Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕ್‌ನ ಕಳಪೆ ಪ್ರದರ್ಶನಕ್ಕೆ ಅಫ್ರಿದಿಯೇ...

ಪಾಕ್‌ನ ಕಳಪೆ ಪ್ರದರ್ಶನಕ್ಕೆ ಅಫ್ರಿದಿಯೇ ಕಾರಣ: ವಕಾರ್

ವಾರ್ತಾಭಾರತಿವಾರ್ತಾಭಾರತಿ28 April 2016 11:40 PM IST
share
ಪಾಕ್‌ನ ಕಳಪೆ ಪ್ರದರ್ಶನಕ್ಕೆ ಅಫ್ರಿದಿಯೇ ಕಾರಣ: ವಕಾರ್

ಕರಾಚಿ, ಎ.28: ಏಷ್ಯಾಕಪ್ ಹಾಗೂ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಸೋಲಿಗೆ ನಾಯಕ ಶಾಹಿದ್ ಅಫ್ರಿದಿ ನೇರ ಹೊಣೆ ಎಂದಿರುವ ಮಾಜಿ ಕ್ರಿಕೆಟ್ ಕೋಚ್ ವಕಾರ್ ಯೂನಿಸ್, ಪಾಕಿಸ್ತಾನ ತಂಡದಿಂದ ಉಮರ್ ಅಕ್ಮಲ್‌ರನ್ನು ಕೈಬಿಡಬೇಕು ಎಂದು ಕ್ರಿಕೆಟ್ ಮಂಡಳಿಯನ್ನು ಆಗ್ರಹಿಸಿದ್ದಾರೆ.

 ಎರಡು ವರ್ಷಗಳ ಕಾಲ ಪಾಕ್ ತಂಡದ ಕೋಚ್ ಆಗಿದ್ದ ಅವಧಿಯ ವರದಿಯನ್ನು ಸಿದ್ಧಪಡಿಸಿರುವ ವಕಾರ್, ಪಾಕ್ ತಂಡದ ಇತ್ತೀಚೆಗಿನ ಕಳಪೆ ಪ್ರದರ್ಶನಕ್ಕೆ ಆಲ್‌ರೌಂಡರ್ ಅಫ್ರಿದಿಯ ಕಳಪೆ ಫಾರ್ಮ್, ದುರ್ಬಲ ನಾಯಕತ್ವ ಹಾಗೂ ಕಠಿಣ ನಿಲುವೇ ಕಾರಣ ಎಂದು ಹೇಳಿದ್ದಾರೆ.

  ಆಗಿನ ತಂಡದ ಆಯ್ಕೆಗಾರ ಹರೂನ್ ರಶೀದ್ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯಕ್ಕೆ ತಂಡವನ್ನು ಸೇರಿಕೊಳ್ಳುವಂತೆ ಉಮರ್ ಅಕ್ಮಲ್‌ಗೆ ತಿಳಿಸಿದ್ದರು. ಆದರೆ, ಅವರು ಯಾರಿಗೂ ಮಾಹಿತಿ ನೀಡದೇ ಪ್ರೀಮಿಯರ್ ಲೀಗ್‌ನ್ನು ಆಡಲು ವೆಸ್ಟ್‌ಇಂಡೀಸ್ ವಿಮಾನವೇರಿದ್ದರು. ಆ್ಯಂಡ್ರೂ ಸೈಮಂಡ್ಸ್ ಹಾಗೂ ಕೇವಿನ್ ಪೀಟರ್ಸನ್ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯದ ಪ್ರತಿಭಾವಂತ ಆಟಗಾರರಾಗಿದ್ದರು. ಅವರನ್ನು ದುರ್ನಡತೆಯ ಕಾರಣಕ್ಕೆ ತಂಡದಿಂದ ಹೊರ ಹಾಕಲಾಗಿತ್ತು. ಅಕ್ಮಲ್‌ರನ್ನು ಅದೇ ರೀತಿ ಮಾಡಬೇಕು’’ ಎಂದು ವಕಾರ್ ತನ್ನ ಸುದೀರ್ಫ ವರದಿಯಲ್ಲಿ ತಿಳಿಸಿದ್ದಾರೆ.

 ‘‘ಏಷ್ಯಾಕಪ್ ಹಾಗೂ ಟ್ವೆಂಟಿ-20 ವಿಶ್ವಕಪ್‌ನಲ್ಲಿ ನಮ್ಮ ತಂಡ ನ್ಯೂಝಿಲೆಂಡ್ ವಿರುದ್ಧ ಸೋತಿರುವುದಕ್ಕೆ ಕಳಪೆ ನಾಯಕತ್ವ ಕಾರಣವಾಗಿತ್ತು. ಅಫ್ರಿದಿ ಬ್ಯಾಟಿಂಗ್, ಬೌಲಿಂಗ್ ಹಾಗೂ ನಾಯಕತ್ವದಲ್ಲಿ ವಿಫಲರಾಗಿದ್ದಾರೆ ಎಂದು ನಾನು ಹಲವು ಬಾರಿ ಸ್ಪಷ್ಟಪಡಿಸಿದ್ದೆ. ಕಳಪೆ ರಣತಂತ್ರ ದುಬಾರಿ ಆಗಿ ಪರಿಣಮಿಸಿತ್ತು. ಅಫ್ರಿದಿ ತಂಡದ ಕೆಲವು ಸಭೆಗೆ ಹಾಜರಾಗಿರಲಿಲ್ಲ’’ಎಂದು ವಕಾರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X