Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೈತರ ಸಭಾಭವನ, ಪ್ರವೇಶ ದ್ವಾರ ಜೂನ್...

ರೈತರ ಸಭಾಭವನ, ಪ್ರವೇಶ ದ್ವಾರ ಜೂನ್ ಪ್ರಥಮ ವಾರದಲ್ಲಿ ಉದ್ಘಾಟನೆ- ಪುತ್ತೂರು ಎಪಿಎಂಸಿ ಸಾಮಾನ್ಯ ಸಭೆಯಲ್ಲಿ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ28 April 2016 3:37 PM IST
share
ರೈತರ ಸಭಾಭವನ, ಪ್ರವೇಶ ದ್ವಾರ ಜೂನ್ ಪ್ರಥಮ ವಾರದಲ್ಲಿ ಉದ್ಘಾಟನೆ- ಪುತ್ತೂರು ಎಪಿಎಂಸಿ ಸಾಮಾನ್ಯ ಸಭೆಯಲ್ಲಿ ನಿರ್ಣಯ

ಪುತ್ತೂರು, ಎ. 28: ಎಪಿಎಂಸಿ ಪ್ರಾಂಗಣದಲ್ಲಿ ರೈತರಿಗಾಗಿ ನಿರ್ಮಾಣಗೊಂಡ ಸಭಾಭವನದ ಕಾಮಾಗಾರಿ ಶೇ.90ರಷ್ಟು ಪೂರ್ಣಗೊಂಡಿದ್ದು, ಜೊತೆಗೆ ಎಪಿಎಂಸಿ ಪ್ರವೇಶ ದ್ವಾರ, ಪ್ರಾಂಗಣಕ್ಕೆ ಡಾಮರೀಕರಣ ಪೂರ್ಣಗೊಂಡಿದೆ.

ಒಟ್ಟು ರೂ. 2.5 ಕೋಟಿ ವೆಚ್ಚದ ಈ ಕಾಮಗಾರಿಯನ್ನು ಎಪಿಎಂಸಿ ಸಚಿವರು ಉದ್ಘಾಟಿಸಬೇಕೆಂಬ ನಿಟ್ಟಿನಲ್ಲಿ ಜೂನ್ ತಿಂಗಳ ಪ್ರಥಮ ವಾರದಲ್ಲಿ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಎಪಿಎಂಸಿ ಅಧ್ಯಕ್ಷ ಕೃಷ್ಣ ಶೆಟ್ಟಿ ಹೇಳಿದರು.

ಎಪಿಎಂಸಿ ಸಾಮಾನ್ಯ ಸಭೆಯು ಗುರುವಾರ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ರೈತರಿಗಾಗಿ ನಿರ್ಮಾಣಗೊಂಡ ರೈತ ಭವನದಲ್ಲಿ ಬಾಕಿ ಇದ್ದ ವಿದ್ಯುತ್ ಸಂಬಂಧಿತ ಕಾಮಗಾರಿಗಳು ಮುಗಿದಿದೆ. ರೈತಭವನಕ್ಕೆ ಕಾಂಕ್ರೀಟ್ ರಸ್ತೆಯೂ ಆಗಿದೆ. ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಎಪಿಎಂಸಿ ಪ್ರವೇಶ ದ್ವಾರದ ಕಾಮಗಾರಿಯೂ ಮುಗಿದ್ದಿದ್ದು ಅದಕ್ಕೆ ಸ್ಟೀಲ್ ನೇಮ್‌ಪ್ಲೇಟ್ ಹಾಕುವ ಕೆಲಸ ನಡೆಯಲಿದ್ದು ಮುಂಭಾಗದ ಪ್ರವೇಶದ್ವಾರದ ಎದುರುಗಡೆಯ ವಿದ್ಯುತ್ ಪರಿವರ್ತಕವನ್ನು ಸ್ಥಳಾಂತರಿಸಬೇಕಾಗಿದೆ.

