ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು
ಮಂಜೇಶ್ವರ, ಮೇ 2: ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದು ರವಿವಾರ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜೋಡುಕಲ್ಲು ಮಡಂದೂರು ನಿವಾಸಿ ರಮಾನಾಥ ಬಂಗೇರರ ಪುತ್ರ ಸುರೇಶ್ (35) ಮೃತಪಟ್ಟ ಯುವಕ.
ಮೃತ ಸುರೇಶ್ ಪತ್ನಿ, ಓರ್ವ ಪುತ್ರ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.
Next Story