Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಸಾಮ ಹತ್ಯೆಯಾದ ಅಮೆರಿಕದ ದಾಳಿ ಪಾಕ್‌ಗೆ...

ಉಸಾಮ ಹತ್ಯೆಯಾದ ಅಮೆರಿಕದ ದಾಳಿ ಪಾಕ್‌ಗೆ ತಿಳಿದಿತ್ತು: ಅಮೆರಿಕದ ಪತ್ರಕರ್ತ

ವಾರ್ತಾಭಾರತಿವಾರ್ತಾಭಾರತಿ28 April 2016 7:20 PM IST
share
ಉಸಾಮ ಹತ್ಯೆಯಾದ ಅಮೆರಿಕದ ದಾಳಿ ಪಾಕ್‌ಗೆ ತಿಳಿದಿತ್ತು: ಅಮೆರಿಕದ ಪತ್ರಕರ್ತ

ಇಸ್ಲಾಮಾಬಾದ್, ಎ. 28: ಅಲ್-ಖಾಯಿದ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಉಸಾಮ ಬಿನ್ ಲಾದನ್ ಮೇಲೆ ಅಮೆರಿಕ ನಡೆಸಿದ ದಾಳಿಯ ಬಗ್ಗೆ ತನಗೆ ಮಾಹಿತಿಯಿರಲಿಲ್ಲ ಎಂಬ ಪಾಕಿಸ್ತಾನದ ಹೇಳಿಕೆಯನ್ನು ಅಮೆರಿಕದ ಪತ್ರಕರ್ತರೊಬ್ಬರು ಪ್ರಶ್ನಿಸಿದ್ದಾರೆ. ಉಸಾಮ ಹಲವು ವರ್ಷಗಳ ಕಾಲ ಪಾಕಿಸ್ತಾನದಲ್ಲಿ ಬಂಧನದಲ್ಲಿದ್ದನು ಹಾಗೂ ಆ ದೇಶವು ಅಮೆರಿಕದೊಂದಿಗೆ ಒಡಂಬಡಿಕೆಯೊಂದಕ್ಕೆ ಬಂದ ಬಳಿಕ ಆತನನ್ನು ಹತ್ಯೆ ಮಾಡಲಾಯಿತು ಎಂದು ಅಮೆರಿಕದ ಪ್ರಸಿದ್ಧ ತನಿಖಾ ಪತ್ರಕರ್ತ ಸೈಮೂರ್ ಹರ್ಶ್ ಹೇಳಿಕೊಂಡಿದ್ದಾರೆ.

2011ರಲ್ಲಿ ಅಬೊಟಾಬಾದ್ ಪಟ್ಟಣದಲ್ಲಿ ಪಾಕಿಸ್ತಾನ ಸೇನೆಯ ಸುಸಜ್ಜಿತ ತರಬೇತಿ ಶಾಲೆಯ ಸಮೀಪದಲ್ಲಿರುವ ಲಾದನ್‌ನ ಮನೆಯ ಮೇಲೆ ಅಮೆರಿಕದ ನೇವಿ ಸೀಲ್‌ಗಳು ನಡೆಸಿದ ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ಗೊತ್ತಿತ್ತು ಎಂದು ಅವರು ಹೇಳಿದ್ದಾರೆ. ಈ ದಾಳಿಯಲ್ಲಿ ಉಸಾಮ ಮೃತಪಟ್ಟಿದ್ದನು.

