Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಅಸ್ಥಿರಂದ್ರತೆ ವೃದ್ದಾಪ್ಯದ ಶಾಪವಲ್ಲ

ಅಸ್ಥಿರಂದ್ರತೆ ವೃದ್ದಾಪ್ಯದ ಶಾಪವಲ್ಲ

ಲಕ್ಷಣ ಹಾಗೂ ತಡೆಗಟ್ಟುವ ವಿಧಾನ?

ವಾರ್ತಾಭಾರತಿವಾರ್ತಾಭಾರತಿ29 April 2016 5:03 PM IST
share
ಅಸ್ಥಿರಂದ್ರತೆ ವೃದ್ದಾಪ್ಯದ ಶಾಪವಲ್ಲ

ಅಸ್ಥಿರಂದ್ರತೆ ಎಂದರೆ ಟೊಳ್ಳು ಮೂಳೆ ರೋಗ ಅಥವಾ ಆಸ್ಮಿಯೋ ಪೊರೋಸೊಸ್ ಎಂಬ ರೋಗವಾಗಿದ್ದು ಸಾಮಾನ್ಯವಾಗಿ ವೃದ್ಯಾಪ್ಯದಲ್ಲಿ ಮತ್ತು ನಡುವಯಸ್ಕರಲ್ಲಿ ಕಂಡು ಬರುತ್ತದೆ. ಸಾಮಾನ್ಯ ಆಡು ಭಾಷೆಯಲ್ಲಿ ಇದನ್ನು ಮೂಳೆ ಟೊಳ್ಳಾಗುವುದು ಅಥವಾ ಮೂಳೆಗಳು ದುರ್ಬಲಗೊಳ್ಳುವುದು ಎನ್ನುತ್ತಾರೆ. ಎಲುಬು ನಮ್ಮ ದೇಹದ ಅತ್ಯಂತ ಶಕ್ತಿಯುತವಾದ ಅಂಗವಾಗಿದ್ದು ದೇಹಕ್ಕೆ ಸ್ಥಿರತೆ ಮತ್ತು ಶಕ್ತಿಯನ್ನು ನೀಡುತ್ತದೆ. ಈ ಎಲುಬಿನ ಹೊರಭಾಗ ಅತ್ಯಂತ ಗಡುಸಾಗಿದ್ದು ಒಳಭಾಗದಲ್ಲಿ ಅಸ್ಥಿಮಜ್ಜೆ (Bare Marrow) ಇರುತ್ತದೆ. ವಯಸ್ಸಾದಂತೆ ಮೂಳೆಯ ಒಳಗಿರುವ ಅಸ್ಥಿ ಪಂಜರದಲ್ಲಿರುವ ಕೊಲಾಜನ್ ಎಂಬ ಪ್ರೋಟಿನ್‌ನ ಸಾಂದ್ರತೆ ಕಡಮೆಯಾಗುತ್ತದೆ ಮತ್ತು ಖನಿಜಾಂಶಗಳ ಸಾಂದ್ರತೆಯೂ ಕಡಿಮೆಯಾಗುತ್ತದೆ ಇದರಿಂದ ಮೂಳೆ ತನ್ನ ಗಡಸುತನ ಮತ್ತು ಶಕ್ತಿಯನ್ನು ಕಳೆದುಕೊಂಡು ಟೊಳ್ಳಾಗುತ್ತದೆ. ಈ ಹಂತದಲ್ಲಿ ಸ್ವಲ್ಪ ಗಾಯವಾದರೂ ಮೂಳೆ ಮುರಿತವಾಗುವ ಸಂಭವವಿರುತ್ತದೆ. ಮೂಳೆಯ ಒಳಗಿನ ಖನಿಜದ ಸಾಂದ್ರತೆ ಕಡಮೆಯಾದಾಗ ಮೂಳೆಗಳು ತನ್ನಿಂತಾನೇ ಮುರಿತವಾಗುವ ಸಾಧ್ಯತೆ ಇರುತ್ತದೆ. ಈ ಹಂತದಲ್ಲಿ ವಯಸ್ಸಾದವರು ಅತಿಯಾದ ಭಾರ ಎತ್ತಿದರೆ ಅಥವಾ ಎಲ್ಲಾದರೂ ಮನೆಯೊಳಗೆ ಬಿದ್ದಲ್ಲಿ ಬೇಗನೆ ಮೂಳೆ ಮುರಿಯುವ ಸಾಧ್ಯತೆ ಹೆಚ್ಚಾಗಿರುತ್ತದೆ. ಕೆಲವೊಮ್ಮೆ ಯಾವುದೇ ಕಾರಣವಿಲ್ಲದೆ ಮೂಳೆಯು ಮುರಿಯುವ ಸಾಧ್ಯತೆಯೂ ಇರುತ್ತದೆ. ಈ ಕಾರಣದಿಂದಲೇ ಈ ರೋಗವನ್ನು ಮೌನ ಮಾರಿ ಅಥವಾ ಮೌನ ರೋಗ ಎಂದು ಕರೆಯುತ್ತಾರೆ. ಏಕೆಂದರೆ ಮೂಳೆ ಮುರಿಯುವ ತನಕ, ಇತರ ಯಾವುದೇ ರೋಗದ ಲಕ್ಷಣಗಳು ಮತ್ತು ಚಿಹ್ನೆಗಳು ಗೋಚರಿಸುವುದಿಲ್ಲ. ವಯೋವೃದ್ದರಲ್ಲಿ ಸಾಮಾನ್ಯವಾಗಿ ಕಾಣುವ ಈ ರೋಗ, ಸೊಂಟ, ಹಿಂಭಾಗ, ಮುಂಗೈ ಮತ್ತು ಬೆನ್ನುಹುರಿ ಮೂಳೆಗಳಲ್ಲಿ ಹೆಚ್ಚಾಗಿ ಮುರಿತ ಕಂಡುಬರುತ್ತದೆ. ಸದ್ದಿಲ್ಲದೇ ಯಾವುದೇ ಮುನ್ಸೂಚನೆ ಇಲ್ಲದೆ ಕಾಣಿಸಿಕೊಳ್ಳುವ ಈ ಅಸ್ಥಿರಂದ್ರತೆ, ಪುರುಷರಿಗಿಂತಲೂ ಹೆಚ್ಚಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಖುತುಚಕ್ರ ಕೊನೆಗೊಳ್ಳುವ ಪ್ರಕ್ರಿಯೆಯ ನಂತರ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.

ರೋಗಕ್ಕೆ ಕಾರಣಗಳು ಏನು? :-
  1.ಅತಿಯಾದ ಸ್ಥಿರಾಯ್ಡುಗಳ ಸೇವನೆ.
  2.ಅತಿಯಾದ ಗರ್ಭನಿರೋಧಕ ಔಷಧಿಗಳ ಬಳಕೆ.
  3.ಧೂಮಪಾನ, ತಂಬಾಕು ಮತ್ತು ಅತಿಯಾದ ಅಲ್ಕೋಹಾಲ್ ಬಳಕೆಗಳಿಂದ ಕೂಡಿದ ಐಷಾರಾಮಿ ಜೀವನ ಶೈಲಿ ಮತ್ತು ನಿಯಮಿತವಾಗಿ ವ್ಯಾಯಾಮ ಮಾಡದಿರುವುದು.
  4.ಥೈರಾಯ್ಡು ಸಮಸ್ಯೆ.
  5.ರಸದೂತಗಳ ವೈಪರೀತ್ಯ (ಆಂಡ್ರೋಜೆನ್ ಮತ್ತು ಇಸ್ಟ್ರೋಜೆನ್)
  6.ಕಡಮೆ ಲವಣಯುಕ್ತ ಆಹಾರ, ಆಹಾರ ಸೇವನೆಯ ದೋಷಗಳು, ಕಾಲ್ಸಿಯಂಯುಕ್ತ ಆಹಾರ ಸೇವನೆ ಮಾಡದಿರುವುದು.
