Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಇಇ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದರೂ...

ಜೆಇಇ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದರೂ ಆತ್ಮಹತ್ಯೆಗೆ ಶರಣಾದ 17ರ ಬಾಲಕಿ ಇಂಜಿನಿಯರ್ ಆಗಲು ನಿರಾಸಕ್ತಿ

ವಾರ್ತಾಭಾರತಿವಾರ್ತಾಭಾರತಿ28 April 2016 11:43 PM IST
share

ಕೋಟಾ(ರಾಜಸ್ಥಾನ),ಎ.28: 17ರ ಹರೆಯದ ಕೃತಿ ತ್ರಿಪಾಠಿ ಬುಧವಾರವಷ್ಟೇ ಐಐಟಿ-ಜೆಇಇ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದಳು. ಆದರೆ ಓದಿ ಇಂಜಿನಿಯರ್ ಆಗಲು ಎಳ್ಳಷ್ಟೂ ಮನಸ್ಸಿಲ್ಲದಿದ್ದ ಈ ಬಾಲಕಿ ಗುರುವಾರ ಇಲ್ಲಿಯ ಐದಂತಸ್ತಿನ ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೃತಿ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಗಳನ್ನು ವಿವರಿಸಿ ಬರೆದಿಟ್ಟಿದ್ದ ಪತ್ರ ಪೊಲೀಸರ ವಶದಲ್ಲಿದೆ.
ಘಾಝಿಯಾಬಾದ್‌ನ ಕೃತಿ ಪ್ರತಿಷ್ಠಿತ ಐಐಟಿಗಳಲ್ಲಿ ಪ್ರವೇಶದ ದ್ವಾರಗಳನ್ನು ತೆರೆಯುವ ಐಐಟಿ-ಜೆಇಇ ಪರೀಕ್ಷೆಗೆ ತರಬೇತಿ ಪಡೆಯಲು ಇಲ್ಲಿಯ ಕೋಚಿಂಗ್ ಸೆಂಟರ್‌ಗೆ ಸೇರಿಕೊಂಡಿದ್ದಳು. ಅವಳೊಂದಿಗೆ ಹೆತ್ತವರೂ ಕೋಟಾದಲ್ಲಿಯೇ ವಾಸವಿದ್ದರಾದರೂ, ತಾಯಿ ಐದು ತಿಂಗಳ ಹಿಂದಷ್ಟೇ ಊರಿಗೆ ಮರಳಿದ್ದಳು. ಆಕೆ ಕಟ್ಟಡದಿಂದ ಜಿಗಿದಾಗ ತಂದೆ ಹೊರಗೆ ಹೋಗಿದ್ದರು.
ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ತೇರ್ಗಡೆಗೊಳ್ಳಲು ಕನಿಷ್ಠ 100 ಅಂಕಗಳನ್ನು ನಿಗದಿಗೊಳಿಸಲಾಗಿತ್ತಾದರೂ ಕೃತಿ 144 ಅಂಕಗಳನ್ನು ಗಳಿಸಿದ್ದಳು.
ಖಿನ್ನತೆ ಮತ್ತು ಎಂಜಿನಿಯರಿಂಗ್ ಓದಿನಲ್ಲಿ ನಿರಾಸಕ್ತಿ ಕೃತಿಯ ಆತ್ಮಹತ್ಯೆಗೆ ಕಾರಣವಾಗಿರುವಂತಿದೆ. ತನ್ನ ತಾಯಿ ತನ್ನನ್ನು ಪಿಯುಸಿ ವಿಜ್ಞಾನ ವಿಭಾಗಕ್ಕೆ ಸೇರಿಸಿದ್ದಳು, ಆದರೆ ಭೌತಶಾಸ್ತ್ರ, ಗಣಿತ ಮತ್ತು ರಸಾಯನ ಶಾಸ್ತ್ರದಂತಹ ವಿಷಯಗಳಲ್ಲಿ ತನಗೆ ಆಸಕ್ತಿಯಿರಲಿಲ್ಲ ಎಂದು ಆಕೆ ತನ್ನ ಆತ್ಮಹತ್ಯಾ ಪತ್ರದಲ್ಲಿ ಉಲ್ಲೇಖಿಸಿದ್ದಾಳೆ ಎಂದು ಕೋಟಾ ಎಸ್‌ಪಿ ಎಸ್.ಎಸ್.ಗೋದಾರ ತಿಳಿಸಿದರು.
ದೇಶದಲ್ಲಿಯೇ ಅತ್ಯಂತ ಕಠಿಣ ಪರೀಕ್ಷೆಗಳಲ್ಲೊಂದಾಗಿರುವ ಐಐಟಿ-ಜೆಇಇ ಸೇರಿದಂತೆ ವಿವಿಧ ಪರೀಕ್ಷೆಗಳ ಕೋಚಿಂಗ್ ಸೆಂಟರ್‌ಗಳಿಗಾಗಿ ಪ್ರಸಿದ್ಧಿ ಪಡೆದಿರುವ ಕೋಟಾದಲ್ಲಿ ಇದು ಒಂದು ವರ್ಷದ ಅವಧಿಯಲ್ಲಿ ಸಂಭವಿಸಿರುವ ಐದನೇ ಆತ್ಮಹತ್ಯೆ ಪ್ರಕರಣವಾಗಿದೆ. ವೈಫಲ್ಯದ ಭೀತಿ ಮತ್ತು ಕುಟುಂಬದಿಂದ ನಿರೀಕ್ಷೆಗಳ ಹೊರೆ ಹೆಚ್ಚಿನ ಆತ್ಮಹತ್ಯೆಗಳಿಗೆ ಕಾರಣವೆನ್ನುವುದು ತಜ್ಞರ ಅಭಿಪ್ರಾಯವಾಗಿದೆ.
ಈ ವರ್ಷ ಕೋಟಾದ ವಿವಿಧ ಕೋಚಿಂಗ್ ಸೆಂಟರ್‌ಗಳ ಮೂಲಕ ಸುಮಾರು 35,000 ವಿದ್ಯಾರ್ಥಿಗಳು ಐಐಟಿ-ಜೆಇಇ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದಾರೆ. ಪ್ರತಿವರ್ಷ ದೇಶಾದ್ಯಂತದಿಂದ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು ಇಲ್ಲಿಯ ಕೋಚಿಂಗ್ ಸೆಂಟರ್‌ಗಳಿಗೆ ದಾಖಲಾಗುತ್ತಾರೆ.
ಕಳೆದ ಐದು ವರ್ಷಗಳಲ್ಲಿ ಕನಿಷ್ಠ 56 ವಿದ್ಯಾರ್ಥಿಗಳು ಇಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ವಿಫಲಗೊಳ್ಳುವ ಭೀತಿ ಹೆಚ್ಚಿನ ಆತ್ಮಹತ್ಯೆಗಳಿಗೆ ಕಾರಣವೆನ್ನಲಾಗಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X