ಬಿನ್ ಲಾದನ್ ಸ್ಥಾಪಿಸಿದ ಅಲ್ ಖಾಯಿದ ಭಯೋತ್ಪಾದಕ ಗುಂಪು 2001 ಸೆಪ್ಟಂಬರ್ 11ರಂದು ಅಮೆರಿಕದ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಲಾದನ್‌ನ ಹತ್ಯೆ ಬಗ್ಗೆ ಅಮೆರಿಕ ನೀಡಿರುವ ಅಧಿಕೃತ ಹೇಳಿಕೆ ಸುಳ್ಳು ಎಂಬುದಾಗಿ ತಾನು ನಂಬಿದ್ದೆ; ಈ ನಂಬಿಕೆಯನ್ನು ಗಟ್ಟಿಗೊಳಿಸುವ ನೂತನ ಪುರಾವೆಯನ್ನು ತಾನು ಕಳೆದ ವರ್ಷ ನೋಡಿದೆ ಎಂದು ಪಾಕಿಸ್ತಾನದ ಸುದ್ದಿ ಚಾನೆಲ್ ‘ಡಾನ್’ಗೆ ನೀಡಿದ ಸಂದರ್ಶನವೊಂದರಲ್ಲಿ ಹರ್ಶ್ ಹೇಳಿದರು. ಪಾಕಿಸ್ತಾನ 2006ರಲ್ಲಿ ಉಸಾಮನನ್ನು ಬಂಧಿಸಿತ್ತು ಹಾಗೂ ಸೌದಿ ಅರೇಬಿಯದ ಬೆಂಬಲದೊಂದಿಗೆ ಆತನನ್ನು ಕೈದಿಯಾಗಿ ಇರಿಸಿಕೊಂಡಿತ್ತು ಎಂಬ ತನ್ನ ಹೇಳಿಕೆಯನ್ನು ಅವರು ಪುನರುಚ್ಚರಿಸಿದರು. 

‘‘ಬಳಿಕ ಅಮೆರಿಕ ಮತ್ತು ಪಾಕಿಸ್ತಾನಗಳು ಒಪ್ಪಂದವೊಂದಕ್ಕೆ ಬಂದವು. ಅದರ ಪ್ರಕಾರ, ಅಮೆರಿಕವು ಉಸಾಮನ ಅಡಗುದಾಣದ ಮೇಲೆ ದಾಳಿ ನಡೆಸುತ್ತದೆ, ಆದರೆ ಇದು ಪಾಕಿಸ್ತಾನಕ್ಕೆ ಗೊತ್ತಿರಲಿಲ್ಲ ಎಂಬುದಾಗಿ ಬಿಂಬಿಸಲಾಗುತ್ತದೆ’’ ಎಂದರು.

‘‘ಭಾರತದ ಕಾರಣದಿಂದಾಗಿ ಪಾಕಿಸ್ತಾನ ನಿರಂತರ ಎಚ್ಚರಿಕೆಯಲ್ಲಿರುತ್ತದೆ. ಅದರ ರಾಡಾರ್‌ಗಳು ಗಮನಿಸುತ್ತಾ ಇರುತ್ತವೆ ಹಾಗೂ ಅದರ ಎಫ್-16 ವಿಮಾನಗಳು ಪ್ರತಿ ಕ್ಷಣವೂ ಸಿದ್ಧವಾಗಿರುತ್ತದೆ. ಹಾಗಾಗಿ ಪಾಕಿಸ್ತಾನಿಗಳ ಗಮನಕ್ಕೆ ಬಾರದೆ ಅಮೆರಿಕದ ಹೆಲಿಕಾಪ್ಟರ್‌ಗಳು ಆ ದೇಶ ಪ್ರವೇಶಿಸಲು ಸಾಧ್ಯವಿಲ್ಲ’’ ಎಂದು ಹರ್ಶ್ ಹೇಳುತ್ತಾರೆ.

ಸೇನೆ ಮತ್ತು ಐಎಸ್‌ಐ ಮುಖ್ಯಸ್ಥರು ಅಮೆರಿಕನ್ನರೊಂದಿಗೆ ಈ ಒಪ್ಪಂದ ಮಾಡಿಕೊಂಡರು. ಇದು ಅಂದಿನ ಪಾಕಿಸ್ತಾನ ವಾಯುಪಡೆಯ ಮುಖ್ಯಸ್ಥರನ್ನು ಕೆರಳಿಸಿತು. ಅವರು ಈ ವ್ಯವಹಾರವನ್ನು ಬಹಿರಂಗಪಡಿಸಲು ತಯಾರಿದ್ದರು. ಅವರ ಬಾಯಿ ಮುಚ್ಚಿಸಲು ನಿವೃತ್ತಿಯ ಬಳಿಕ ಅವರನ್ನು ಪಿಐಎ ಅಧ್ಯಕ್ಷರನ್ನಾಗಿ ಮಾಡಲಾಯಿತು ಎಂದು ಹರ್ಶ್ ಹೇಳಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X