Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಲಕಾವೇರಿಯಲ್ಲಿ ನಡೆದ ಹತ್ಯೆ ಪ್ರಕರಣ...

ತಲಕಾವೇರಿಯಲ್ಲಿ ನಡೆದ ಹತ್ಯೆ ಪ್ರಕರಣ ಬಯಲು ಪತಿಯನ್ನು ಕೊಲೆಗೈ ದ ಪತ್ನಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ28 April 2016 10:03 PM IST
share

 ಮಡಿಕೇರಿ, ಎ.28: ತಲಕಾವೇರಿಯಲ್ಲಿ ನಡೆದ ಬೆಂಗಳೂರಿನ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸರು ಹತ್ಯೆಗೀಡಾದ ವ್ಯಕ್ತಿಯ ಪತ್ನಿಯನ್ನು ಬಂಧಿಸಿದ್ದಾರೆ.

ವಿವಾಹದ ನಂತರದ ದಿನಗಳಲ್ಲಿ ಪತಿಯ ತಿರಸ್ಕಾರದ ಭಾವನೆಗೆ ಬೇಸತ್ತು ಪತಿಯನ್ನೇ ಕೊಲೆಗೈದಿರುವ ವಿಚಿತ್ರ ಘಟನೆ ಇದಾಗಿದೆ. ತಲಕಾವೇರಿ ಕ್ಷೇತ್ರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕೊಲೆಗೈಯಲ್ಪಟ್ಟ ಬೆಂಗಳೂರಿನ ವಿಜಯನಗರದ ಮಾರನಹಳ್ಳಿ ನಿವಾಸಿ ಲಿಂಗರಾಜು ಎಂಬಾತನ ಪತ್ನಿ ಆಶಾಳನ್ನು ಇದೀಗ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸುವುದರೊಂದಿಗೆ ಕೊಲೆಯ ರಹಸ್ಯ ಬೆಳಕಿಗೆ ಬಂದಿದೆ.

ಪೊಲೀಸರು ಬಂಧಿತ ಆಶಾಳನ್ನು ವಿಚಾರಣೆಗೊಳಪಡಿಸಿದಾಗ ಹತ್ಯೆಯ ಹಿಂದಿನ ಕಾರಣ ತಿಳಿದು ಬಂದಿದ್ದು, ಐದು ತಿಂಗಳ ಹಿಂದೆ ಲಿಂಗರಾಜುವಿನ ವಿವಾಹ ಆಶಾಳೊಂದಿಗೆ ನೆರವೇರಿತ್ತು. ಆದರೆ, ವಿವಾಹದ ಬಳಿಕ ಲಿಂಗರಾಜು ತನ್ನ ಪತ್ನಿಯೊಂದಿಗೆ ಸರಿಯಾಗಿ ಬಾಳ್ವೆ ನಡೆಸದೆ, ಆಕೆಯನ್ನು ತುಚ್ಛವಾಗಿ ಕಾಣುತ್ತಿದ್ದ. ಇದರಿಂದ ಮನನೊಂದಿದ್ದ ಆಶಾ ತನ್ನ ಪತಿಯನ್ನೆ ಇಲ್ಲವಾಗಿಸುವ ದುಷ್ಕೃತ್ಯಕ್ಕೆ ಕೈಹಾಕಲು ನಿರ್ಧರಿಸಿದ್ದಳು ಎನ್ನಲಾಗಿದೆ.

ಎ.20ರಂದು ಲಿಂಗರಾಜು ಮತ್ತು ಆಶಾ ದಂಪತಿಗಳು ನಂದಿಬೆಟ್ಟಕ್ಕೆ ತೆರಳಿ, ಬಳಿಕ ಮೈಸೂರಿನಲ್ಲಿರುವ ಆಶಾಳ ಅಕ್ಕನ ಮನೆಯಲ್ಲಿ ಒಂದೆರಡು ದಿನ ತಂಗಿದ್ದ್ದು, ಎ.25 ರಂದು ಮಡಿಕೇರಿಗೆ ಆಗಮಿಸಿ ಸಂಜೆ ಭಾಗಮಂಡಲ ಕ್ಷೇತ್ರಕ್ಕೆ ತೆರಳಿ ತಂಗಿದ್ದರು. ಮರು ದಿನ ಮುಂಜಾನೆ ಇವರಿಬ್ಬರು ತಲಕಾವೇರಿ ಕ್ಷೇತ್ರಕ್ಕೆ ತೆರಳಿದ್ದರು.

