Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ...

ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ಮುಂದುವರಿಕೆ

ನಾಳೆ ಬಲಾಬಲ ಪರೀಕ್ಷೆ ಇಲ್ಲ

ವಾರ್ತಾಭಾರತಿವಾರ್ತಾಭಾರತಿ27 April 2016 9:08 PM IST
share
ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ಮುಂದುವರಿಕೆ

ಕೇಂದ್ರದ ಮುಂದೆ ಏಳು ಕಠಿಣ ಪ್ರಶ್ನೆಗಳನಿಟ್ಟ ಸರ್ವೋಚ್ಚ ನ್ಯಾಯಾಲಯ  

ಹೊಸದಿಲ್ಲಿ,ಎ.27: ರಾಷ್ಟ್ರಪತಿ ಆಡಳಿತವನ್ನು ರದ್ದುಗೊಳಿಸಿದ್ದ ನೈನಿತಾಲ್ ಉಚ್ಚ ನ್ಯಾಯಾಲಯದ ಆದೇಶಕ್ಕೆ ತಾನು ನೀಡಿದ್ದ ತಡೆಯಾಜ್ಞೆಯ ಅವಧಿಯನ್ನು ಬುಧವಾರ ಸರ್ವೋಚ್ಚ ನ್ಯಾಯಾಲಯವು ವಿಸ್ತರಿಸಿದೆ. ಇದರಿಂದಾಗಿ ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ಸದ್ಯಕ್ಕೆ ಮುಂದುವರಿಯಲಿದೆ ಮತ್ತು ಉಚ್ಚ ನ್ಯಾಯಾಲಯವು ಆದೇಶಿಸಿದ್ದಂತೆ ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ಬಲಾಬಲ ಪರೀಕ್ಷೆ ನಡೆಯುವುದಿಲ್ಲ.

ರಾಷ್ಟ್ರಪತಿ ಆಡಳಿತ ಹೇರಿಕೆಯನ್ನು ರದ್ದುಗೊಳಿಸಿರುವ ಉತ್ತರಾಖಂಡ ಉಚ್ಚ ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಮೇಲ್ಮನವಿಯ ವಿಚಾರಣೆಯನ್ನು ನಡೆಸುತ್ತಿರುವ ಸರ್ವೋಚ್ಚ ನ್ಯಾಯಾಲಯವು ಏಳು ಕಠಿಣ ಪ್ರಶ್ನೆಗಳನ್ನು ಮುಂದಿರಿಸಿತಲ್ಲದೆ, ಸರಕಾರವು ಉತ್ತರಿಸಲು ಬಯಸುವ ಇತರ ಪ್ರಶ್ನೆಗಳನ್ನು ಈ ಪಟ್ಟಿಗೆ ಸೇರಿಸಲು ಅಟಾರ್ನಿ ಜನರಲ್ ಅವರಿಗೆ ಸ್ಯಾತಂತ್ರವನ್ನು ನೀಡಿತು.

ಮುಂದಿನ ತಿಂಗಳು ನ್ಯಾಯಾಲಯಕ್ಕೆ ಬೇಸಿಗೆ ರಜೆ ಆರಂಭಗೊಳ್ಳುವ ಮುನ್ನ ತೀರ್ಪು ಪ್ರಕಟಗೊಳ್ಳಬಹುದು ಎಂಬ ಸುಳಿವುಗಳ ನಡುವೆಯೇ ನ್ಯಾಯಮೂರ್ತಿಗಳಾದ ದೀಪಕ ಮಿಶ್ರಾ ಮತ್ತು ಶಿವಕೀರ್ತಿ ಸಿಂಗ್ ಅವರನ್ನೊಳಗೊಂಡ ಪೀಠವು ಮುಂದಿನ ವಿಚಾರಣೆಯನ್ನು ಮೇ 3ಕ್ಕೆ ನಿಗದಿಗೊಳಿಸಿತು. ವಾದಿ-ಪ್ರತಿವಾದಿಗಳ ಒಪ್ಪಿಗೆಯ ಮೇರೆಗೆ ಉತ್ತರಾಖಂಡ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ತಡೆಯಾಜ್ಞೆಯನ್ನು ಮುಂದಿನ ಆದೇಶದವರೆಗೆ ತಾನು ವಿಸ್ತರಿಸುತ್ತಿರುವುದಾಗಿ ಪೀಠವು ಸ್ಪಷ್ಟಪಡಿಸಿತು.
ಹರೀಶ ರಾವತ್ ಪರ ಹಿರಿಯ ವಕೀಲ ಅಭಿಷೇಕ ಮನು ಸಿಂಘ್ವಿ ಅವರು ಉಚ್ಚ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ಇನ್ನೂ ಕೆಲವು ದಿನಗಳ ಕಾಲ ಮುಂದುವರಿಸುವ ಪೀಠದ ನಿಲುವನ್ನು ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

 ಪ್ರಸಕ್ತ ಸ್ಥಿತಿಗೆ ಅಂತಿಮವಾಗಿ ಸದನದಲ್ಲಿ ಬಲಾಬಲ ಪರೀಕ್ಷೆಯೇ ಉತ್ತರವಾಗುವ ಸಾಧ್ಯತೆಯಿದೆ ಎಂದು ವಿಚಾರಣೆ ವೇಳೆ ಹೇಳಿದ ಪೀಠವು, ತಾನು ಮುಂದಿಟ್ಟಿರುವ ಪ್ರಶ್ನೆಗಳು ಮತ್ತು ಸಲಹೆಗಳ ಬಗ್ಗೆ ಆಲೋಚಿಸುವಂತೆ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಅವರಿಗೆ ಸೂಚಿಸಿತು. ವಿಷಯವು ತನ್ನದೇ ಆದ ಗಂಭೀರತೆಯನ್ನು ಹೊಂದಿದೆ ಮತ್ತು ಅಂತಿಮವಾಗಿ ಇಂತಹ ಪ್ರಕರಣದಲ್ಲಿ ಮೇಲ್ನೋಟಕ್ಕೆ ನಾವು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ರಾಷ್ಟ್ರಪತಿ ಆಡಳಿತ ಹೇರಿಕೆಗೆ ಅರ್ಥವಿಲ್ಲ ಎಂದು ನಾವು ಪರಿಗಣಿಸಿದರೆ ಸದನದಲ್ಲಿ ಬಲಾಬಲ ಪರೀಕ್ಷೆಗೆ ನಾವು ಆದೇಶಿಸಬೇಕಾಗುತ್ತದೆ. ಆದ್ದರಿಂದ ಸಾಂವಿಧಾನಿಕ ಪರಿಕಲ್ಪನೆಯಾಗಿ,ನಾವು ನಿಜಕ್ಕೂ ನಮ್ಮ ಆದೇಶವನ್ನು ತೆರವುಗೊಳಿಸದಿದ್ದರೆ ನಾವು ನಮ್ಮ ಆದೇಶವನ್ನು ಪರಿಷ್ಕರಿಸಬೇಕಾಗುತ್ತದೆ ಮತ್ತು ಬಲಾಬಲ ಪರೀಕ್ಷೆಗೆ ಸೂಚಿಸಬೇಕಾಗುತ್ತದೆ. ಈ ಬಗ್ಗೆ ಯೋಚಿಸಿ ಎಂದು ಪೀಠವು ಹೇಳಿತು. ಈ ಬಗ್ಗೆ ತಾನು ಆಲೋಚಿಸಿ ನ್ಯಾಯಾಲಯಕ್ಕೆ ತಿಳಿಸುವುದಾಗಿ ರೋಹಟ್ಗಿ ಹೇಳಿದರು. ಇದು ತುರ್ತಿನ ಪರಿಸ್ಥಿತಿಯಾಗಿದೆ ಎಂದೂ ನ್ಯಾಯಾಲಯವು ಹೇಳಿತು.ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದ ರೋಹಟ್ಗಿ ಅವರು,ರಾಷ್ಟ್ರಪತಿ ಆಡಳಿತವು ಮೇ 27ರವರೆಗೆ ಎರಡು ತಿಂಗಳು ಊರ್ಜಿತದಲ್ಲಿರುತ್ತದೆ ಮತ್ತು ಅದನ್ನು ನ್ಯಾಯಾಲಯವು ಎತ್ತಿ ಹಿಡಿದರೆ ಬಲಾಬಲ ಪರೀಕ್ಷೆ ನಡೆಸುವುದು ಸರಕಾರದ ವಿವೇಚನಾಧಿಕಾರವಾಗಿರುತ್ತದೆ. ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿದರೆ ಆಗ ಕೇಂದ್ರದ ಆಳ್ವಿಕೆ ಇರುವುದಿಲ್ಲ ಮತ್ತು ಅಂತಹ ಸಂದರ್ಭದಲ್ಲಿ ಸದನದಲ್ಲಿ ಬಲಾಬಲ ಪರೀಕ್ಷೆಗೆ ಕರೆ ನೀಡುವಂತೆ ರಾಜ್ಯಪಾಲರಿಗೆ ನಿರ್ದೇಶವಿರುತ್ತದೆ ಎಂದು ಹೇಳಿದರು. ಈ ವಿಷಯದಲ್ಲಿ ತನ್ನ ಅಭಿಪ್ರಾಯಗಳನ್ನು ನ್ಯಾಯಾಲಯದ ಮುಂದಿರಿಸಲು ಅವಕಾಶ ನೀಡಬೇಕು ಎಂಬ ಉತ್ತರಾಖಂಡ ಮುಖ್ಯ ಕಾರ್ಯದರ್ಶಿಗಳ ಮನವಿಯ ಕುರಿತಂತೆ ಪೀಠವು,ಅವರೇನು ಮಾಡುತ್ತಾರೆ? ಅವರಿಗೂ ಈ ವಿಷಯಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಯಾವ ಬಗೆಯ ಪ್ರಮಾಣಪತ್ರ ಸಲ್ಲಿಸಲಿದ್ದಾರೆ ಎಂದು ಕುಟುಕಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X