Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ನಪಂನಿಂದ ನೀರು ಪೂರೈಕೆಗೆ ಪರ್ಯಾಯ...

ಸುಳ್ಯ: ನಪಂನಿಂದ ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ ಬಗ್ಗೆ ಚರ್ಚೆ

ಪಯಸ್ವಿನಿಯಲ್ಲಿ ನೀರಿನ ಕೊರತೆ: ಒಂದು ವಾರಕ್ಕಷ್ಟೇ ನೀರು ಲಭ್ಯ

ವಾರ್ತಾಭಾರತಿವಾರ್ತಾಭಾರತಿ30 April 2016 10:36 PM IST
share
ಸುಳ್ಯ: ನಪಂನಿಂದ ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ ಬಗ್ಗೆ ಚರ್ಚೆ

ಸುಳ್ಯ, ಎ.30: ಪಯಸ್ವಿನಿ ನದಿಯಲ್ಲಿ ನೀರಿನ ಕೊರತೆ ಉಂಟಾಗಿದ್ದು, ಸುಳ್ಯ ನಗರಕ್ಕೆ ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ ಕುರಿತು ಚರ್ಚಿಸಲು ಸಂಘ-ಸಂಸ್ಥೆಗಳ ಮುಖಂಡರ ಸಭೆಯು ನಪಂ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಪಂಚಾಯತ್‌ನ ಪೌರ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಮಾತನಾಡಿ, ಇದೊಂದು ಎಚ್ಚರಿಕೆಯ ಗಂಟೆ. ಟೆಸ್ಟ್ ಡೋಸ್. ಇದನ್ನೇ ಸಹಿಸಲು ಆಗುತ್ತಿಲ್ಲ. ಭವಿಷ್ಯದಲ್ಲಿ ಸತತ ಇದನ್ನು ಎದುರಿಸಬೇಕು. ದೂರ ದೃಷ್ಟಿಯನ್ನು ಇಟ್ಟುಕೊಂಡು ನೀರನ್ನು ಇಂಗಿಸುವ ಕೆಲಸ ಮಾಡಬೇಕು. ಚೆಕ್‌ಡ್ಯಾಂ ಮಾಡುವುದರಿಂದಲೂ ಅಂತರ್ಜಲವನ್ನು ಉಳಿಸುವ ಕೆಲಸ ಮಾಡಬಹುದು. ಕಟ್ಟಡಕ್ಕೆ ಪರವಾನಿಗೆ ನೀಡುವಾಗ ನೀರನ್ನು ಇಂಗಿಸುವುದನ್ನು ಕಡ್ಡಾಯ ಮಾಡಬೇಕು ಎಂದರು.

ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ಮಾತನಾಡಿ, ಹೆಚ್ಚುವರಿ ಕೊಳವೆ ಬಾವಿ ಕೊರೆಸಿ ಟ್ಯಾಂಕರ್ ಮೂಲಕ ನೀರು ನೀಡುವ ವ್ಯವಸ್ಥೆ ಮಾಡಬೇಕೆಂದರು.

ಚೆನ್ನಕೇಶವ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಹರಿಪ್ರಸಾದ್ ಮಾತನಾಡಿ, ದೇವಸ್ಥಾನದ ಎರಡನೆ ಮಹಡಿಯಲ್ಲಿ ನೀರಿನ ಟ್ಯಾಂಕ್ ಇದ್ದು, ಪಂಚಾಯತ್ ನೀರು ಅಲ್ಲಿಗೆ ತಲುಪುತ್ತಿಲ್ಲ. ಕೊಳವೆ ಬಾವಿ ನೀರನ್ನು ಈಗ ಬಳಕೆ ಮಾಡುತ್ತಿದ್ದೇವೆ. ಅದೂ ಬರಿದಾಗುವ ಸೂಚನೆಯಿದೆ. ನೀರಿನ ಬಳಕೆಯನ್ನು ಕಡಿಮೆ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ನದಿಯಿಂದ ಮರಳು ತೆಗೆಯುವಾಗ ಅದರೊಂದಿಗೆ ನೀರೂ ಕೂಡಾ ಖಾಲಿಯಾಗುತ್ತದೆ. ಹಾಗಾಗಿ ಮರಳು ತೆಗೆಯುವುದನ್ನು ತಕ್ಷಣ ನಿರ್ಬಂಧಿಸಬೇಕು ಎಂದು ಪಂಚಾಯತ್ ಸದಸ್ಯ ನಜೀರ್ ಶಾಂತಿನಗರ ಹೇಳಿದರು. ಮರಳು ತೆಗೆದ ಹೊಂಡದಲ್ಲಿ ನೀರು ನಿಲ್ಲುವುದರಿಂದ ಮರಳು ತೆಗೆದರೆ ಒಳ್ಳೆಯದು ಎಂದು ಜನಸ್ಪಂದನ ವೇದಿಕೆಯ ಸುಂದರ್ ರಾವ್ ಹೇಳಿದರು.

ನೀರನ್ನು ವ್ಯರ್ಥ ಮಾಡದಂತೆ ಜನರಲ್ಲಿ ಜಾಗೃತಿ ಮಾಡಿಸುವ ಕರಪತ್ರ ಮಾಡಿ ಹಂಚುವುದಾಗಿ ಲಯನ್ಸ್ ಕ್ಲಬ್ ಅಧ್ಯಕ್ಷ ಜಯರಾಮ ದೇರಪ್ಪಜ್ಜನಮನೆ ಹೇಳಿದರು.

ಪ್ರಕಾಶ್ ಹೆಗ್ಡೆ ಮಾತನಾಡಿ, ಇನ್ನೊಂದು ವಾರದವರೆಗೆ ಮಾತ್ರ ಪಯಸ್ವಿನಿ ನೀರು ಸಿಗಬಹುದು. ಹಾಗಾಗಿ ಎಲ್ಲಾ ಧರ್ಮದವರೂ ಸೇರಿ ಮಳೆಗಾಗಿ ದೇವರಿಗೆ ಮೊರೆ ಹೋಗಬೇಕು ಎಂದರು.

ರೋಟರಿ ಕ್ಲಬ್ ಅಧ್ಯಕ್ಷ ಬೆಳ್ಯಪ್ಪಗೌಡ, ವಿನಯ ಕುಮಾರ್ ಕಂದಡ್ಕ, ಅರುಳಪ್ಪನ್, ಪಂಚಾಯತ್ ಸದಸ್ಯರಾದ ಕೆ.ಎಂ.ಮುಸ್ತಫಾ, ಗೋಪಾಲ್ ನಡುಬೈಲು, ಗಿರೀಶ್ ಕಲ್ಲುಗದ್ದೆ, ಕಿರಣ ಕುರುಂಜಿ, ಶೀಲಾವತಿ, ಜಾನಕಿ, ಹರಿಣಾಕ್ಷಿ, ಶ್ರೀಲತಾ ಪ್ರಸನ್ನ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X