Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಿಯಾಯಿತಿ ದರದಲ್ಲಿ ಮಾರಾಟ: ಶಾಮನೂರು

ರಿಯಾಯಿತಿ ದರದಲ್ಲಿ ಮಾರಾಟ: ಶಾಮನೂರು

ಹಾಪ್‌ಕಾಮ್ಸ್‌ನಲ್ಲಿ ಚೀನಾ ಸೇಬು

ವಾರ್ತಾಭಾರತಿವಾರ್ತಾಭಾರತಿ28 April 2016 11:23 PM IST
share
ರಿಯಾಯಿತಿ ದರದಲ್ಲಿ ಮಾರಾಟ: ಶಾಮನೂರು

ಬೆಂಗಳೂರು, ಎ. 28: ಮಧ್ಯವರ್ತಿಗಳಿಂದ ಆಗುವ ತೊಂದರೆಗಳನ್ನು ತಪ್ಪಿಸಲು ಹಣ್ಣು ಮತ್ತು ತರಕಾರಿಗಳನ್ನು ಹಾಪ್‌ಕಾಮ್ಸ್ ಮೂಲಕವೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ತೋಟಗಾರಿಕೆ ಮತ್ತು ಕೃಷಿ ಮಾರಾಟ ಇಲಾಖೆ ಸಚಿವ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಗುರುವಾರ ನಗರದ ಲಾಲ್‌ಬಾಗ್ ಗಾಜಿನಮನೆ ಸಮೀಪ ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ಹಾಗೂ ಹಾಪ್‌ಕಾಮ್ಸ್ ಸಹಯೋಗದೊಂದಿಗೆ ಆಯೋಜಿಸಿದ್ದ, ‘ಸೇಬು ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಮತ್ತು ಚೀನಾ ದೇಶದ ನಡುವೆ ದ್ವಿಪಕ್ಷೀಯ ಮಾತುಕತೆ ವೇಳೆ ಆದ ಒಪ್ಪಂದದ ಅನ್ವಯ ಆ ದೇಶದ ವೈವಿಧ್ಯಮಯ ಸೇಬುಗಳನ್ನು ಆಮದು ಮಾಡಿಕೊಂಡು ಇಲ್ಲಿಂದ ಮಾವು, ಬಾಳೆ ಹಣ್ಣುಗಳನ್ನು ರಫ್ತು ಮಾಡುವ ಪ್ರಕ್ರಿಯೆಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರಕಿದೆ ಎಂದು ಅವರು ತಿಳಿಸಿದರು.
ಚೀನಾ ದೇಶದ ಸೇಬು ಹಣ್ಣುಗಳು ಆರೋಗ್ಯವನ್ನು ಕಾಪಾಡಲಿದ್ದು, ಹೆಚ್ಚು ಹೆಚ್ಚು ಹಣ್ಣುಗಳನ್ನು ತರಿಸಿಕೊಂಡು, ಆದಷ್ಟು ಕಡಿಮೆ ದರದಲ್ಲಿ ಮಾರಾಟ ಮಾಡಲು ಪ್ರಯತ್ನಿಸಲಾಗುವುದು. ಅದೇ ರೀತಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚೀನಾ ದೇಶವು ಪ್ರತಿವರ್ಷ 3 ಕೋಟಿ 32 ಲಕ್ಷ ಟನ್ ಸೇಬು ಮಾರಾಟ ಮಾಡುತ್ತಿದೆ. ಅಂದರೆ, ವರ್ಷದ 12 ತಿಂಗಳು ಸಹ ಚೀನಾದಲ್ಲಿ ಸೇಬು ಬೆಳೆಯಲಾಗುತ್ತಿದೆ. ಭಾರತದಲ್ಲಿ 21 ಲಕ್ಷದ 61 ಸಾವಿರದ 400 ಟನ್ ಸೇಬು ಹಣ್ಣುಗಳನ್ನು ಬೆಳೆಯಲಾಗುತ್ತಿದೆ ಎಂದು ಶಾಮನೂರು ವಿವರಿಸಿದರು.
 ಹಾಪ್‌ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಡಿ.ಕೃಷ್ಣ ಮಾತನಾಡಿ, ಚೀನಾ ದೇಶದಿಂದ 50 ಪ್ರತಿನಿಧಿಗಳು ಈ ಉದ್ದೇಶಕ್ಕಾಗಿಯೇ ಆಗಮಿಸಿದ್ದಾರೆ. 15 ಅಂಗಡಿಗಳಲ್ಲಿ ತಮ್ಮ ದೇಶದ ವೈವಿಧ್ಯಮಯ ಸೇಬುಗಳನ್ನು ಮಾರಾಟಕ್ಕಿಟ್ಟಿದ್ದಾರೆ ಎಂದು ಹೇಳಿದರು.
ಇತಿಹಾಸ ಸೃಷಿಸಿದ ತೋಟಗಾರಿಕೆ ಇಲಾಖೆ:
ತೋಟಗಾರಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಚೀನಾ ರಾಷ್ಟ್ರದ 15ಕ್ಕೂ ಹೆಚ್ಚು ವಿವಿಧ ತಳಿಯ ಸೇಬುಗಳನ್ನು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಾಲ್‌ಬಾಗ್ ಗಾಜಿನ ಮನೆ ಸಮೀಪದಲ್ಲಿ ಪ್ರದರ್ಶನ ಮತ್ತು ಮಾರಾಟವನ್ನು ಸಜ್ಜುಗೊಳಿಸಲಾಗಿದೆ.
 ಚೈನಾ ಪೂಜಿ ಸೇಬು, ಗೋಲ್ಡನ್ ಸೇಬು, ಯುಎಸ್ ಸೇಬು, ಇರಾನಿ ಸೇಬು ಸೇರಿದಂತೆ ವಿವಿಧ ರೀತಿಯ ರುಚಿ ನೀಡುವ 15ಕ್ಕೂ ಹೆಚ್ಚು ತರಹೇವಾರಿ ಸೇಬುಗಳು ಪ್ರದರ್ಶನದಲ್ಲಿದ್ದು, ಪ್ರತಿ ಕೆ.ಜಿ. 1ಕ್ಕೆ 126 ರೂ. ನಿಂದ 166 ರೂ.ಗೆ ದರ ನಿಗದಿಪಡಿಸಲಾಗಿದೆ.
ಚೀನಾ ದೇಶದ ವೈನಮ್ ಮುನ್ಸಿಪಲ್ ಪೀಪಲ್ಸ್ ಗೌರ್ನಮೆಂಟ್‌ನ ಉಪ ಕಾರ್ಯದರ್ಶಿ ವಾಂಗ್ ಹೈ ಫೆಂಗ್, ಹಾಪ್‌ಕಾಮ್ಸ್ ಅಧ್ಯಕ್ಷ ಜಿ.ಆರ್.ಶ್ರೀನಿವಾಸನ್, ಉಪಾಧ್ಯಕ್ಷ ಡಿ.ಮುನೇಗೌಡ ಸೇರಿ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X