Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಶಕಗಳ ಬೇಡಿಕೆಗೆ ಕೊನೆಗೂ ಮುಕ್ತಿ :...

ದಶಕಗಳ ಬೇಡಿಕೆಗೆ ಕೊನೆಗೂ ಮುಕ್ತಿ : ಕೋಲ್ಚಾರು - ಬಂದಡ್ಕ ರಸ್ತೆ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ1 May 2016 2:01 PM IST
share
ದಶಕಗಳ ಬೇಡಿಕೆಗೆ ಕೊನೆಗೂ ಮುಕ್ತಿ : ಕೋಲ್ಚಾರು - ಬಂದಡ್ಕ ರಸ್ತೆ ಲೋಕಾರ್ಪಣೆ

ಸುಳ್ಯ, ಮೇ 1: ಕರ್ನಾಟಕ - ಕೇರಳ ರಾಜ್ಯಗಳ ಬಹಳ ವರ್ಷಗಳ ಬೇಡಿಕೆಯಾದ ಆಲೆಟ್ಟಿ, ಕೋಲ್ಚಾರು, ಕಣಕ್ಕೂರು, ಬಂದಡ್ಕ ಅಂತಾರಾಜ್ಯ ರಸ್ತೆಯು ಅಭಿವೃದ್ಧಿಗೊಂಡು ಲೋಕಾರ್ಪಣೆಗೊಂಡಿದೆ.

ರಸ್ತೆಗಳೆಂದರೆ ರಕ್ತ ಹರಿಯುವ ನಾಡಿಗಳಿದ್ದಂತೆ. ರಕ್ತ ಹರಿದರೆ ಮಾತ್ರ ದೇಹಕ್ಕೆ ಶಕ್ತಿ. ಅದೇ ರೀತಿ ರಸ್ತೆ ಸಂಚಾರ ಸುಗಮವಾದರೆ ಮಾತ್ರ ಊರಿಗೆ ಶಕ್ತಿ ಎಂದು ಉದ್ಘಾಟನೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೆಳಿದರು.

ಈ ರಸ್ತೆ ಅಭಿವೃದ್ಧಿಯಿಂದ ಎರಡು ರಾಜ್ಯಗಳ ಸಂಭಂದದ ಜತೆಗೆ ವ್ಯವಹಾರದ ಅಭಿವೃದ್ಧಿಗೆ ಪೂರಕವಾಗಲಿದೆ. ಸಾರ್ವಜನಿಕರಿಗೆ ಜನಹಿತ ಉದ್ದೇಶಕ್ಕಾಗಿ ಈ ರಸ್ತೆಯ ಉಪಯೋಗ ಅಗತ್ಯ. ಜೀವ ಜಲ ಉಳಿಸುವ ನಿಟ್ಟಿನಲ್ಲಿ ಒಂದು ಗಿಡವನ್ನು ನೆಟ್ಟು ಪಾಪದಿಂದ ಮುಕ್ತನಾಗು ಎಂಬಘೋಷ ವಾಕ್ಯದೊಂದಿಗೆ ಅಭಿವೃದ್ಧಿ ಜತೆಗೆ ಪರಿಸರ ಉಳಿಸುವ ದೃಷ್ಟಿಕೋನ ನಮ್ಮದಾಗಬೇಕು ಎಂದು ಸಚಿವರು ಹೇಳಿದರು.

ಮಂಗಳೂರು ಲೋಕಸಭಾ ಸದಸ್ಯ ನಳಿನ್‌ಕುಮಾರ್ ಕಟೀಲ್ ಮಾತನಾಡಿ ಕೋಲ್ಚಾರ್-ಬಂದಡ್ಕ ರಸ್ತೆಯ ಮೂಲಕ ಕಾಸರಗೋಡು ಕರ್ನಾಟಕದ ಕನ್ನಡ ಜನರ ಸಂಬಂಧ ಹೆಚ್ಚಾಗಿದೆ. ರಸ್ತೆಯ ಕನಸುಕಂಡವರಿಗೆ ಇಂದು ಕನಸು ನನಸಾಗಿದೆ. ಹಿಂದಿನ ಬಿಜೆಪಿ ಸರಕಾರ ಮತ್ತು ಈಗಿನ ಕಾಂಗ್ರೆಸ್ ಸರಕಾರದ -ಪ್ರಯತ್ನದ ಮೂಲಕ ಈ ರಸ್ತೆ ಲೋಕಾರ್ಪಣೆಗೊಂಡಿದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಶಾಸಕ ಎಸ್.ಅಂಗಾರ ವಹಿಸಿದರು. ಮುಖ್ಯ ಅತಿಥಿಗಳಾಗಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿ, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ರಾಜೀವ ಗಾಂಧಿ ಆರೋಗ್ಯ ವಿ.ವಿ ಸಿಂಡಿಕೇಟ್ ಸದಸ್ಯ ಡಾರಘು, ಮಂಗಳೂರು ವಿ.ವಿ ಸಿಂಡಿಕೇಟ್ ಸದಸ್ಯ ವಿಜಯಕುಮಾರ್ ಸೊರಕೆ, ತಾ.ಪಂ.ಮಾಜಿ ಅಧ್ಯಕ್ಷರಾದ ಜಯಪ್ರಕಾಶ್ ಕುಂಚಡ್ಕ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ಮಾಜಿ ಅಧ್ಯಕ್ಷ ವೆಂಕಪ್ಪ ಗೌಡ, ತಾ.ಪಂ.ಸದಸ್ಯರಾದ ಪದ್ಮಾವತಿ ಕುಡೆಂಬಿ, ಅಶೋಕ್ ನೆಕ್ರಾಜೆ, ಆಲೆಟ್ಟಿ ಗ್ರಾ.ಪಂ.ಅಧ್ಯಕ್ಷ ಧನಂಜಯ ಕುಂಚಡ್ಕ ಭಾಗವಹಿಸಿದರು.

ಲೋಕೋಪಯೋಗಿ ಇಂಜಿನಿಯರ್ ಸಣ್ಣೇ ಗೌಡ ಸ್ವಾಗತಿಸಿ, ಶಿಕ್ಷಕ ಅಚ್ಚುತ ಅಟ್ಲೂರು ಮತ್ತು ನ್ಯಾಯವಾದಿ ದಿನೇಶ್ ಅಂಬೆಕಲ್ಲು, ಪುರುಷೋತ್ತಮ ಪೊಡ್ಡನಕೊಚ್ಚಿ ಕಾರ್ಯಕ್ರಮನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X