ್ಥಾನಗಳನ್ನು ಒಕ್ಕೂಟ ಕಳೆದುಕೊಳ್ಳಬೇಕಾಯಿತು. ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ನೇತೃತ್ವದ ಪಕ್ಷಗಳು ಮುಂದಾಗುತ್ತಿರುವಾಗ ಸಿಪಿಎಂ ಪಕ್ಷವು ಬಿಜೆಪಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಅವರು ಆರೋಪಿಸಿದರು.
ಕಾಸರಗೋಡು ನಗರ ಮತ್ತು ಆಸುಪಾಸಿನ ಐದು ಗ್ರಾಪಂ ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚಿಸಲು ಎ.28ರಂದು ತಿರುವನಂತಪುರದಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದರು.
ಈ ಪ್ರದೇಶದ ಜನತೆ ಉಪ್ಪುನೀರನ್ನು ಸೇವಿಸಬೇಕಾದ ದುಸ್ಥಿತಿ ಉಂಟಾಗಿದೆ. ಪಯಸ್ವಿನಿ ಹೊಳೆಯಿಂದ ಬಾವಿಕ್ಕರೆ ತಾತ್ಕಾಲಿಕ ಅಣೆಕಟ್ಟು ನಿರ್ಮಿಸಿ ಪೂರೈಕೆಯಾಗುವ ನೀರು ಉಪ್ಪುಮಿಶ್ರಿತವಾಗಿದ್ದು, ವರ್ಷಗಳಿಂದ ಸಮಸ್ಯೆ ತಲೆದೋರುತ್ತಿದ್ದರೂ ಕ್ರಮ ತೆಗೆದುಕೊಳ್ಳದಿರುವುದರಿಂದ ಉಪ್ಪುನೀರನ್ನೇ ಅವಲಂಬಿಸಬೇಕಾಗಿದೆ. ಈ ಕುರಿತು ಪತ್ರಕರ್ತರು ಮುಖ್ಯಮಂತ್ರಿಯವರ ಗಮನಕ್ಕೆ ತಂದಾಗ ಗಂಭೀರವಾಗಿ ಸ್ವೀಕರಿಸಿದ ಅವರು ಎ.28ರಂದು ಸಭೆ ಕರೆದು ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಕೆ. ಶ್ರೀಧರನ್, ಬಿ. ಸುಬ್ಬಯ್ಯ ರೈ ಉಪಸ್ಥಿತರಿದ್ದರು.


ಎಡನೀರು ಮಠಕ್ಕೆ ಮುಖ್ಯಮಂತ್ರಿ ಭೇಟಿ  
 ಮಂಜೇಶ್ವರ, ಎ.26: ಕಾಸರಗೋಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ಏರ್ಪಡಿಸಿದ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲು ಕಾಸರಗೋಡಿಗೆ ಸೋಮವಾರ ತಡರಾತ್ರಿ ರೈಲಿನಲ್ಲಿ ಆಗಮಿಸಿದ ಮುಖ  ್ಯಮಂತ್ರಿ ಉಮ್ಮನ್ ಚಾಂಡಿ ಮಂಗಳವಾರ ಬೆಳಗ್ಗೆ ಐಕ್ಯರಂಗದ ಮುಖಂಡರೊಂದಿಗೆ ಎಡನೀರು ಮಠಕ್ಕೆ ಭೇಟಿ ನೀಡಿ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯ ಆಶೀರ್ವಾದ ಪಡೆದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಬಿ. ಸುಬ್ಬಯ್ಯ ರೈ, ಕೇಶವ ಪ್ರಸಾದ ನಾಣಿತ್ತಿಲು, ಬಾಲಕೃಷ್ಣ ವೊರ್ಕೋಡಲ್ಲಿ, ಕೆ. ನೀಲಕಂಠನ್, ಗೋವಿಂದನ್ ನಾಯರ್, ಪಿ.ಎ. ಅಶ್ರಫಲಿ, ಸಿ.ಕೆ. ಶ್ರೀಧರನ್, ಹಕೀಂ ಕುನಿಲ್, ಕರುಣ್ ಥಾಪ್, ಮಾಜಿ ಸಚಿವ ಸಿ.ಟಿ. ಅಹ್ಮದಾಲಿ, ಸಿ.ವಿ ಜೀಮ್ಸ್, ಹಕೀಂ ಕುನಿಲ್, ಕಾಸರಗೋಡು ವಿಧಾನ ಸಭಾ ಕ್ಷೇತ್ರದ ಐಕ್ಯರಂಗದ ಅಭ್ಯರ್ಥಿಎನ್.ಎ . ನೆಲ್ಲಿಕುನ್ನು , ಶಾಂತಾ ಟೀಚರ್ ಎಡನೀರು, ನಾಸಿರ್ ಮೊಗ್ರಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X