Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 8 ಲಕ್ಷ ಜನರ ಆಹಾರವನ್ನು ಕೊಳೆಯಲು...

8 ಲಕ್ಷ ಜನರ ಆಹಾರವನ್ನು ಕೊಳೆಯಲು ಬಿಟ್ಟಿದೆ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ !

ವಾರ್ತಾಭಾರತಿವಾರ್ತಾಭಾರತಿ2 May 2016 9:06 AM IST
share
8 ಲಕ್ಷ ಜನರ ಆಹಾರವನ್ನು ಕೊಳೆಯಲು ಬಿಟ್ಟಿದೆ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ !

ಬೆಂಗಳೂರು, ಮೇ 2: ಭಾರತದ ಆಹಾರ ನಿಗಮ (ಎಫ್‌ಸಿಐ) ದೇಶಾದ್ಯಂತ ಇರುವ ತನ್ನ 1,889 ಗೋದಾಮುಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ 46,658 ಟನ್ ಆಹಾರವನ್ನು ಕೊಳೆಯಲು ಬಿಟ್ಟಿದೆ. ಜತೆಗೆ 143.74 ಟನ್ ಆಹಾರ ಧಾನ್ಯ ಕಳ್ಳತನವಾಗಿದೆ. ಇವೆರಡನ್ನೂ ಪಟ್ಟು ಸೇರಿದರೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಆದ್ಯತಾ ವಲಯದ ಕುಟುಂಬಗಳ ಪೈಕಿ ಎಂಟು ಲಕ್ಷ ಮಂದಿಗೆ ಇಡೀ ವರ್ಷದ ಆಹಾರ ಒದಗಿಸಬಹುದು.

ಅಂದರೆ ಇಡೀ ಬೆಂಗಳೂರಿನ ಶೇಕಡ 10 ರಷ್ಟು ಮಂದಿಗೆ, ಇಡೀ ಮುಂಬೈ ನಗರದ ಶೇಕಡ 6 ರಷ್ಟು ಮಂದಿಗೆ ಪ್ರತಿ ತಿಂಗಳೂ ಐದು ಕೆಜಿಯಂತೆ ವಿತರಿಸುವಷ್ಟು ಆಹಾರ ಧಾನ್ಯ ವ್ಯರ್ಥವಾಗುತ್ತಿದೆ. ಹಲವಾರು ವರ್ಷಗಳಿಂದ ಈ ಸಮಸ್ಯೆ ಇದ್ದು, ಕಳೆದ ಕೆಲ ದಶಕಗಳಲ್ಲಿ ಲಕ್ಷಾಂತರ ಟನ್ ಆಹಾರ ಹೀಗೆ ವ್ಯರ್ಥವಾಗಿ ಹೋಗಿದೆ. ಇದರಿಂದಾಗಿ ಆಹಾರ ನಿಗಮದ ಹೆಚ್ಚುವರಿ ದಾಸ್ತಾನು ಪ್ರಮಾಣ ಕೂಡಾ ಕಡಿಮೆಯಾಗುತ್ತಿದೆ.
 

ಇಂಥ ಸೋರುವಿಕೆ ಹೆಚ್ಚುವ ನಿರೀಕ್ಷೆ ಇದೆ ಎಂಬ ಆತಂಕವನ್ನು ಎಫ್‌ಸಿಐ ಅಧ್ಯಕ್ಷ ಯೋಗೀಂದ್ರ ತ್ರಿಪಾಠಿ ವ್ಯಕ್ತಪಡಿಸುತ್ತಾರೆ. "2015-16ರಲ್ಲಿ ನೈಸರ್ಗಿಕ ವಿಕೋಪದಿಂದಾಗಿ ಇಷ್ಟೊಂದು ದೊಡ್ಡ ಪ್ರಮಾಣದ ಆಹಾರ ಧಾನ್ಯ ನಷ್ಟವಾಗಿದೆ. 1990ರ ದಶಕದಲ್ಲಿ ಹಾಗೂ 2013ರಲ್ಲೂ ಕೊರತೆ ಇತ್ತು. ಆದರೆ ನಾವು ಬಹುತೇಕ ಈ ಸಮಸ್ಯೆಯನ್ನು ಬಗೆಹರಿಸಿದ್ದೇವೆ" ಎಂದು ಸ್ಪಷ್ಟನೆ ನೀಡುತ್ತಾರೆ.

ಮತ್ತೊಬ್ಬ ಅಧಿಕಾರಿಯ ಪ್ರಕಾರ, 2015-16ರಲ್ಲಿ ವ್ಯರ್ಥವಾಗಿರುವ ಪ್ರಮಾಣ ಹಿಂದಿನ ಎರಡು ವರ್ಷಗಳಿಗೆ ಹೋಲಿಸಿದರೆ ಕಡಿಮೆ. ಇದನ್ನು ಕನಿಷ್ಠಗೊಳಿಸುವ ಬಗ್ಗೆ ಎಲ್ಲೆಡೆ ಕ್ರಮ ಕೈಗೊಳ್ಳಲಾಗಿದೆ. ಉಗ್ರಾಣಗಳಲ್ಲಿ 15.65 ದಶಲಕ್ಷ ಟನ್ ಆಹಾರ ಹೆಚ್ಚುವರಿ ದಾಸ್ತಾನು ಇದೆ"

share
ವಾರ್ತಾಭಾರತಿ
ವಾರ್ತಾಭಾರತಿ
Next Story
X