 7.ಬಿಸಿಲಿನಲ್ಲಿ ಹೋದರೆ ಚರ್ಮದ ಕಾಂತಿ ಹಾಳಾಗುತ್ತದೆಂದು ಹೆದರಿ ಮನೆಯಲ್ಲಿಯೇ ಉಳಿದು, ಹೊರ ಹೋಗದಿರುವುದು. ಹೊರಗಡೆ ಹೋದರೂ ಸನ್ ಕ್ರೀಮ್ ಹಚ್ಚಿ, ಸೂರ್ಯನ ಶಾಖ ಮತ್ತು ಕಿರಣಗಳು ಕೊಂಚವೂ ತ್ವಚ್ಛೆಗೆ ತಾಗದಂತೆ ಎಚ್ಚರ ವಹಿಸುವುದು, ಪೂರ್ತಿ ಮೈ ಮುಚ್ಚುವ ಬಟ್ಟೆ ಧರಿಸಿ, ಚರ್ಮಕ್ಕೆ ಬಿಸಿಲು ತಾಗದಂತೆ ಮಾಡುವುದು, ಸೂರ್ಯನ ಕಿರಣ, ವಿಟಮಿನ್ ಡಿಉತ್ಪಾದನೆ ದೇಹಕ್ಕೆ ಅತೀ ಅವಶ್ಯಕ, ಈ ವಿಟಮಿನ್ ಡಿದೇಹದಲ್ಲಿ ಕ್ಯಾಲ್ಸಿಯಂಯನ್ನು ಸೆಳೆದುಕೊಳ್ಳಲು ಅತೀ ಅಗತ್ಯ.

ರೋಗದ ಲಕ್ಷಣಗಳು ಏನು? :-
    1.ಮೂಳೆಗಳಲ್ಲಿ ನೋವು ಮತ್ತು ಊತ.
    2.ಮಾಂಸ ಖಂಡದ ದುರ್ಬಲತೆ ಮತ್ತು ವಿಪರೀತ ಸ್ನಾಯು ನೋವು.
    3.ಹಠಾತ್ ಬೆನ್ನು ನೋವು ಮತ್ತು ಬೆನ್ನು ಹುರಿಯ ಮೇಲೆ ವಿಪರೀತ ಒತ್ತಡ ಮತ್ತು ಉರಿತ ಬಂದಲ್ಲಿ ಬೆನ್ನು ಹುರಿಯ ಎಲುಬು ಮುರಿದಿದೆ ಎಂದರ್ಥ.
    4.ಉದ್ದದ ಮೂಳೆ (Long Bone) ಮುರಿತದಿಂದ ರೋಗಿನ ಚಲನಲನಕ್ಕೆ ತೊಂದರೆಯಾಗಬಹುದು.
   5.ಯಾವುದೇ ಕಾರಣವಿಲ್ಲದೆ ವ್ಯಕ್ತಿ ಚಲನೆ ಮಾಡಲು ಹಿಂಜರಿದಲ್ಲಿ ಮೂಳೆ ಮುರಿತವನ್ನು ಸಂಶಯಿಸಬಹುದು. ಸಾಮಾನ್ಯವಾಗಿ ಈ ಹಠಾತ್ ಮೂಳೆ ಮುರಿತ ಮತ್ತು ಸೊಂಟದ ಸುತ್ತ ನೋವು ವಯಸ್ಸಾದವರಲ್ಲಿ ಕಂಡು ಬರುತ್ತದೆ. ತಕ್ಷಣವೇ ವೈದ್ಯರ ಬಳಿ ತೋರಿಸಿ ಕ್ಷ ಕಿರಣ ಮಾಡಿಸಿದಲ್ಲಿ ಮುರಿತವನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತೆ್ಸಯನ್ನು ಸಕಾಲದಲ್ಲಿ ನೀಡಬೇಕು.

ತಡೆಗಟ್ಟುವುದು ಹೇಗೆ? :-
  1. ನಿಯಮಿತವಾಗಿ ದಿನನಿತ್ಯ ಒಂದು ಗಂಟೆಗಳ ಕಾಲ ವ್ಯಾಯಾಮ ಮಾಡುವುದು, ನಲವತ್ತು ವರ್ಷದ ವರೆಗೆ ದಿನನಿತ್ಯ ವ್ಯಾಯಾಮ ಮಾಡಿ, ಕ್ಯಾಲ್ಸಿಯಂಭರಿತ ಪೌಷ್ಠಿಕ ಆಹಾರ ಸೇವಿಸಿದ್ದಲ್ಲಿ ವ್ಯಕ್ತಿಯ ಎಲುಬಿನ ಸಾಂದ್ರತೆ (ಬೋನ್ ಮಾಸ್) ಹೆಚ್ಚಿರುತ್ತದೆ. ಇಂತಹಾ ವ್ಯಕ್ತಿಯ ಮೂಳೆಗಳು ವಯಸ್ಸಾದ ಬಳಿಕವೂ ಆರೋಗ್ಯದಾಯಕವಾಗಿರುತ್ತದೆ. ಈ ಕಾರಣದಿಂದಲೇ ಅಸ್ಥಿರಂದ್ರತೆಯನ್ನು ತಡೆಯಲು ನಿಯಮಿತವಾದ ಮತ್ತು ನಿರಂತರವಾದ ದೈಹಿಕ ವ್ಯಾಯಾಮ ಅತೀ ಅಗತ್ಯ.
  2. ವೈದ್ಯರ ಸಲಹೆ ಇಲ್ಲದೆ ಅತಿಯಾಗಿ ಗರ್ಭನಿರೋಧಕ ಔಷಧಿಗಳನ್ನು ಮಹಿಳೆಯರು ಬಳಸಲೇಬಾರದು.
  3. ಅತಿಯಾದ ಸ್ಥಿರಾಯ್ಡು ಸೇವನೆಯನ್ನು ನಿಯಂತ್ರಿಸಬೇಕು.
  4. ಧೂಮಪಾನ, ತಂಬಾಕು ಉತ್ಪನ್ನಗಳ ಬಳಕೆ ಮತ್ತು ಅಲ್ಕೋಹಾಲ್ ಸೇವನೆಯನ್ನು ಸಂಪೂರ್ಣವಾಗಿ ವರ್ಜಿಸಬೇಕು, ಇದು ಬರೀ ಎಲುಬಿನ ಸಾಂದ್ರತೆಯನ್ನು ಹೆಚ್ಚಿಸಲು ಮಾತ್ರವಲ್ಲದೆ ವ್ಯಕ್ತಿಯ ಸಂಪೂರ್ಣ ಆರೋಗ್ಯಕ್ಕೆ ಅತೀ ಅಗತ್ಯ.
 5. ರಸದೂತಗಳ ವೈಪರೀತ್ಯ ಮತ್ತು ಥೈರಾಯ್ಡು ಸಂಬಂಧಿ ರೋಗವಿದ್ದಲ್ಲಿ ಸೂಕ್ತ ಚಿಕಿತ್ಸೆಯಲ್ಲಿ ನಿರಂತರವಾಗಿ ತೆಗೆದುಕೊಳ್ಳಬೇಕಾಗುತ್ತದೆ. ಒಬ್ಬ ವ್ಯಕ್ತಿಯ ಎಲುಬಿನ ಸಾಂದ್ರತೆಯನ್ನು ಕಾಯ್ದುಕೊಳ್ಳುವ ರಸದೂತಗಳ ಸ್ರವಿಸುವಿಕೆ ಮತ್ತು ನಿಯಂತ್ರಣ ಅತೀ ಅಗತ್ಯ.
 6. ಐಷಾರಾಮಿ ಜೀವನ ಶೈಲಿಯನ್ನು ತ್ಯಜಿಸಿ, ನಿರಂತರ ವ್ಯಾಯಾಮ ಮಾಡಬೇಕು. ಸಮತೋಲಿತ ಆಹಾರ ಸೇವಿಸಬೇಕು. ಕ್ಯಾಲ್ಸಿಯಂ ಯುಕ್ತ ಆಹಾರಗಳನ್ನು ನಿಯಮಿತವಾಗಿ ಸೇವಿಸತಕ್ಕದ್ದು. ರಾಗಿ, ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಹೆಚ್ಚಾಗಿ ಬಳಸಬೇಕು.
