Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೋರ್‌ವೆಲ್ ಕೊರೆಯಲು ಸ್ಥಳೀಯರ ಆಕ್ಷೇಪ

ಬೋರ್‌ವೆಲ್ ಕೊರೆಯಲು ಸ್ಥಳೀಯರ ಆಕ್ಷೇಪ

ಪೊಲೀಸ್ ಭದ್ರತೆಯಲ್ಲಿ ಕಾಮಗಾರಿ

ವಾರ್ತಾಭಾರತಿವಾರ್ತಾಭಾರತಿ29 April 2016 9:48 PM IST
share

ಕಾರವಾರ, ಎ.29: ತಾಲೂಕಿನ ಕಡವಾಡದ ಗುನಗಿವಾಡಾ ಜನತಾ ವಿದ್ಯಾಲಯದ ಸಮೀಪ ಬರಗಾಲದ ನಿಮಿತ್ತ ತಹಶೀಲ್ದಾರ್ ಅಧಿಕಾರಿಗಳ ತಂಡ ಬೋರ್‌ವೆಲ್ ಕೊರೆಯಲು ಮುಂದಾದಾಗ, ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ತಡೆಯೊಡ್ಡಿದ ಕಾರಣ ಪೊಲೀಸ್ ಭದ್ರತೆಯಲ್ಲಿ ಬೋರ್‌ವೆಲ್ ಕೊರೆಸಿದ ಘಟನೆ ನಡೆದಿದೆ.

   ಕಡವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಉದ್ದೇಶದಿಂದ ಬೋರ್‌ವೆಲ್ ತೆರೆಯಲು ತಹಶೀಲ್ದಾರ್ ಜಿ.ಎನ್.ನಾಯ್ಕ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಬೋರ್‌ವೆಲ್ ಕೊರೆಸಲು ಮುಂದಾಗಿದ್ದರು. ಆದರೆ ಬೋರ್‌ವೆಲ್ ಕೊರೆಯಲು ಆಯ್ಕೆ ಮಾಡಿದ ಜಾಗವು ಖಾಸಗಿಯವರಿಗೆ ಸೇರಿದ್ದು, ಬಾವಿಗಳಲ್ಲಿ ನೀರಿನ ಕೊರತೆ ಆಗಬಹುದು ಎಂಬ ಕಾರಣದಿಂದ ಗೊಂದಲ ಉಂಟಾಗಿದೆ. ಸ್ಥಳೀಯ ಜನರಿಗೆ ನೀರು ಸರಬರಾಜು ಮಾಡುವುದಾದರೆ ಅಭ್ಯಂತರವಿಲ್ಲ. ಆದರೆ ಇಲ್ಲಿಂದ ಬೇರೆ ಕಡೆಗೆ ನೀರು ಸರಬರಾಜು ಮಾಡಿದರೆ, ಗ್ರಾಮದ ಎಲ್ಲ ಬಾವಿಗಳು ಬತ್ತಿ ಹೋಗಲಿವೆ. ಆದ್ದರಿಂದ ಇಲ್ಲಿ ಬೋರ್‌ವೆಲ್ ಬೇಡ. ಅಲ್ಲದೇ ಇದೇ ಪ್ರದೇಶದಲ್ಲಿ ಸರಕಾರದ ಹಣದಿಂದ ಸಾರ್ವಜನಿಕ ಬಾವಿಗಳನ್ನು ಖಾಸಗಿಯವರ ಕಾಂಪೌಂಡ್‌ನಲ್ಲಿ ನಿರ್ಮಿಸಲಾಗಿದೆ. ಆದರೆ ಖಾಸಗಿಯವರು ಸಾರ್ವಜನಿಕರಿಗೆ ನೀರು ಒಯ್ಯಲು ಬಿಡುತ್ತಿಲ್ಲ. ಮೊದಲು ಅವುಗಳಿಗೆ ಪಂಪ್‌ಸೆಟ್ ಅಳವಡಿಸಿ ಅಲ್ಲಿಂದ ನೀರು ಸರಬರಾಜು ಮಾಡಿ. ಇಲ್ಲಿ ಬೋರ್‌ವೆಲ್ ಕೊರೆಯುವುದು ಬೇಡ ಎಂದು ಇಲ್ಲಿನ ಸ್ಥಳೀಯರು ಆಕ್ಷೇಪ ವ್ಯಕ್ತ ಪಡಿಸಿದರು.

