Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೋಚನೀಯ ಸ್ಥಿತಿಯಲ್ಲಿ ವಲಸಿಗರು

ಶೋಚನೀಯ ಸ್ಥಿತಿಯಲ್ಲಿ ವಲಸಿಗರು

ನಗರದತ್ತ ವಲಸಿಗರ ಚಿತ್ತ

ವಾರ್ತಾಭಾರತಿವಾರ್ತಾಭಾರತಿ27 April 2016 11:23 PM IST
share
ಶೋಚನೀಯ ಸ್ಥಿತಿಯಲ್ಲಿ ವಲಸಿಗರು

- ಮಂಜುನಾಥ, ದಾಸನಪುರ
ಬೆಂಗಳೂರು, ಎ.27: ನಗರದಕ್ಕೆ ಉದ್ಯೋಗವನ್ನರಸಿ ಬರುವ ಉತ್ತರ ಕರ್ನಾಟಕದ ವಲಸಿಗರ ಪರಿಸ್ಥಿತಿ ತೀರ ಶೋಚನೀಯವಾಗಿದ್ದು, ಹೊಟ್ಟೆತುಂಬ ಕುಡಿಯಲು ನೀರು ಸಹ ಸಿಗದಂತಹ ದಿಕ್ಕೆಟ್ಟ ಸ್ಥಿತಿಯನ್ನು ಎದುರಿಸುತ್ತಿದ್ದಾರೆ.
ಪ್ರತಿದಿನ ಉತ್ತರ ಕರ್ನಾಟಕದಿಂದ ಸಾವಿರಾರು ಮಂದಿ ವಲಸಿಗರು ನಗರಕ್ಕೆ ಬರುವುದು ಹೊಸದೇನಲ್ಲ. ತಮ್ಮ ಊರು, ಬಂಧುಗಳನ್ನು ಬಿಟ್ಟು, ಕೇವಲ ದುಡಿಮೆಗಾಗಿ ನಗರಕ್ಕೆ ಬರುತ್ತಾರೆ. ಆದರೆ, ಇವರು ಉಳಿದುಕೊಳ್ಳಲು ಸೂಕ್ತವಾದ ಸ್ಥಳವಿಲ್ಲದೆ, ರಸ್ತೆ ಬದಿಯಲ್ಲಿ, ಸರಕಾರದ ಖಾಲಿ ಜಾಗದಲ್ಲಿ, ಬಸ್ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ಕವರ್‌ಗಳ ಆಶ್ರಯದಲ್ಲಿ ಬದುಕುತ್ತಿದ್ದಾರೆ.
ಹಳ್ಳಿಯಲ್ಲಿ ರೈತ, ಇಲ್ಲಿ ಕೂಲಿಯಾಳು: ನನ್ನ ಹೆಸರು ಭೀಮಪ್ಪ, ಬಿಜಾಪುರ ಜಿಲ್ಲೆಯವನು. ನಾನೇನು ಭಿಕಾರಿಯಲ್ಲ. ನಂಗೆ 5 ಎಕರೆ ಜಮೀನಿದೆ. ಹಿಂದಿನ ದಿನಗಳಲ್ಲಿ ಸಮಯಕ್ಕೆ ಸರಿಯಾಗಿ ಮಳೆಯಾಗುತ್ತಿತ್ತು. ಇದರಿಂದ ಬೆಳೆ ಬೆಳೆದು, ಕುಟುಂಬವನ್ನು ನಿರ್ವಹಿಸುತ್ತಿದ್ದೆ. ಈಗ ಮಳೆಯೂ ಇಲ್ಲ, ಬೆಳೆಯೂ ಇಲ್ಲ. ಇದರಿಂದ ಹೊಟ್ಟೆಪಾಡಿಗಾಗಿ ಇಲ್ಲಿಗೆ ಬರಬೇಕಾಯಿತು ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಬೆಂಗಳೂರಿನಲ್ಲಿ ಹೊಟ್ಟೆ ತುಂಬಿಸಿಕೊಳ್ಳುವುದಕ್ಕಾಗಿ ಏನಾದರು ಕೆಲಸ ಮಾಡಬಹುದು. ಆದರೆ, ವಾಸಿಸಲು ಮನೆಯಿಲ್ಲ. ಜೋಪಡಿಯಲ್ಲಿದ್ದೇವೆ. ಹೆಂಡತಿ ಮೂರು ಮಕ್ಕಳ ಜೊತೆ ವಾಸ ಮಾಡಲು ತೀರ ಕಷ್ಟವಾಗುತ್ತಿದೆ. ಹಲವು ಬಾರಿ ಜೀವನ ಸಾಕಪ್ಪಾ ಅನಿಸಿದರು, ಮಕ್ಕಳಿಗಾಗಿ ಜೀವನ ದೂಡುತ್ತಿದ್ದೇವೆ ಎಂದು ಬದುಕಿನ ಕಷ್ಟವನ್ನು ತೋಡಿಕೊಂಡರು.
ನೀರಿಗಾರಿ ಪರದಾಟವಾಗಿದೆ: ಕೆಲಸ ಮಾಡಿ, ಹೊಟ್ಟೆ ಹೊರೆಯುವುದಕ್ಕಾಗಿ ಬೆಂಗಳೂರಿಗೆ ಬಂದಾಗಿದೆ. ಇಲ್ಲಿ ದಿನಕ್ಕೊಂದು ಕೆಲಸ ಮಾಡಿ, ದಿನಕ್ಕೆ ನೂರು ಇಲ್ಲವೆ ಇನ್ನೂರು ಸಂಪಾದನೆ ಮಾಡ್ತೀವಿ, ಆದರೆ, ಕುಡಿಯಲು ನೀರೇ ಇಲ್ಲವಾಗಿದೆ. ನಾವು ಇರುವುದು ಇಲ್ಲಿನ ದೀಪಾಂಜಲಿ ನಗರದಲ್ಲಿ. ಎರಡು-ಮೂರು ದಿನಕ್ಕೆ ಒಮ್ಮೆ ನೀರು ಬಿಡಲಾಗುತ್ತದೆ. ಅದು ಕೇವಲ ನಾಲ್ಕು ಕೊಡ ಮಾತ್ರ. ಇಷ್ಟು ನೀರಲ್ಲಿ ಅಡುಗೆ ಮಾಡಲು, ಕುಡಿಯಲು ಸಾಧ್ಯವಿಲ್ಲ. ಸ್ನಾನವಂತೂ ದೂರದ ಮಾತಾಗಿದೆ ಎಂದು ಬಿಜಾಪುರ ಜಿಲ್ಲೆಯ ಲಕ್ಷ್ಮಮ್ಮ ತಿಳಿಸಿದರು.
ಬೆಳಗ್ಗೆಯಿಂದ ರಾತ್ರಿಯವರೆಗೂ ಬೆವರು ಸುರಿಸಿ ದುಡಿಯುವ ನಾವು ಹೊಟ್ಟೆ ತುಂಬ ಊಟ ಮಾಡಲು, ನೀರು ಕುಡಿಯಲು ಭಯವಾಗುತ್ತದೆ. ನಮಗೆ ಶೌಚಾಲಯ ವ್ಯವಸ್ಥೆಯಿಲ್ಲ. ಮೂತ್ರಕ್ಕೆ ಅವಸರವಾದರೆ ನಾವು ಪಡುವ ಕಷ್ಟ ಹೇಳತೀರದಾಗಿದೆ. ಆ ಸಂದರ್ಭಗಳಲ್ಲಿ ಬದುಕೇ ಸಾಕು ಎನಿಸುತ್ತದೆ ಎಂದು ತಮ್ಮ ನೋವುಗಳನ್ನು ಹಂಚಿಕೊಂಡರು.