 7. ದಿನದ 24 ಗಂಟೆಯೂ ಮನೆಯೊಳಗೆ ಇರಬಾರದು. ವಾತಾವರಣದ ಬದಲಾವಣೆಗಳನ್ನು ಗಮನಿಸುತ್ತಾ ಪ್ರತಿದಿನ ಕನಿಷ್ಠ ಪಕ್ಷ ಅರ್ಧ ಗಂಟೆಗಳ ಕಾಲ ತಿಳಿಬಿಸಿಲಿಗೆ ಮೈಯೊಟ್ಟುವುದು ಸೂಕ್ತ. ಬೆಳೆಯುವ ಮಕ್ಕಳಲ್ಲಿ ಇದರ ಅಗತ್ಯ ತುಂಬಾ ಇರುತ್ತದೆ. ಈ ರೀತಿ ಮಾಡುವುದರಿಂದ ನೈಸರ್ಗಿಕವಾಗಿ ಸೂರ್ಯನ ಬಿಸಿಲಿನಿಂದ ವಿಟಮಿನ್ ಡಿದೇಹದಲ್ಲಿ ಉತ್ಪತ್ತಿಯಾಗಿ, ಪರೋಕ್ಷವಾಗಿ ಕ್ಯಾಲ್ಸಿಯಂ ಉತ್ಪಾದನೆ ಮತ್ತು ಹೀರುವಿಕೆಗೆ ಸಹಾಯ ಮಾಡಿ, ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯಾಗದಂತೆ ಮಾಡಿ ಎಲುಬಿನ ಸಾಂದ್ರತೆಯನ್ನು ಹತೋಟಿಯಲ್ಲಿಡುತ್ತದೆ.

ಪತ್ತೆ ಹಚ್ಚುವುದು ಹೇಗೆ? :-
    ಬೋನ್ ಡೆನ್ಸಿಟೋಮೆಟ್ರಿ ಅಥವಾ ಎಲುಬಿನ ಖನಿಜ ಸಾಂದ್ರತೆ ಪರೀಕ್ಷೆ ಎಂಬ ಪರೀಕ್ಷೆಯ ಮುಖಾಂತರ ಎಲುಬಿನ ಖನಿಜದ ಸಾಂದ್ರತೆಯನ್ನು ತಿಳಿಯಲಾಗುತ್ತದೆ. ಇದು ಕ್ಷ ಕಿರಣದ ಹಾಗೆಯೇ ಇರುವ ಇನ್ನೊಂದು ಪರೀಕ್ಷೆಯಾಗಿದ್ದು ಎಲುಬಿನ ಖನಿಜದ ಸಾಂದ್ರತೆಯನ್ನು ನಿಖರವಾಗಿ ತಿಳಿಯಬಹುದು. ಕೇವಲ 24 ಗಂಟೆಗಳಲ್ಲಿ ಈ ಪರೀಕ್ಷೆಯನ್ನು ಮಾಡಿ ವ್ಯಕ್ತಿಯ ಅಸ್ಥಿರಂದ್ರತೆಯ ರೋಗದಿಂದ ಬಳಲುತ್ತಿದ್ದಾನೆಯೇ ಎಂದು ತಿಳಿಯಲಾಗುತ್ತದೆ ಮತ್ತು ಯಾವ ವ್ಯಕ್ತಿಗೆ ಮೂಳೆ ಮುರಿತವಾಗುವ ಸಾಧ್ಯತೆ ಹೆಚ್ಚು ಇದೆ ಎಂಬುದನ್ನು ತಿಳಿಯಲಾಗುತ್ತದೆ. ಸಾಮಾನ್ಯವಾಗಿ ಈ ಮಾಪನವನ್ನು ಟಿ - ಸ್ಕೋರ್ ಎನ್ನುತ್ತಾರೆ (T – Score- -). ನಿಮ್ಮ ಟಿ - ಸ್ಕೋರ್ 2.5 ಅಥವಾ ಇನ್ನೂ ಕಡಮೆ ಇದ್ದಲ್ಲಿ ನೀವು ಅಸ್ಥಿರಂದ್ರತೆಯಿಂದ ಬಳಲುತ್ತಿದ್ದೀರಿ ಎಂದರ್ಥ. ಋಣತ್ಮಾಕ ಸಂಖ್ಯೆ ಜಾಸ್ತಿಯಾದಷ್ಟು ನಿಮ್ಮ ಅಸ್ಥಿರಂದ್ರತೆ ಜಾಸ್ತಿ ಎಂದರ್ಥ. ನಿಮ್ಮ ಟಿ - ಸ್ಕೋರ್ 1 ರಿಂದ ಮೇಲಿದ್ದಲ್ಲಿ ನೀವು ಅಸ್ಥಿರಂದ್ರತೆಯಿಂದ ಬಳಲುತ್ತಿಲ್ಲ ಎಂದರ್ಥ. ನಿಮ್ಮ ಟಿ - ಸ್ಕೋರ್ 1ರಿಂದ -2.5ರ ಒಳಗೆ ಇದ್ದಲ್ಲಿ ನೀವು ಪ್ರಾರಂಭಿಕ ಹಂತದ ಅಸ್ಥಿರಂದ್ರತೆ ರೋಗದಲ್ಲಿದ್ದೀರಿ ಎಂದರ್ಥ. ಸಾಮಾನ್ಯವಾಗಿ 50 ವಯಸ್ಸು ಕಳೆದ ಬಳಿಕ ಈ ಪರೀಕ್ಷೆಯನ್ನು ನಿಯಮಿತವಾಗಿ ಮಾಡಿಸಿಕೊಂಡು (ವರ್ಷದಲ್ಲಿ ಒಮ್ಮೆಯಾದರೂ) ಎಲುಬಿನ ಸಾಂದ್ರತೆಯನ್ನು ತಿಳಿದುಕೊಂಡು ಸೂಕ್ತ ಮುಂಜಾಗರೂಕತೆ ವಹಿಸಿದ್ದಲ್ಲಿ ಮೂಳೆ ಮುರಿತವನ್ನು ತಪ್ಪಿಸಿ ಅದರಿಂದ ಉಂಟಾಗುವ ನೋವು, ಯಾತನೆ ಮತ್ತು ವೆಚ್ಚವನ್ನು ಕಡಿಮೆ ಮಾಡಬಹುದು. ಈ ಪರೀಕ್ಷೆ ಮಾಡುವ 24 ಗಂಟೆಗಳ ಮೊದಲು ಯಾವುದೇ ಕ್ಯಾಲ್ಸಿಯಂ ಇರುವ ಮಾತ್ರೆಗಳನ್ನು ಮತ್ತು ಕ್ಯಾಲ್ಸಿಯಂ ಗುಳಿಗೆಗಳನ್ನು ತೆಗೆದುಕೊಳ್ಳಬಾರದು. ಅದೇ ರೀತಿ ಗರ್ಭಿಣಿ ಹೆಂಗಸರಲ್ಲಿ ಸಾಮಾನ್ಯವಾಗಿ ಈ ಪರೀಕ್ಷೆಯನ್ನು ಮಾಡುವುದಿಲ್ಲ. ಈ ಪರೀಕ್ಷೆ ಮಾಡುವ ಮೊದಲು ನಿಮ್ಮ ಯಾವುದೇ ದೈನಂದಿನ ಚಟುವಟಿಕೆಗಳನ್ನು ಬದಲಾಯಿಸಬೇಕಿಲ್ಲ. ಅದೇ ರೀತಿ ಪರೀಕ್ಷೆಯ ಬಳಿಕ ನಿಮ್ಮ ದಿನನಿತ್ಯದ ಚಟುಚಟಿಕೆಗಳನ್ನು ಮಾಡಬಹುದು. 24 ಗಂಟೆಗಳ ಒಳಗೆ ನಿಮ್ಮ ಎಲುಬಿನ ಸಾಂದ್ರತೆಯನ್ನು ವೈದ್ಯರು ತಿಳಿಸುತ್ತಾರೆ ಮತ್ತು ಸೂಕ್ತ ಔಷಧಿಯನ್ನು ಅವರೇ ನೀಡುತ್ತಾರೆ.