ಜನರು ವಿರೋಧ ವ್ಯಕ್ತ ಪಡಿಸುತ್ತಿರುವುದನ್ನು ಕಂಡ ತಹಶೀಲ್ದಾರರು ಪೊಲೀಸ್‌ನವರನ್ನು ಕರೆಸಿದಾಗ ವಿರೋಧಿಸಿದ ಸಾರ್ವಜನಿಕರನ್ನು ವಶಕ್ಕೆ ಪಡೆದುಕೊಂಡು ಗ್ರಾಮೀಣ ಪೊಲೀಸ್ ಠಾಣೆಗೆ ತರಲಾಯಿತು. ನಂತರ ಪೊಲೀಸ್ ಭದ್ರತೆಯಲ್ಲಿ ಬೋರ್‌ವೆಲ್ ಕೊರೆಯುವ ಕಾಮಗಾರಿ ಮುಂದುವರಿಯಿತು. ಕಾಮಗಾರಿ ಮುಗಿದ ನಂತರ ವಶಕ್ಕೆ ಪಡೆದವರನ್ನು ಬಿಡುಗಡೆ ಮಾಡಲಾಯಿತು.

ಸಾರ್ವಜನಿಕರ ಮಾತು: ಹತ್ತು ವರ್ಷದ ಹಿಂದೆ ಇಲ್ಲಿ ಬೋರ್‌ವೆಲ್ ಕೊರೆದು ಟ್ಯಾಂಕ್‌ನಲ್ಲಿ ನೀರು ಸಂಗ್ರಹಿಸಿ, ಪೈಪ್ ಲೈನ್ ಮೂಲಕ ಮನೆ ಮನೆಗೂ ನೀರು ಸರಬರಾಜು ಮಾಡಲಾಗುವುದು ಎಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಭರವಸೆ ನೀಡಲಾಗಿತ್ತು.

 ಆದರೆ ಬೋರ್‌ವೆಲ್ ಕೊರೆದು ಟ್ಯಾಂಕ್ ಕಟ್ಟಿದರೂ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡುವ ಭರವಸೆ ಇನ್ನು ಪೂರೈಸಿಲ್ಲ. ಗುನಗಿವಾಡಾ ಎತ್ತರದ ಗುಡ್ಡದ ಮೇಲಿರುವುದರಿಂದ ನೀರಿನ ಟ್ಯಾಂಕರ್‌ಗಳು ಗುಡ್ಡ ಹತ್ತಿ ಮೇಲೆ ಬರುವುದಿಲ್ಲ. ಹೀಗಾಗಿ ನಮ್ಮ ಗ್ರಾಮದ ಜನರು ತೀವ್ರ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ ಎಂದು ಸಾರ್ವಜನಿಕರು ಸ್ಥಳದಲ್ಲಿದ್ದವರಿಗೆ ಪ್ರತಿಕ್ರಿಯಿಸಿದರು.

ಅಧಿಕಾರಿಗಳ ಹೇಳಿಕೆ: ಬರಗಾಲದ ನಿಮಿತ್ತ ಸರಕಾರದ ಯೋಜನೆ ಪ್ರಕಾರ ನೀರು ಸರಬರಾಜು ಮಾಡಲು ಬೋರ್‌ವೆಲ್ ಹಾಕಿಸಲಾಗುತ್ತಿದೆ. ಇದಕ್ಕೆ ಸ್ಥಳೀಯ ಜನರು ಖಾಸಗಿ ಬಾವಿ ನೀರು ಬತ್ತಿ ಹೋಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಇಲ್ಲಿನ ನೀರನ್ನು ಅವರೂ ಕೂಡ ಬಳಸಬಹುದು. ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ, ಪೊಲೀಸ್ ರಕ್ಷಣೆ ಪಡೆಯುವುದು ಅನಿವಾರ್ಯವಾಗಿದ್ದರಿಂದ ತಹಶೀಲ್ದಾರರು ಪೊಲೀಸ್‌ರನ್ನು ಕರೆಯಿಸಿದರು. ನಿಯೋಜಿತ ಕಾಮಗಾರಿ ನಡೆಸಲಾಗಿದೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X