ಈ ಹಂತದಲ್ಲಿ ಪತಿಯನ್ನು ಕೊಲೆಗೈಯ್ಯಲು ಸಂಚು ರೂಪಿಸಿಕೊಂಡಿದ್ದ ಆಶಾ, ಪತಿಯನ್ನು ಪುಸಲಾಯಿಸಿ ಕ್ಷೇತ್ರ ವ್ಯಾಪ್ತಿಯ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಳು. ತನ್ನ ಸರಸ ಸಲ್ಲಾಪಗಳಿಂದ ಪತಿ ಮೈಮರೆತಿರುವ ಸಂದರ್ಭದಲ್ಲಿ ಆಶಾ ತನ್ನ ಪತಿ ಲಿಂಗರಾಜುವಿನ ಕತ್ತನ್ನು ಕೊಯ್ದು ಹತ್ಯೆಗೈದಿರುವುದಾಗಿ ವಿಚಾರಣೆಯ ಸಂದರ್ಭ ತಿಳಿದು ಬಂದಿರುವುದಾಗಿ ಹೇಳಲಾಗಿದೆ. ದುಷ್ಕೃತ್ಯವೆಸಗಿದ ಬಳಿಕ ಆಶಾ ಮಡಿಕೇರಿಗೆ ತೆರಳಿ, ನಂತರ ಹಾಸನದ ಮೂಲಕ ಅರಸೀಕೆರೆಯಲ್ಲಿರುವ ತನ್ನ ಅಣ್ಣನ ಮನೆಗೆ ತೆರಳಿದ್ದಳು.

ಅದಾಗಲೆ ಪತಿ, ಪತ್ನಿಯರಿಬ್ಬರು ತಲಕಾವೇರಿಗೆ ತೆರಳಿರುವ ಬಗ್ಗೆ ಮೈಸೂರಿನಲ್ಲಿದ್ದ ಸಹೋದರಿಯಿಂದ ಮಾಹಿತಿ ಪಡೆದಿದ್ದ ಆಶಾಳ ಅಣ್ಣ, ಲಿಂಗರಾಜುವಿನ ಬಗ್ಗೆ ಪ್ರಶ್ನಿಸಿದಾಗ ಅವರು ಕೆಲಸದ ಮೇಲೆ ಹೈದರಾಬಾದ್‌ಗೆ ತೆರಳಿರುವುದಾಗಿ ತಿಳಿಸಿ, ನೈಜಾಂಶವನ್ನು ಮರೆಮಾಚಿದ್ದಳು. ಇದೇ ಸಂದರ್ಭ ಬೆಂಗಳೂರಿನಲ್ಲಿದ್ದ ಲಿಂಗರಾಜುವಿನ ಸಂಬಂಧಿ ಅಲ್ಲಿನ ಠಾಣೆೆಯಲ್ಲಿ ಲಿಂಗರಾಜು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದರು. ಆದರೆ ದೂರು ದಾಖಲಾಗಿರಲಿಲ್ಲ. ಈ ಎಲ್ಲ ಘಟನೆಗಳ ನಡುವೆಯೆ ಮಡಿಕೇರಿ ಗ್ರಾಮಾಂತರ ಠಾಣಾ ಸಿಐ ಕರೀಮ್ ರಾವುತರ್, ತಲಕಾವೇರಿ ಕ್ಷೇತ್ರದಲ್ಲಿ ವ್ಯಕ್ತಿಯ ಹತ್ಯೆಯಾಗಿರುವ ಬಗ್ಗೆ ಬೆಂಗಳೂರು ಠಾಣೆಗೆ ಮಾಹಿತಿ ನೀಡಿದ್ದಲ್ಲದೆ, ಅರಸೀಕೆರೆ ಠಾಣೆಗೂ ಮಾಹಿತಿ ನೀಡಿ, ಆಶಾಳನ್ನು ವಶಕ್ಕೆ ತೆಗೆದುಕೊಳ್ಳುವಂತೆ ಕೋರಿದ್ದರು.

ಅದರಂತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಅರಸೀಕೆರೆಯಲ್ಲಿದ್ದ ಆಶಾಳನ್ನು ವಶಕ್ಕೆ ಪಡೆದು ವಿಚಾರಣೆೆಗೊಳಪಡಿಸುವುದರೊಂದಿಗೆ ಕೊಲೆಯ ನಿಗೂಢತೆ ಬಯಲಾಗಿದೆ. ಹತ್ಯೆಗೊಳಗಾದ ಲಿಂಗರಾಜು ಮತ್ತು ಆಶಾ ಅವರು ತಲಕಾವೇರಿ ಕ್ಷೇತ್ರಕ್ಕೆ ಬಂದಿರುವುದು ಸಿಸಿ ಟಿವಿಗಳಲ್ಲಿ ದಾಖಲಾಗಿರುವುದಾಗಿ ತಿಳಿದು ಬಂದಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X