Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ರಾಜಕಾಲುವೆಗಳ ದುರಸಿ್ತ...

ಶಿವಮೊಗ್ಗ ರಾಜಕಾಲುವೆಗಳ ದುರಸಿ್ತ ಕಾರ್ಯಕೆ್ಕ ಚಾಲನೆ

ಪ್ರತ್ಯೇಕ ತಂಡಗಳ ರಚನೆ! 80 ಸಿಬ್ಬಂದಿಯ ಬಳಕೆ

ವಾರ್ತಾಭಾರತಿವಾರ್ತಾಭಾರತಿ2 May 2016 10:14 PM IST
share
ಶಿವಮೊಗ್ಗ ರಾಜಕಾಲುವೆಗಳ ದುರಸಿ್ತ ಕಾರ್ಯಕೆ್ಕ ಚಾಲನೆ

<ಬಿ. ರೇಣುಕೇಶ್

ಶಿವಮೊಗ್ಗ, ಮೇ 2: ಕಸಕಡ್ಡಿ, ಹೂಳು ತುಂಬಿಕೊಂಡು ಅವ್ಯವಸ್ಥೆಯ ಆಗರವಾಗಿ ಪರಿಣಮಿಸಿದ್ದ ಹಾಗೂ ಮಳೆಗಾಲದಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗಲು ಸಾಧ್ಯವಾಗದಂತಹ ದುಃಸ್ಥಿತಿಯಲ್ಲಿದ್ದ ನಗರ ವ್ಯಾಪ್ತಿಯಲ್ಲಿರುವ ರಾಜಕಾಲುವೆಗಳ ದುರಸ್ತಿಗೆ ಕೊನೆಗೂ ಮಹಾನಗರ ಪಾಲಿಕೆ ಆಡಳಿತ ಮುಂದಾಗಿದೆ. ಪಾಲಿಕೆಯ ಈ ಕ್ರಮದಿಂದ ರಾಜಕಾಲುವೆ ಇಕ್ಕೆಲ ಹಾಗೂ ತಗ್ಗು ಪ್ರದೇಶದ ಬಡಾವಣೆಗಳ ನಿವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ. ಹೌದು. ರಾಜಕಾಲುವೆಗಳ ಸಮಗ್ರ ದುರಸ್ತಿ ಹಾಗೂ ನಿರ್ವಹಣೆಗೆ ಪಾಲಿಕೆ ಆಡಳಿತ ಸದ್ದುಗದ್ದಲವಿಲ್ಲದೆ ಬೃಹತ್ ಸ್ವಚ್ಛತಾ ಅಭಿಯಾನವೊಂದನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಮೇ 2 ರಿಂದ 14 ರವರೆಗೆ ಈ ಅಭಿಯಾನ ನಡೆಯಲಿದೆ. ಇದಕ್ಕೆ ವಾರ್ಡ್‌ವಾರು ಪ್ರತ್ಯೇಕ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಸುಮಾರು 80 ಕಾರ್ಮಿಕರನ್ನು ಬಳಕೆ ಮಾಡಲಾಗುತ್ತಿದೆ. ಸೋಮವಾರ ಪಾಲಿಕೆಯ ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷ ಐಡಿಯಲ್ ಗೋಪಿ ಸುದ್ದಿಗಾರ ರೊಂದಿಗೆ ಮಾತನಾಡಿ, ಮಳೆಗಾಲ ಆರಂಭಕ್ಕೆ ಇನ್ನೂ ಒಂದು ತಿಂಗಳಿದೆ. ಅಷ್ಟರಲ್ಲಿ ನಗರ ವ್ಯಾಪ್ತಿಯಲ್ಲಿರುವ ರಾಜಕಾಲುವೆ ಹಾಗೂ ಪ್ರಮುಖ ಚರಂಡಿಗಳನ್ನು ಕಸಕಡ್ಡಿಗಳಿಂದ ಸ್ವಚ್ಛಗೊಳಿಸುವುದರ ಜೊತೆಗೆ ದುರಸ್ತಿ ಕಾರ್ಯ ಕೈಗೊಳ್ಳುವ ಭಾರೀ ಸ್ವಚ್ಛತಾ ಅಭಿಯಾನವನ್ನು ಪಾಲಿಕೆ ಆಡಳಿತ ಹಮ್ಮಿಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಮೇಯರ್ ಎಸ್.