Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾರ್ಮಿಕರಿಗೆ ನಮಸ್ಕಾರ

ಕಾರ್ಮಿಕರಿಗೆ ನಮಸ್ಕಾರ

ಡಾ. ನಟರಾಜ್ ಹುಳಿಯಾರ್ಡಾ. ನಟರಾಜ್ ಹುಳಿಯಾರ್30 April 2016 10:44 PM IST
share
ಕಾರ್ಮಿಕರಿಗೆ ನಮಸ್ಕಾರ

ಇವತ್ತು ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ. ಶ್ರಮಿಕರ ದಿನಾಚರಣೆ ಎಂದು ಕೂಡ ಕರೆಯಲಾಗುವ ಈ ದಿನದಂದು ಎಲ್ಲ ಕಾರ್ಮಿಕ ಬಂಧುಗಳಿಗೂ ವಂದಿಸೋಣ. ಈ ಲೋಕದ ನಿತ್ಯದ ಬದುಕು ನಡೆಯಲು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ದುಡಿಯುತ್ತಿರುವ ಈ ಕಾರ್ಮಿಕ ಬಂಧುಗಳಿಗೆ ನಮ್ಮ ಕೃತಜ್ಞತೆ ಸಲ್ಲಿಸೋಣ. ಕಾರ್ಮಿಕ ದಿನಾಚರಣೆ ಆರಂಭವಾದ ಹಿನ್ನೆಲೆಯಲ್ಲಿರುವ ಘಟನೆಗಳು ಅನೇಕರಿಗೆ ಗೊತ್ತಿರಲಿಕ್ಕಿಲ್ಲ. ಅದು ಶುರುವಾದದ್ದು ಇಪ್ಪತ್ತನೆಯ ಶತಮಾನದ ಶುರುವಿನಲ್ಲಿ. 1886ರಲ್ಲಿ ಅಮೆರಿಕದ ಷಿಕಾಗೋದಲ್ಲಿ ಒಂದು ಚಾರಿತ್ರಿಕ ಲೇಬರ್ ಯೂನಿಯನ್ ಚಳವಳಿ ನಡೆಯಿತು. ಅದನ್ನು ‘‘ಎಯ್ಟಿ ಹವರ್ ಡೇ ಮೂವ್‌ಮೆಂಟ್’’ ಎನ್ನುತ್ತಾರೆ.

ಅಂದರೆ, ದುಡಿಯುವ ವರ್ಗಕ್ಕೆ ಎಂಟು ಗಂಟೆಗಳ ಕೆಲಸ, ಎಂಟು ಗಂಟೆಗಳ ಮನರಂಜನೆ ಹಾಗೂ ಎಂಟು ಗಂಟೆಗಳ ವಿರಾಮವಿರಬೇಕು ಎಂಬ ವೈಜ್ಞಾನಿಕ ಕಲ್ಪನೆ ಇದು. 4 ಮೇ 1886ರಂದು ಶಿಕಾಗೋದಲ್ಲಿ ದಿನಕ್ಕೆ ಎಂಟು ಗಂಟೆಗಳ ದುಡಿಮೆಗಾಗಿ ಕಾರ್ಮಿಕರು ಮುಷ್ಕರ ಮಾಡುತ್ತಿದ್ದರು. ಆಗ ಯಾರೋ ಅಪರಿಚಿತನೊಬ್ಬ ಪೊಲೀಸರತ್ತ ಬಾಂಬ್ ಎಸೆದ; ನಂತರ ಪೊಲೀಸರು ಗುಂಡು ಹಾರಿಸಿ ನಾಲ್ಕು ಜನರನ್ನು ಕೊಂದರು ಎಂದು ಒಂದು ವರದಿ ಇದೆ. ಆದರೆ ಅವತ್ತು ಷಿಕಾಗೋದ ಹೇ ಮಾರ್ಕೆಟ್‌ನ ಮಾಲಕರು ಪೊಲೀಸರ ಜೊತೆ ಶಾಮೀಲಾಗಿ ಚಳವಳಿ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹಲ್ಲೆ ಮಾಡಿದರು ಎಂಬ ವರದಿಯೂ ಇದೆ. ಇತಿಹಾಸದ ಪುಟಗಳಲ್ಲಿರುವ ಈ ಘಟನೆಗಳ ಸತ್ಯಾಸತ್ಯಗಳು ಏನೇ ಇರಲಿ, ಅಂದಿನ ಮಾಲಕ ವರ್ಗ ಕಾರ್ಮಿಕರ ನ್ಯಾಯಬದ್ಧ ಬೇಡಿಕೆಯನ್ನು ಒಪ್ಪಿಕೊಳ್ಳಲು ಸಿದ್ಧವಿರಲಿಲ್ಲ. ಆದರೆ ಈ ಮೇ 4ರ ಕಾರ್ಮಿಕರ ಬಲಿದಾನವನ್ನು ನೆನಪಿಸಿಕೊಳ್ಳಲು ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಆಚರಿಸಬೇಕೆಂಬ ಚಿಂತನೆ ಅಲ್ಲಿಂದ ಆರಂಭವಾಯಿತು.

