ಬೆಳ್ತಂಗಡಿ: ರುಡ್ಸೆಟ್ ತರಬೇತಿ ಕಾರ್ಯಕ್ರಮದ ಸಮಾರೋಪ
ಬೆಳ್ತಂಗಡಿ, ಎ.30: ಬೆಂಗಳೂರಿನಲ್ಲಿರುವ ರುಡ್ಸೆಟ್ ನ್ಯಾಷನಲ್ ಅಕಾಡೆಮಿ ಅಯೋಜಿಸಿದ್ದ 64 ನೆ ತಂಡದ ತರಬೇತುದಾರರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಧಮಸ್ಥಳದಲ್ಲಿ ನೆರವೇರಿತು.
ಕಾರ್ಯಕ್ರಮದಲ್ಲಿ ರುಡ್ಸೆಟ್ ನ್ಯಾಷನಲ್ ಅಕಾಡಮಿಯ ಅಧ್ಯಕ್ಷರು ಮತ್ತು ರುಡ್ಸೆಟ್ ಸಂಸ್ಥೆಗಳ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆ ಪ್ರಮಾಣ ಪತ್ರಗಳನ್ನು ವಿತರಿಸಿ ಆಶೀರ್ವಚನ ನೀಡಿ, ರುಡ್ಸೆಟ್ ಸಂಸ್ಥೆಯ ಹುಟ್ಟು ಮತ್ತು ಅದರ ಬೆಳವಣಿಗೆಯ ಜೊತೆಗೆ ಕೇಂದ್ರ ಸರಕಾರ ರುಡ್ಸೆಟ್ ಸಂಸ್ಥೆಯನ್ನು ಅನುಕರಣೀಯ ಮಾದರಿ ಎಂದು ಗುರುತಿಸಿ ಇಂದು ಬ್ಯಾಂಕುಗಳ ಸಹಯೋಗದೊಂದಿಗೆ ಸುಮಾರು 600 ಸ್ವ ಉದ್ಯೋಗ ಕೇಂದ್ರಗಳನ್ನು ತೆರೆದಿದೆ ಎಂದರು.
ವೇದಿಕೆಯಲ್ಲಿ ಹೇಮಾವತಿ ವಿ. ಹೆಗ್ಗಡೆ, ರುಡ್ಸೆಟ್ ಕೇಂದ್ರ ಕಚೇರಿಯ ಅಧಿಕಾರಿಗಳಾದ ಟಿ.ಪಿ. ಜಗದೀಶ ಮೂರ್ತಿ, ಅರುಣ ವಿ.ಜೆ. ಹಾಗೂ ಅಕಾಡೆಮಿಯ ನಿರ್ದೇಶಕ ಗಂಗಾದರ ಮೂರ್ತಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ದೇಶದಾದ್ಯಂತ ವಿವಿಧ ರಾಜ್ಯಗಳ ವಿವಿಧ ಬ್ಯಾಂಕುಗಳಿಂದ ಪ್ರಾಯೋಜಿಸಲ್ಪಟ್ಟ ಸಂಸ್ಥೆಗಳ 16 ನಿರ್ದೇಶಕರು ಮತ್ತು 23 ಉಪನ್ಯಾಸಕರು ಭಾಗವಹಿಸಿದ್ದರು. ರುಡ್ಸೆಟ್ ನ್ಯಾಷನಲ್ ಅಕಾಡೆಮಿಯ ಡೈರೆಕ್ಟರ್ ಜನರಲ್ ಎನ್. ಎಮ್. ಭಟ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು