Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎರಡೇ ತಿಂಗಳಲ್ಲಿ 2 ಲಕ್ಷ ಚ.ಅಡಿ ನಿರ್ಮಾಣ...

ಎರಡೇ ತಿಂಗಳಲ್ಲಿ 2 ಲಕ್ಷ ಚ.ಅಡಿ ನಿರ್ಮಾಣ !

ಕೆಇಎಫ್ ಇನ್‌ಫ್ರಾ ಹೊಸ ಸಾಧನೆ

ವಾರ್ತಾಭಾರತಿವಾರ್ತಾಭಾರತಿ28 April 2016 5:29 PM IST
share
  • ಎರಡೇ ತಿಂಗಳಲ್ಲಿ 2 ಲಕ್ಷ ಚ.ಅಡಿ ನಿರ್ಮಾಣ !
  • ಎರಡೇ ತಿಂಗಳಲ್ಲಿ 2 ಲಕ್ಷ ಚ.ಅಡಿ ನಿರ್ಮಾಣ !
  • ಎರಡೇ ತಿಂಗಳಲ್ಲಿ 2 ಲಕ್ಷ ಚ.ಅಡಿ ನಿರ್ಮಾಣ !
  • ಎರಡೇ ತಿಂಗಳಲ್ಲಿ 2 ಲಕ್ಷ ಚ.ಅಡಿ ನಿರ್ಮಾಣ !
  • ಎರಡೇ ತಿಂಗಳಲ್ಲಿ 2 ಲಕ್ಷ ಚ.ಅಡಿ ನಿರ್ಮಾಣ !
  • ಎರಡೇ ತಿಂಗಳಲ್ಲಿ 2 ಲಕ್ಷ ಚ.ಅಡಿ ನಿರ್ಮಾಣ !

13.5 ತಿಂಗಳಲ್ಲಿ 15ಲಕ್ಷ ಚ.ಅಡಿಯ ಎಂಬಸಿ 7ಬಿ ಪೂರ್ಣಗೊಳಿಸುವ ಯೋಜನೆ

  ಬೆಂಗಳೂರು, ಎ. 28: ಅನಿವಾಸಿ ಭಾರತೀಯ ಉದ್ಯಮಿ ಫೈಝಲ್ ಕೊಟ್ಟಿಕೊಲ್ಲನ್ ಅವರ ನೇತೃತ್ವದ ಬಹುರಾಷ್ಟ್ರೀಯ ಕಂಪೆನಿ ಕೆಇಎಫ್ ಹೋಲ್ಡಿಂಗ್ಸ್ ನ ಅಧೀನದ ಪ್ರಿಕಾಸ್ಟ್ ನಿರ್ಮಾಣ ತಂತ್ರಜ್ಞಾನ ಸಂಸ್ಥೆ ಕೆಇಎಫ್ ಇನ್‌ಫ್ರಾ , ದೇಶದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪೆನಿ ಎಂಬಸಿ ಗ್ರೂಪ್ ಜೊತೆ ಬೆಂಗಳೂರಿನಲ್ಲಿ ಏಶ್ಯಾ ಖಂಡದ ಪ್ರಪ್ರಥಮ ಸಂಪೂರ್ಣ ಪ್ರಿಕಾಸ್ಟ್ ತಂತ್ರಜ್ಞಾನದಲ್ಲಿ ನಿರ್ಮಿತ ವಾಣಿಜ್ಯ ಸಂಕೀರ್ಣ ಎಂಬಸಿ 7ಬಿ ಯೋಜನೆಯ ಪ್ರಥಮ ಹಂತದ ನಿರ್ಮಾಣವನ್ನು ಪೂರ್ಣಗೊಳಿಸಿದೆ ಎಂದು ಕೆಇಎಫ್ ಇನ್‌ಫ್ರಾದ ಸಿಇಒ ಸುಮೇಶ್ ಸಾಚಾರ್ ತಿಳಿಸಿದ್ದಾರೆ.

   ಕೇವಲ ಎರಡೇ ತಿಂಗಳಲ್ಲೆ 2.06 ಲಕ್ಷ ಚದರ ಅಡಿ ವಿಸ್ತೀರ್ಣದ ನೆಲಮಹಡಿಯ ಎರಡು ಮಳಿಗೆಗಳ ನಿರ್ಮಾಣ ಪೂರ್ಣಗಿಳಿಸಲಾಗಿದೆ. ಸಾಂಪ್ರಾಯಿಕ ನಿರ್ಮಾಣ ವಿಧಾನದಲ್ಲಿ ಈ ನಿರ್ಮಾಣಕ್ಕೆ ಕನಿಷ್ಟ 6 ತಿಂಗಳು ಬೇಕಾಗುತ್ತದೆ . ಒಟ್ಟು 375 ಕೋಟಿ ರೂ.ಗಳ 15 ಲಕ್ಷ ಚದರ ಅಡಿ ವಿಸ್ತೀರ್ಣದ ಈ ವಾಣಿಜ್ಯ ಸಂಕೀರ್ಣದ ನಿರ್ಮಾಣವನ್ನು ದಾಖಲೆಯ ಕೇವಲ 13.5 ತಿಂಗಳಲ್ಲಿ ಮುಗಿಸಲಾಗುತ್ತದೆ ಎಂದು ಸುಮೇಶ್ ಹೇಳಿದ್ದಾರೆ.