1904ರಲ್ಲಿ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ನಡೆದ ಇಂಟರ್‌ನ್ಯಾಶನಲ್ ಸೋಷಲಿಸ್ಟ್ ಸಮ್ಮೇಳನ ಎಲ್ಲ ದೇಶಗಳಲ್ಲೂ ದಿನಕ್ಕೆ ಎಂಟು ಗಂಟೆಗಳ ದುಡಿಮೆಯ ಒತ್ತಾಯವನ್ನು ಮಂಡಿಸಲು ಹಾಗೂ ದುಡಿಯುವ ವರ್ಗದ ಬೇಡಿಕೆಗಳನ್ನು ಮಂಡಿಸಲು ಹಾಗೂ ವಿಶ್ವಶಾಂತಿಗಾಗಿ ಮೇ 1ರಂದು ಕೆಲಸಕ್ಕೆ ರಜೆ ಘೋಷಿಸಿಕೊಳ್ಳಲು ತೀರ್ಮಾನಿಸಿತು. ಈ ಎಲ್ಲದರ ಹಿಂದೆ ವಿವಿಧ ಬಗೆಯ ಕಮ್ಯುನಿಸ್ಟ್ ಚಿಂತನೆ, ಸಂಘಟನೆಗಳ ನಿರಂತರ ಶ್ರಮವಿದೆ. ಕಾಲ ಉರುಳಿದಂತೆ ಕಾರ್ಮಿಕರ ಎಂಟು ಗಂಟೆಗಳ ದುಡಿಮೆಯ ಬೇಡಿಕೆ ಜಗತ್ತಿನಾದ್ಯಂತ ಒಪ್ಪಿತವಾಯಿತು. ಹಲವು ರಾಷ್ಟ್ರಗಳಲ್ಲಿ ಮೇ ದಿನವನ್ನು ರಜಾ ದಿನವೆಂದು ಘೋಷಿಸಲಾಗಿದೆ. ಕರ್ನಾಟಕದಲ್ಲಿ ಎಂಬತ್ತರ ದಶಕದಲ್ಲಿ ರಾಮಕೃಷ್ಣ ಹೆಗಡೆಯವರ ಸರಕಾರ ಮೇ 1ರ ಕಾರ್ಮಿಕ ದಿನಾಚರಣೆಯಂದು ರಜಾ ಘೋಷಿಸುವ ಚಾರಿತ್ರಿಕ ನಿರ್ಣಯವನ್ನು ಕೈಗೊಂಡಿತು. ದೇಶದ ಇನ್ನು ಕೆಲವು ರಾಜ್ಯಗಳಲ್ಲೂ ಇದು ಜಾರಿಯಲ್ಲಿದೆ. ದೇಶಾದ್ಯಂತ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕ ವಲಯಗಳು ಕಾರ್ಮಿಕ ದಿನಾಚರಣೆಯನ್ನು ಆಚರಿಸುತ್ತವೆ. ಕಮ್ಯುನಿಸ್ಟ್ ಪಕ್ಷಗಳು ಕಾರ್ಮಿಕ ದಿನಾಚರಣೆಯನ್ನು ತಪ್ಪದೆ ನಡೆಸಿಕೊಂಡು ಬಂದಿವೆ.

  
 
       

share
ಡಾ. ನಟರಾಜ್ ಹುಳಿಯಾರ್
ಡಾ. ನಟರಾಜ್ ಹುಳಿಯಾರ್
Next Story
X