Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇನಲ್ಲಿ ಮಹಾರಾಷ್ಟ್ರದಲ್ಲಿ ಐಪಿಎಲ್...

ಮೇನಲ್ಲಿ ಮಹಾರಾಷ್ಟ್ರದಲ್ಲಿ ಐಪಿಎಲ್ ಪಂದ್ಯಗಳಿಲ್ಲ ಸುಪ್ರೀಂ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ27 April 2016 11:51 PM IST
share
ಮೇನಲ್ಲಿ ಮಹಾರಾಷ್ಟ್ರದಲ್ಲಿ ಐಪಿಎಲ್ ಪಂದ್ಯಗಳಿಲ್ಲ ಸುಪ್ರೀಂ ನಿರ್ದೇಶನ

ಹೊಸದಿಲ್ಲಿ, ಎ.27: ಮೇ 1ರಂದು ಪುಣೆಯಲ್ಲಿ ಒಂದು ಪಂದ್ಯವನ್ನು ಹೊರತುಪಡಿಸಿ, ಮಹಾರಾಷ್ಟ್ರದಲ್ಲಿ ಮೇ ತಿಂಗಳಲ್ಲಿ ಯಾವುದೇ ಐಪಿಎಲ್ ಪಂದ್ಯ ನಡೆಸುವಂತಿಲ್ಲವೆಂದು ಸುಪ್ರೀಂಕೋರ್ಟ್ ಇಂದು ನಿರ್ದೇಶನ ನೀಡಿದೆ.

ರಾಜ್ಯದಲ್ಲಿ ಹಲವು ದಶಕಗಳಲ್ಲೇ ಅತ್ಯಂತ ತೀವ್ರವಾದ ಬರ ಆವರಿಸಿರುವುದರಿಂದ ಪಂದ್ಯಗಳನ್ನು ರಾಜ್ಯದಿಂದ ಹೊರಗೆ ವರ್ಗಾಯಿಸಬೇಕೆಂಬ ಹಿಂದಿನ ತೀರ್ಪೊಂದನ್ನು ಅದು ಎತ್ತಿ ಹಿಡಿದಿದೆ.

ಪಂದ್ಯಗಳು ನಿಗದಿಯಾಗಿರುವ ಮಹಾರಾಷ್ಟ್ರದ ಮೂರು ನಗರಗಳಾದ ನಾಗಪುರ, ಪುಣೆ ಹಾಗೂ ಮುಂಬೈ ತೀವ್ರ ನೀರಿನ ಅಭಾವವನ್ನು ಎದುರಿಸುತ್ತಿವೆ. ಆದುದರಿಂದ ದೇಶೀಯ ಟಿ-20 ಪಂದ್ಯಗಳಿಗೆ ಪಿಚ್‌ಗಳನ್ನು ಸಿದ್ಧಗೊಳಿಸಲು ನೀರನ್ನು ಪೋಲು ಮಾಡಬಾರದೆಂದು ಇತ್ತೀಚೆಗೆ ಬಾಂಬೆ ಹೈಕೋರ್ಟ್ ಹೇಳಿತ್ತು.

ವಿವಿಧ ಕ್ರಿಕೆಟ್ ಮಂಡಳಿಗಳು ಸೇರಿದಂತೆ ಸಂಘಟಕರು ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಪಿಚ್ ನಿರ್ಮಾಣಕ್ಕೆ ತಾವು ಕುಡಿಯುವ ನೀರನ್ನು ಉಪಯೋಗಿಸುವುದಿಲ್ಲ. ಶುದ್ಧೀಕರಿಸಿದ ಚರಂಡಿ ನೀರನ್ನು ಬಳಸುತ್ತೇವೆಂದು ಅವರು ವಾದಿಸಿದ್ದರು. ಪಿಚ್‌ಗಳಿಗೆ ಬಳಸಿದ ನೀರಿಗೆ ಪರಿಹಾರವಾಗಿ ಬರಗಾಲ ಪೀಡಿತ ಪ್ರದೇಶಗಳಿಗೆ 60 ಲಕ್ಷ ಲೀಟರ್ ಶುದ್ಧೀಕರಿಸುವ ಕೊಳಚೆ ನೀರನ್ನು ಕೊಡುಗೆ ನೀಡುವೆವೆಂದು ಸಂಘಟಕರು ತಿಳಿಸಿದ್ದರು.

ಆದರೆ, ಸ್ಟೇಡಿಯಂಗಳಿಗೆ ಶುದ್ಧೀಕರಿಸಿದ ಕೊಳಚೆ ನೀರು ನೀಡುವ ವಿವಾದದಲ್ಲೇಕೆ ಸಿಲುಕ ಬೇಕು? ನೀರನ್ನು ವಿಂಗಡಿಸುವುದು ಹೇಗೆ? ಪಂದ್ಯಗಳಿಗೆ ಲಕ್ಷಾಂತರ ವೀಕ್ಷಕರು ಬರುತ್ತಾರೆ. ಅವರಿಗೆ ನೀರು ಕೊಡುವುದು ಎಲ್ಲಿಂದ ಎಂದು ಇಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳು ಪ್ರಶ್ನಿಸಿದರು.

ಸಂಘಟಕರು ಸುಮಾರು 12 ಪಂದ್ಯಗಳನ್ನು ರಾಜಸ್ಥಾನಕ್ಕೆ ಸ್ಥಳಾಂತರಿಸುವುದನ್ನೂ ಪರಿಶೀಲಿಸಿದ್ದರು. ಅದನ್ನು ಪ್ರಶ್ನಿಸಿ ಅಲ್ಲಿನ ನ್ಯಾಯಾಲಯವೊಂದರಲ್ಲಿ ದೂರು ದಾಖಲಾಗಿದೆ. ಮರುಭೂಮಿ ರಾಜ್ಯದಲ್ಲಿ ನೀರಿನ ತೀವ್ರ ಬಿಕ್ಕಟ್ಟಿದೆ. ಜೈಪುರದಂತಹ ನಗರಗಳನ್ನು ಭಾರೀ ಜನಪ್ರಿಯ ಕ್ರಿಕೆಟ್ ಟೂರ್ನಮೆಂಟ್‌ಗೆ ನಿಷೇಧಿತ ವಲಯಗಳೆಂದು ಘೋಷಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ. ರಾಜಸ್ಥಾನ ಹೈಕೋರ್ಟ್ ಮೇ 3ರಂದು ತೀರ್ಪು ಘೋಷಿಸುವೆನೆಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X