ಕೊನೆ ಮಾತು :-
ಅಸ್ಥಿರಂದ್ರತೆ ಎಂಬುದು ಒಂದು ದೇಹದ ಸ್ಥಿತಿಯಾಗಿದ್ದು, ಹಲವಾರು ಕಾರಣಗಳಿಂದ ಉಂಟಾಗಬಹುದು. ಸಾಮಾನ್ಯವಾಗಿ ವೃದ್ಯಾಪ್ಯರಲ್ಲಿ ಕಾಣಿಸಿಕೊಳ್ಳುವ ಈ ದೇಹಸ್ಥಿತಿ, ದೇಹದ ಎಲುಬಿನ ಕ್ಯಾಲ್ಸಿಯಂ ವ್ಯತ್ಯಾಸದಿಂದಾಗಿ ಉಂಟಾಗುತ್ತದೆ. ಮೌನರೋಗ, ಟೊಳ್ಳು ಮೂಳೆ ರೋಗ, ಅಸ್ಥಿಕ್ಷಯ, ಮೂಳೆಕ್ಷಯ, ಅಸ್ಥಿರಂದ್ರತೆ ಹೀಗೆ ಹಲವಾರು ಹೆಸರುಗಳಿಂದ ಕರೆಯಲ್ಪಡುವ ಈ ದೇಹ ಸ್ಥಿತಿಯನ್ನು ಖಂಡಿತವಾಗಿವೂ ತಡೆಗಟ್ಟಬಹುದು. ನಿರಂತರವಾದ ನಿಯಮಿತವಾದ ವ್ಯಾಯಾಮ, ಸಮತೋಲಿತ ಪೌಷ್ಠಿಕಾಂಶಯುಕ್ತ ಆಹಾರ ಸೇವನೆ, ಅರೋಗ್ಯ ಪೂರ್ಣ ಜೀವನಶೈಲಿ, ಧೂಮಪಾನ ಮತ್ತು ಆಲ್ಕೋಹಾಲ್ ವರ್ಜನೆ ಮುಂತಾದವುಗಳ ಮೂಲಕ ದೇಹದ ಎಲುಬಿನ ಕ್ಯಾಲ್ಸಿಯಂ ಪ್ರಮಾಣ ಮತ್ತು ಎಲುಬಿನ ಸಾಂದ್ರತೆಯನ್ನು ಖಂಡಿತವಾಗಿಯೂ ಹತೋಟಿಯಲ್ಲಿಟ್ಟುಕೊಂಡು ಈ ಅಸ್ಥಿರಂದ್ರತೆಯನ್ನು ತಡೆಯಲು ಸಾಧ್ಯವಿದೆ. ವೃದ್ಯಾಪ್ಯದಲ್ಲಿ 50 60ರ ಹರೆಯದಲ್ಲಿ ಮಹಿಳೆಯರಲ್ಲಿ ಇಸ್ಟ್ರೋಜೆನ್ ಮತ್ತು ಪುರುಷರಲ್ಲಿ ಆಂಡ್ರೋಜೆನ್ ರಸದೂತಗಳ ಸ್ರವಿಸುವಿಕೆ ಕಡಿಮೆಯಾಗಿ, ಮೂಳೆಯಲ್ಲಿನ ಕ್ಯಾಲ್ಸಿಯಂ ಮತ್ತು ಇತರ ಖನಿಜಂಶಾಗಳ ಸಾಂದ್ರತೆಯಲ್ಲಿ ಏರುಪೇರು ಉಂಟಾಗಿ ಅಸ್ಥಿರಂದ್ರತೆಗೆ ಪರೋಕ್ಷವಾಗಿ ಕಾರಣವಾಗುತ್ತದೆ. ಅದೇನೇ ಇರಲಿ ಅಸ್ಥಿರಂದ್ರತೆ ಎನ್ನುವುದು ಖಂಡಿತವಾಗಿಯೂ ವೃದ್ಯಾಪ್ಯದ ಶಾಪವಂತೂ ಅಲ್ಲ. ಆರೋಗ್ಯ ಪೂರ್ಣ ಆಹಾರ ಪದ್ಧತಿ, ಜೀವನಶೈಲಿ ಹಾಗೂ ನಿರಂತರವಾದ ವೈದ್ಯಕೀಯ ಮಾರ್ಗದರ್ಶನದಿಂದ ನಿಸ್ಸಂದೇಹವಾಗಿಯೂ ಈ ಅಸ್ಥಿರಂದ್ರತೆಯನ್ನು ತಡೆಗಟ್ಟಬಹುದು ಮತ್ತು ಅದರಲ್ಲಿಯೇ ನಮ್ಮೆಲ್ಲರ ಮತ್ತು ಸಮಾಜದ ಹಿತ ಅಡಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X