     ಉದ್ದೇಶಿತ ಕಟ್ಟಡದಲ್ಲಿ ಹತ್ತು ಮಹಡಿಗಳ ಕಚೇರಿ ಸ್ಥಳಾವಕಾಶ, ವಿಶಾಲವಾದ ನೆಲಮಹಡಿ, ಬಹುಹಂತದ ಕಾರ್ ಪಾರ್ಕಿಂಗ್ ಸೌಲಭ್ಯವಿದೆ. ಯುರೋಪ್‌ನಲ್ಲಿ ಬಳಸುವ ಎರಡು ಗೋಡೆ(ಡಬಲ್ ವಾಲ್) ತಂತ್ರಜ್ಞಾನವನ್ನು ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಕೆಇಎಫ್ ಇನ್‌ಫ್ರಾ ಈ ಯೋಜನೆಯಲ್ಲಿ ಪರಿಚಯಿಸಿದೆ. ಇದರಿಂದ ಶೇ.50ರಷ್ಟು ಸಮಯದ ಉಳಿತಾಯವಾಗುವುದರ ಜೊತೆಗೆ ಕಟ್ಟಡದ ಗುಣಮಟ್ಟ ಮತ್ತು ಸ್ಥಿರತೆಯೂ ಹೆಚ್ಚಾಗಲಿದೆ ಎಂದು ಸುಮೇಶ್ ಹೇಳಿದರು.

ಕೃಷ್ಣಗಿರಿಯಲ್ಲಿರುವ ಕೆಇಎಫ್ ಇನ್‌ಫ್ರಾದ ವಿಶ್ವದಲ್ಲೇ ಅತ್ಯಂತ ದೊಡ್ಡ ಸಮಗ್ರ ಪ್ರಿಕಾಸ್ಟ್ ನಿರ್ಮಾಣ ತಂತ್ರಜ್ಞಾನ ಕಾರ್ಖಾನೆಯಲ್ಲಿ ರೊಬೋಟಿಕ್ಸ್ ಸಹಿತ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕಟ್ಟಡವೊಂದಕ್ಕೆ ಬೇಕಾಗುವ ಪ್ರತಿಯೊಂದು ಭಾಗವನ್ನು ಸಿದ್ಧಗೊಳಿಸಲಾಗುತ್ತದೆ.

ಸಂಪೂರ್ಣ ವಿಶ್ವಾಸ: ಕೆಇಎಫ್ ಇನ್‌ಫ್ರಾ ಸಂಸ್ಥೆಯು ಕಟ್ಟಡ ನಿರ್ಮಾಣಕ್ಕೆ ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡುತ್ತಿದೆ. ಆ ಹಿನ್ನೆಲೆಯಲ್ಲಿ ಆ ಸಂಸ್ಥೆಯೊಂದಿಗೆ ಎಂಬೆಸಿ 7ಬಿ ಕಟ್ಟಡ ನಿರ್ಮಾಣಕ್ಕೆ ಸಹಭಾಗಿತ್ವ ಹೊಂದಿದ್ದು, ಸಂಸ್ಥೆಯ ಬಗ್ಗೆ ಸಂಪೂರ್ಣ ವಿಶ್ವಾಸವಿದೆ ಎಂದು ಎಂಬೆಸಿಯ ಸಿಇಓ ಮೈಕ್ ಹೋಲ್ಯಾಂಡ್ ನುಡಿದರು.

ಇದೇ ವೇಳೆ ಮಾತನಾಡಿದ ಕೆಇಎಫ್ ಇನ್‌ಫ್ರಾ ಇಂಡಸ್ಟ್ರಿಯಲ್ ಪಾರ್ಕ್‌ನ ಪ್ರಧಾನ ವ್ಯವಸ್ಥಾಪಕ ಆ್ಯಂಡ್ರೆ ಡೀನ್ಸ್ಪ್, ಗ್ರಾಹಕರಿಗೆ ಕಟ್ಟಡ ನಿರ್ಮಾಣದ ಸಮಯ ಮತ್ತು ವೆಚ್ಚವನ್ನು ತಗ್ಗಿಸಿ, ಗುಣಮಟ್ಟದ ಕಟ್ಟಡ ನಿರ್ಮಾಣಕ್ಕೆ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X