Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಕ್ಕಾ, ಮದೀನದಲ್ಲಿ ಸೌದಿಯೇತರರಿಗೆ...

ಮಕ್ಕಾ, ಮದೀನದಲ್ಲಿ ಸೌದಿಯೇತರರಿಗೆ ಸೊತ್ತಿನ ಮಾಲಕತ್ವವಿಲ್ಲ ಶೂರ ನಿರ್ಧಾರದಲ್ಲಿ ಬದಲಾವಣೆಯಿಲ್ಲ

ವಾರ್ತಾಭಾರತಿವಾರ್ತಾಭಾರತಿ27 April 2016 5:44 PM IST
share
ಮಕ್ಕಾ, ಮದೀನದಲ್ಲಿ ಸೌದಿಯೇತರರಿಗೆ ಸೊತ್ತಿನ ಮಾಲಕತ್ವವಿಲ್ಲ ಶೂರ ನಿರ್ಧಾರದಲ್ಲಿ ಬದಲಾವಣೆಯಿಲ್ಲ

ರಿಯಾದ್, ಎ. 27: ಮಕ್ಕಾ ಮತ್ತು ಮದೀನಗಳಲ್ಲಿ ಸೌದಿಯೇತರರು ಆಸ್ತಿ ಹೊಂದುವಂತಿಲ್ಲ ಹಾಗೂ ಹೂಡಿಕೆ ಮಾಡುವಂತಿಲ್ಲ ಎಂಬ ತನ್ನ ಹಿಂದಿನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಶೂರ ಮಂಡಳಿ ಸೋಮವಾರ ನಿರ್ಧರಿಸಿದೆ.

ಶೂರ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ಅದರ ಅಧ್ಯಕ್ಷ ಶೇಖ್ ಅಬ್ದುಲ್ಲಾ ಅಲ್-ಅಶೇಖ್ ವಹಿಸಿದರು ಎಂದು ಸೌದಿ ಪ್ರೆಸ್ ಏಜನ್ಸಿ ವರದಿ ಮಾಡಿದೆ. ಮಂಡಳಿಯ ಆರ್ಥಿಕ ಮತ್ತು ಇಂಧನ ಸಮಿತಿಯ ಅಧ್ಯಕ್ಷ ಅಬ್ದುರಹ್ಮಾನ್ ಅಲ್-ರಶೀದ್ ಮಂಡಿಸಿದ ವರದಿಯನ್ನು ಸಭೆ ಆಲಿಸಿತು. ಆಸ್ತಿ ಮತ್ತು ಹೂಡಿಕೆಗಳಿಗೆ ಸಂಬಂಧಿಸಿದ ಸೌದಿಯೇತರ ಮಾಲೀಕತ್ವ ಕಾನೂನಿನ 5ನೆ ವಿಧಿಯಲ್ಲಿರುವ ‘‘ಸೌದಿಯೇತರ’’ ಪದವನ್ನು ನಿರೂಪಿಸಬೇಕು ಎನ್ನುವ ಪ್ರಸ್ತಾಪ ವರದಿಯಲ್ಲಿತ್ತು ಎಂದು ಮಂಡಳಿಯ ಸಹಾಯಕ ಅಧ್ಯಕ್ಷ ಯಾಹ್ಯಾ ಅಲ್-ಸಮಾನ್ ತಿಳಿಸಿದರು.

ಶೂರ ಕಾನೂನಿನ 17ನೆ ವಿಧಿಗೆ ಅನುಗುಣವಾಗಿ ಮಂಡಳಿಯು ಪ್ರಸ್ತಾಪವನ್ನು ಪರಿಶೀಲಿಸಿತು ಎಂದು ಅಲ್-ಸಮಾನ್ ಹೇಳಿದರು. ಈ ಪದದ ವ್ಯಾಖ್ಯೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಹಿಂದೆ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧವಾಗಲು ಸಭೆ ನಿರ್ಧರಿಸಿತು. ಈ ನಿರ್ಧಾರದ ಪ್ರಕಾರ, ಸೌದಿ ಪೌರತ್ವ ಹೊಂದಿರದವರು ‘‘ಸೌದಿಯೇತರ’’ರಾಗುತ್ತಾರೆ. ಸೌದಿಯೇತರ ಕಂಪೆನಿಗಳು ಹಾಗೂ ಸೌದಿಯೇತರರು ಸ್ಥಾಪಿಸಿದ ಅಥವಾ ಸ್ಥಾಪನೆಯಲ್ಲಿ ಪಾಲ್ಗೊಂಡ ಅಥವಾ ಸೌದಿಯೇತರರು ಶೇರುಗಳನ್ನು ಹೊಂದಿರುವ ಸೌದಿ ಕಂಪೆನಿಗಳನ್ನು ‘ಸೌದಿಯೇತರ’ ಎಂಬುದಾಗಿ ಪರಿಗಣಿಸಲಾಗುವುದು ಎಂದರು. ಸೌದಿಯೇತರರಿಗೆ ಪಿತ್ರಾರ್ಜಿತವಾಗಿ ಬಂದಿದ್ದರೆ ಮಾತ್ರ ಆಸ್ತಿಯನ್ನು ಹೊಂದಬಹುದು ಎಂದು ಕಾನೂನಿನ 5ನೆ ವಿಧಿ ಹೇಳುತ್ತದೆ. ಆದಾಗ್ಯೂ, ಸೌದಿಯೇತರರು ಮಕ್ಕಾ ಮತ್ತು ಮದೀನಗಳಲ್ಲಿ ಎರಡು ವರ್ಷಗಳ ಅವಧಿಗೆ ಆಸ್ತಿಗಳನ್ನು ಲೀಸ್‌ನಲ್ಲಿ ಪಡೆಯಬಹುದು ಹಾಗೂ ಅದನ್ನು ಇಷ್ಟೇ ಅವಧಿಗೆ ನವೀಕರಿಸುತ್ತಾ ಹೋಗಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X