ಬೇಸಿಗೆ ಸಂದರ್ಭದಲ್ಲಿ ವಲಸೆ ಬರುವುದು ಸಹಜವಾದ ಪ್ರಕ್ರಿಯೆ. ವಲಸೆಗಾರರಿಗೆ ಸೂಕ್ತವಾದ ಸೌಲಭ್ಯ ಕಲ್ಪಿಸುವುದು ಸರಕಾರದ ಜವಾಬ್ದಾರಿ. ಪ್ರಾಥಮಿಕವಾಗಿ ಶೆಲ್ಟರ್‌ಗಳನ್ನು ನಿರ್ಮಿಸುವುದರ ಮೂಲಕ ತಾತ್ಕಾಲಿಕ ವಸತಿಯನ್ನು ಕಲ್ಪಿಸಬೇಕು. ಶುದ್ದ ನೀರು ಒದಗಿಸಬೇಕು ಹಾಗೂ ಸರಕಾರವೆ ಅಗತ್ಯವಿರುವ ತಾತ್ಕಾಲಿಕ ಉದ್ಯೋಗವನ್ನು ಕಲ್ಪಿಸಬೇಕು.
-ಬಿ.ಟಿ.ವೆಂಕಟೇಶ್, ಹಿರಿಯ ವಕೀಲ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X