ಎಪಿಎಂಸಿ ಪ್ರಾಂಗಣದ ಒಳಗೆ ಡಾಮರೀಕರಣ ಮಾಡಲಾಗಿದೆ. ಇವೆಲ್ಲದರ ಉದ್ಘಾಟನ ಕಾರ್ಯಕ್ರಮಕ್ಕಾಗಿ ಸಭೆಯಲ್ಲಿ ಅಧ್ಯಕ್ಷರು ಪ್ರಸ್ತಾಪ ಮಾಡಿದರು. ಉದ್ಘಾಟನಾ ಕಾರ್ಯಕ್ರಮಕ್ಕೆ ಎಪಿಎಂಸಿ ಸಚಿವರನ್ನು ಆಹ್ವಾನಿಸುವ ಕುರಿತು ಶಾಸಕರ ಮೂಲಕ ಮಾತುಕತೆ ನಡೆಸುವ ಎಂದು ನಾಮನಿರ್ದೇಶಿತ ಸದಸ್ಯ ಮಹೇಶ್ ರೈ ಅಂಕೋತಿಮಾರ್ ಹೇಳಿದರಲ್ಲದೆ ಎಲ್ಲವೂ ಪ್ರೋಟೋಕಾಲ್ ಪ್ರಕಾರವೇ ನಡೆಯಲಿ ಎಂದರು.

ಜಿಲ್ಲಾಡಳಿತಲ್ಲಿ ಪ್ರಟೋಕಾಲ್ ಕುರಿತು ಮಾಹಿತಿ ಇದೆ. ಅವರ ಮಾರ್ಗದರ್ಶನಂತೆ ಆಮಂತ್ರಣ ತಯಾರಿಸುವ ಆದರೆ ಸಚಿವರಲ್ಲಿ ಮೊದಲು ಸಮಯ ಕೇಳಬೇಕು ಎಂದು ಹೇಳಿದ ಅಧ್ಯಕ್ಷರು ರೈತರ ಸಭಾಭವನಕ್ಕೆ ಆಸನಗಳ ವ್ಯವಸ್ಥೆ ಆಗಬೇಕಾಗಿದೆ ಎಂದರು.

2015-16ನೆ ಸಾಲಿನ ಆದಾಯದ ಮೇಲೆ ಶೇ.10 ರಷ್ಟು ಮೊತ್ತವನ್ನು ಅಡಮಾನ ಸಾಲ ಉಳಿತಾಯ ಖಾತೆಗೆ ವರ್ಗಾಯಿಸುವ, ಅಡಮಾನ ಸಾಲ ಹುಟ್ಟುವಳಿಗಳ ಇನ್ಸೂರೆನ್ಸ್‌ನ್ನು ಮುಂದಿನ ಒಂದು ವರ್ಷದ ಅವಧಿಗೆ ನವೀಕರಿಸುವ ಹಾಗೂ ಕಚೇರಿ ಉಪಯೋಗಕ್ಕೆ 10.ಕೆ.ವಿ. ಜನರೇಟರ್ ಖರೀದಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಉಪಾಧ್ಯಕ್ಷ ಕರುಣಾಕರ ಎಲಿಯ, ನಿರ್ದೇಶಕರಾದ ಪಿ.ಸೀತಾರಾಮ ಗೌಡ, ಗುರುನಾಥ ಗೌಡ ಪಿ ಯನ್, ಯಶೋಧರ ಕೆ. ಗೌಡ, ಪ್ರಮೋದ್ ಕೆ.ಎಸ್, ತ್ರಿವೇಣಿ ಕರುಣಾಕರ ಪೆರ್ವೋಡಿ, ಡಿ.ಸೋಮನಾಥ, ಅಬ್ದುಲ್ ಶಕೂರ್ ವಿ.ಹೆಚ್, ನಾಮನಿರ್ದೇಶಿತ ಸದಸ್ಯ ಎ.ಮಾಣಿಕ್ಯರಾಜ್ ಪಡಿವಾಳ್, ಮಹೇಶ್ ರೈ ಅಂಕೋತ್ತಿಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು.

ಲೆಕ್ಕಾಧಿಕಾರಿ ರಾಮಚಂದ್ರರವರು ಸಭೆ ನಡಾವಳಿ ಓದಿದರು. ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಹೆಚ್.ಕೆ.ಕೃಷ್ಣ ಮೂರ್ತಿ ಮಾಹಿತಿ ನೀಡಿದರು. ಸಭೆ ಮುಗಿದ ಬಳಿಕ ಕಾಮಗಾರಿ ಪೂರ್ಣಗೊಂಡ ನೂತನ ರೈತ ಸಭಾವನವನ್ನು ಸದಸ್ಯರು ಪರಿಶೀಲಿಸಿರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X