Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಾಲಯಕ್ಕೆ ಮೊರೆ ಹೋದ ಬ್ಯಾಂಕ್...

ನ್ಯಾಯಾಲಯಕ್ಕೆ ಮೊರೆ ಹೋದ ಬ್ಯಾಂಕ್ ಅಧಿಕಾರಿ

"ನನಗೆ ಇಂಟರ್‌ನೆಟ್ ನಿಂದ ಮುಕ್ತಿ ಕೊಡಿ"

ವಾರ್ತಾಭಾರತಿವಾರ್ತಾಭಾರತಿ1 May 2016 9:00 AM IST
share
ನ್ಯಾಯಾಲಯಕ್ಕೆ ಮೊರೆ ಹೋದ ಬ್ಯಾಂಕ್ ಅಧಿಕಾರಿ

ಹೊಸದಿಲ್ಲಿ, ಮೇ 1: ಭಾರತದ ಸಂವಿಧಾನದಲ್ಲಿ ನೀಡಿರುವ ಬದುಕುವ ಹಕ್ಕು, "ಆನ್‌ಲೈನ್ ಮರೆಯುವ" ಹಕ್ಕನ್ನೂ ನೀಡಿದೆಯೇ? ದೆಹಲಿ ಹೈಕೋರ್ಟ್ ಈ ಜಿಜ್ಞಾಸೆಯ ಕಾನೂನಾತ್ಮಕ ತೀರ್ಮಾನಕ್ಕೆ ಮುಂದಾಗಿದ್ದು, ಈ ಬಗ್ಗೆ ಕೇಂದ್ರದ ಸ್ಪಷ್ಟನೆ ಕೇಳಿದೆ. ಜತೆಗೆ ಗೂಗಲ್ ಹಾಗೂ ಇನ್ನೊಂದು ಆನ್‌ಲೈನ್ ಕಾನೂನು ಸಲಹಾ ಸಂಸ್ಥೆಯ ಅಭಿಪ್ರಾಯವನ್ನೂ ಆಹ್ವಾನಿಸಿದೆ.

ದೆಹಲಿಯ ಬ್ಯಾಂಕ್ ಅಧಿಕಾರಿಯೊಬ್ಬರು ಎಲ್ಲ ಆನ್‌ಲೈನ್ ಸರ್ಚ್ ಎಂಜಿನ್‌ಗಳಿಂದ ತಮ್ಮ ವೈಯಕ್ತಿಕ ಮಾಹಿತಿಯನ್ನು ಕಿತ್ತುಹಾಕಲು ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ. ಆನ್‌ಲೈನ್‌ನಿಂದ ಅಜ್ಞಾತವಾಗಿರಲು ಅವಕಾಶ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿದ್ದು, ಯೂರೋಪಿಯನ್ ನ್ಯಾಯಾಲಯ ಗೂಗಲ್ ಹಾಗೂ ಮಾರಿಯೊ ಕೊಸ್ಟೆಜಾ ಪ್ರಕರಣದಲ್ಲಿ ನೀಡಿದ ತೀರ್ಪಿನ ಅನ್ವಯ "ಮರೆಯುವ ಹಕ್ಕನ್ನು" ಮಾನ್ಯ ಮಾಡಬೇಕು ಎಂದು ಕೋರಿದ್ದಾರೆ.

ಈ ಹಕ್ಕಿನ ಅನ್ವಯ ವ್ಯಕ್ತಿಗಳು ಸರ್ಚ್ ಎಂಜಿನ್‌ಗಳಾದ ಗೂಗಲ್, ಯಾಹೂ ಹಾಗೂ ಬಿಂಗ್‌ಗಳಿಂದ ತಮ್ಮ ವೈಯಕ್ತಿಕ ವಿವರಗಳನ್ನು ತೆಗೆದು ಹಾಕುವಂತೆ ಕೋರಲು ಅವಕಾಶವಿದೆ. ಕೆಲ ನಿರ್ದಿಷ್ಟ ವಿಷಯಗಳನ್ನು ಮೂರನೇ ವ್ಯಕ್ತಿ ತಿಳಿದುಕೊಳ್ಳುವುದನ್ನು ತಡೆಯಲು ಇದು ಅನುಕೂಲ ಕಲ್ಪಿಸುತ್ತದೆ.

"ನನ್ನ ವೈವಾಹಿಕ ವ್ಯಾಜ್ಯದ ವಿವರಗಳಿಂದಾಗಿ ನಾನು ಹತಾಶನಾಗಿದ್ದೇನೆ. ಇದು ನ್ಯಾಯಾಲಯದಲ್ಲಿ ಹಲವು ವರ್ಷ ಹಿಂದೆಯೇ ಇತ್ಯರ್ಥವಾಗಿದ್ದರೂ, ಆನ್‌ಲೈನ್‌ನಲ್ಲಿ ಹಾಗೆಯೇ ಉಳಿಸಲಾಗಿದೆ. ಇಂಡಿಯನ್ ಕಾನೂನ್ ಎಂಬ ವೆಬ್‌ಸೈಟ್ ಈ ಮಾಹಿತಿಯನ್ನು ಉಲ್ಲೇಖಿಸಿ ಇನ್ನೂ ವಿವಾದ ಇದೆ ಎಂದು ಪ್ರಕಟಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಇತರ ವಿವರಗಳೂ ಗೂಗಲ್ ಹಾಗೂ ಇತರ ಸರ್ಚ್ ಎಂಜಿನ್‌ಗಳಲ್ಲಿ ಲಭ್ಯವಿದೆ ಎಂದು ವಿವರಿಸಿದ್ದಾರೆ.
ಸೆಪ್ಟೆಂಬರ್ 19 ರೊಳಗೆ ಈ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಗೂಗಲ್‌ಗೆ ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X