Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಹಿಂಗಾರು ಹಂಗಾಮು’ 2.16 ಲಕ್ಷ ಹೆಕ್ಟೇರ್...

‘ಹಿಂಗಾರು ಹಂಗಾಮು’ 2.16 ಲಕ್ಷ ಹೆಕ್ಟೇರ್ ಬೆಳೆ ಹಾನಿ

ಗದಗ ಜಿಲ್ಲಾ ಪ್ರಗತಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ27 April 2016 11:20 PM IST
share
‘ಹಿಂಗಾರು ಹಂಗಾಮು’ 2.16 ಲಕ್ಷ ಹೆಕ್ಟೇರ್ ಬೆಳೆ ಹಾನಿ

ಗದಗ, ಎ.27: 2015-16ನೆ ಸಾಲಿನ ಮುಂಗಾರಿನಲ್ಲಿ ಸರಾಸರಿ ಶೇ.36 ಹಾಗೂ ಹಿಂಗಾರಿನಲ್ಲಿ ಸರಾಸರಿ ಶೇ.48ರಷ್ಟು ಮಳೆ ಕೊರತೆಯಿಂದ ಮುಂಗಾರಿನಲ್ಲಿ ಬಿತ್ತನೆಯಾಗಿದ್ದ 1.69 ಲಕ್ಷ ಹೆಕ್ಟೆರ್ ಪೈಕಿ 1.52 ಲಕ್ಷ ಹೆಕ್ಟೆರ್ ಹಾಗೂ ಹಿಂಗಾರಿನಲ್ಲಿ ಬಿತ್ತನೆಯಾಗಿದ್ದ 2.91 ಲಕ್ಷ ಹೆಕ್ಟೆರ್ ಪೈಕಿ 2.16 ಲಕ್ಷ ಹೆಕ್ಟೆರ್ ಬೆಳೆಹಾನಿಯಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ಒದಗಿಸಿದ್ದಾರೆ.
ಬುಧವಾರ ಗದಗ ಜಿಲ್ಲೆಯ ಲಕ್ಕುಂಡಿ, ತಿಮ್ಮಾಪುರ, ಮಾಗಡಿ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಂಡಿರುವ ಕುರಿತು ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ಆನಂತರ ಗದಗ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಇನ್ಪುಟ್ ಸಬ್ಸಿಡಿ ವಿತರಣೆಗಾಗಿ 2015-16ನೆ ಸಾಲಿನಲ್ಲಿ ಬಿಡುಗಡೆಯಾಗಿದ್ದ 67.81 ಕೋಟಿ ರೂ.ಗಳನ್ನು 1.53 ಲಕ್ಷ ರೈತರಿಗೆ ವಿತರಿಸಲಾಗಿದೆ. ಕೋಲಾರ ಮತ್ತು ವಿಜಯಪುರ ಜಿಲ್ಲೆಗಳಿಂದ 12.87 ಕೋಟಿ ರೂ.ಬಿಡುಗಡೆ ಮಾಡಿದ್ದು, ಕೂಡಲೇ ರೈತರಿಗೆ ಪರಿಹಾರ ವಿತರಿಸಿ ಬಳಕೆ ಪ್ರಮಾಣ ಪತ್ರವನ್ನು ಸರಕಾರಕ್ಕೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.
ತುರ್ತು ಕುಡಿಯುವ ನೀರು ಪೂರೈಕೆಗಾಗಿ ಜಿಲ್ಲೆಗೆ 11.40 ಕೋಟಿ ರೂ.ಬಿಡುಗಡೆ ಮಾಡಿದ್ದು, 2.97 ಕೋಟಿ ರೂ.ವೆಚ್ಚ ಮಾಡಲಾಗಿದೆ. ಎ.1ರ ನಂತರ 5 ಕೋಟಿ ರೂ.ಗಳನ್ನು ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ನಿಧಿಯಿಂದ ಬಿಡುಗಡೆ ಮಾಡಲಾಗಿದೆ. ಈ ಅನುದಾನವನ್ನು ತುರ್ತಾಗಿ ಕುಡಿಯುವ ನೀರು, ಮೇವು, ಗೋಶಾಲೆ ಸ್ಥಾಪನೆ ಉದ್ದೇಶಕ್ಕಾಗಿ ಬಳಕೆ ಮಾಡಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವಂತೆ ಮುಖ್ಯಮಂತ್ರಿ ಜಿಲ್ಲಾಡಳಿತಕ್ಕೆ ಆದೇಶಿಸಿದರು.
ಉದ್ಯೋಗ ಖಾತ್ರಿ ಯೋಜನೆಯಡಿ 2016-17ನೆ ಸಾಲಿನಲ್ಲಿ 64.46 ಕೋಟಿ ರೂ.ಮೊತ್ತದ 16.29ಲಕ್ಷ ಮಾನವ ದಿನಗಳ ಸೃಜನೆ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಅವಲಂಬಿತವಾಗಿರುವ 51 ಕೆರೆಗಳ ಹೂಳೆತ್ತಿ, ಮುಂದಿನ ದಿನಗಳಲ್ಲಿ ನೀರು ತುಂಬಿಸುವ ಮಾರ್ಗೋಪಾಯಗಳನ್ನು ಕಂಡುಕೊಳ್ಳುವಂತೆ ಮುಖ್ಯಮಂತ್ರಿ ಕಟ್ಟಪ್ಪಣೆ ಮಾಡಿದರು.
ಮೇವು ಸಂಗ್ರಹಣೆಗೆ ಹೆಚ್ಚು ಒತ್ತು ನೀಡುವಂತೆ ಹಾಗೂ ಮುಂದಿನ ದಿನಗಳಲ್ಲಿ ಆವಶ್ಯಕತೆಗೆ ಅನುಗುಣವಾಗಿ ಮೇವು ಬ್ಯಾಂಕುಗಳ ಸಂಖ್ಯೆ ಹೆಚ್ಚಿಸಲು ಮತ್ತು ಗೋಶಾಲೆಗಳನ್ನು, ನೀರು, ನೆರಳು, ಔಷಧಿ ಮತ್ತು ಮೇವಿನೊಂದಿಗೆ ಸ್ಥಾಪಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.
ಜಿಲ್ಲೆಯ ಮಹತ್ವದ ಕೆರೆಗಳ ಹೂಳೆತ್ತಲೂ ಕ್ರಮವಹಿಸುವಂತೆ ಹಾಗೂ ಬತ್ತಿ ಹೋಗಿರುವ ಕೊಳವೆ ಬಾವಿಗಳ ಪುನಶ್ಚೇತನಕ್ಕಾಗಿ ಅಗತ್ಯವಿರುವ ಮಾರ್ಗೋಪಾಯ ಗಳನ್ನು ಅಳವಡಿಸಿಕೊಂಡು ಮುಂದಿನ ದಿನಗಳಲ್ಲಿ ಶಾಶ್ವತ ಪರ್ಯಾಯ ನೀರಿನ ಮೂಲಗಳನ್ನು ರೂಪಿಸಿಕೊಳ್ಳುವಂತೆ ಸಭೆಯಲ್ಲಿ ಸೂಚನೆ ನೀಡಲಾಯಿತು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಚಾಲ್ತಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣ ಗೊಳಿಸಬೇಕು. ಬರ ಪರಿಸ್ಥಿತಿ ನಿರ್ವಹಣೆಗಾಗಿ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರನ್ನು ಬೆಳಗ್ಗೆಯಿಂದ ಸಂಜೆವರೆಗೆ ಹಳ್ಳಿಗಳಲ್ಲೆ ಇದ್ದು, ಸಮಸ್ಯೆಗಳಿಗೆ ಕೂಡಲೆ ಸ್ಪಂದಿಸುವಂತೆ ಸುತ್ತೋಲೆ ಹೊರಡಿಸಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.
ಖಾಸಗಿ ಕೊಳವೆ ಬಾವಿಗಳು ವಶಕ್ಕೆ: ಅವಶ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ವಶಕ್ಕೆ ಪಡೆದು ಮಾಲಕರಿಗೆ ಸೂಕ್ತ ಪರಹಾರ ನೀಡಿ ನೀರು ಪೂರೈಸಲು ಕ್ರಮವಹಿಸುವಂತೆ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಶಾಸಕರ ಉಪಸ್ಥಿತಿಯಲ್ಲಿ ಎಲ್ಲ ಪಿಡಿಒಗಳೊಂದಿಗೆ ವಾರಕ್ಕೊಮ್ಮೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸುವಂತೆ ಹಾಗೂ ಪಿಡಿಒಗಳಿಗೆ ಹಳ್ಳಿಯಲ್ಲಿ ಸಂಜೆವರೆಗೆ ಇದ್ದು, ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ಕ್ರಮವಹಿಸಲು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

‘ಬರ’ ಖುದ್ದು ಪರಿಶೀಲಿಸದ ಅಧಿಕಾರಿಗಳ ಅಮಾನತು
ಕೊಪ್ಪಳ, ಎ. 27: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆಹಾನಿ ಪ್ರದೇಶಗಳಿಗೆ ತೆರಳಿ ಖುದ್ದ ಸಮೀಕ್ಷೆ ನಡೆಸದೆ, ಮಾಹಿತಿ ಸಂಗ್ರಹಿಸುವ ಮೂಲಕ ಕರ್ತವ್ಯ ಲೋಪವೆಸಗಿದ್ದ ಇಬ್ಬರು ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ಬುಧವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಯಲಬುರ್ಗಾ ತಹಶೀಲ್ದಾರ್ ಶಿವಲಿಂಗಪ್ಪ ಪಟ್ಟದಕಲ್ ಹಾಗೂ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಕಾಂತ್ ಕೋಟಿಮನಿ ಬೆಳಹಾನಿ ಬಗ್ಗೆ ಖುದ್ದು ಪರಿಶೀಲಿಸಿ ವರದಿ ನೀಡದ ಹಿನ್ನೆಲೆಯಲ್ಲಿ ಅಮಾನತುಗೊಳಿಸುವಂತೆ ಆದೇಶ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X