ಕೆ.ಮರಿಯಪ್ಪ ಹಾಗೂ ಆಯುಕ್ತೆ ತುಷಾರಮಣಿಯವರು ಈ ನಿಟ್ಟಿನಲ್ಲಿ ವಿಶೇಷ ಆಸಕ್ತಿ ವಹಿಸಿದ್ದಾರೆ. ಮಳೆಗಾಲ ಆರಂಭವಾಗುವುದರೊಳಗೆ ರಾಜಕಾಲುವೆ, ಮಳೆ ನೀರು ಹರಿದು ಹೋಗುವ ಪ್ರಮುಖ ಚರಂಡಿ ಹಾಗೂ ತಗ್ಗು ಪ್ರದೇಶ ಗಳ ಸಮಗ್ರ ನಿರ್ವಹಣೆಗೆ ಮುಂದಾಗಿದ್ದಾರೆ. ಇದು ನಿಜಕ್ಕೂ ಸ್ವಾಗತಾರ್ಹ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ. ಇಂದಿನಿಂದ ಆರಂಭವಾಗಿರುವ ಈ ಸ್ವಚ್ಛತಾ ಅಭಿಯಾನವು ಮೇ 14ರವರೆಗೆ ನಿರಂತರವಾಗಿ ನಡೆಯಲಿದೆ. ವಾರ್ಡ್‌ವಾರು ಅಧಿಕಾರಿಗಳ ನೇತೃತ್ವ ದಲ್ಲಿ ಮೇಲುಸ್ತುವಾರಿ ತಂಡ ರಚನೆ ಮಾಡ ಲಾಗಿದೆ. ಕಾಲಮಿತಿಯೊಳಗೆ ಈ ತಂಡಗಳು ತಮ್ಮ ವ್ಯಾಪ್ತಿಯ ಲ್ಲಿರುವ ರಾಜಕಾಲುವೆಗಳ ದುರಸ್ತಿಗೆ ಅಗತ್ಯ ಕ್ರಮಕೈಗೊ ಳ್ಳಲಿವೆ ಎಂದು ಐಡಿಯಲ್ ಗೋಪಿ ಮಾಹಿತಿ ನೀಡಿದ್ದಾರೆ. ಜಲಾವೃತ ಸಾಮಾನ್ಯ: ಮಳೆಗಾಲದ ವೇಳೆ ನಗರದ ಹಲವೆಡೆ ರಸ್ತೆ ಹಾಗೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು, ಮನೆಗಳು ಜಲಾವೃತವಾಗುವುದು ಸರ್ವೇಸಾಮಾನ್ಯ. ಇದಕ್ಕೆ ರಾಜಕಾಲುವೆ, ಪ್ರಮುಖ ಚರಂಡಿಗಳ ಅವ್ಯವಸ್ಥೆಯೇ ಕಾರಣವಾಗಿತ್ತು. ಕಾಲುವೆಗಳಲ್ಲಿ ತುಂಬಿಕೊಂಡಿರುತ್ತಿದ್ದ ಕಸಕಡ್ಡಿ, ಹೂಳು, ಸಣ್ಣಪುಟ್ಟ ದುರಸ್ತಿಯ ಕಾರಣದಿಂದ ಮಳೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ತಗ್ಗು ಪ್ರದೇಶಗಳಿಗೆ ನುಗ್ಗುತ್ತಿತ್ತು. ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ, ಪೂರ್ವಭಾವಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವುದರ ನೇರ ಪರಿಣಾಮ ರಾಜಕಾಲುವೆ ಹಾಗೂ ತಗ್ಗುಪ್ರದೇಶಗಳ ನಿವಾಸಿಗಳ ಮೇಲೆ ಬೀರುತ್ತಿತ್ತು. ತಮ್ಮದಲ್ಲದ ತಪ್ಪಿಗೆ ನಿವಾಸಿಗಳು ತೊಂದರೆ ಎದುರಿಸಬೇಕಾಗಿತ್ತು. ಕೆಲ ಬಡಾವಣೆಗಳ ನಿವಾಸಿಗಳಂತೂ ಮಳೆಗಾಲ ಆರಂಭವಾಗುತ್ತಿದ್ದಂತೆ ಯಾವಾಗ ತಮ್ಮ ಮನೆಗಳಿಗೆ ನೀರು ನುಗ್ಗುವುದೋ ಎಂಬ ಆತಂಕದಲ್ಲಿಯೇ ದಿನದೂಡುವಂತಾಗಿತ್ತು.

ಮೇಯರ್, ಆಯುಕ್ತರ ವಿಶೇಷ ಆಸಕ್ತಿ: ರಾಜಕಾಲುವೆ ಹಾಗೂ ಚರಂಡಿಯ ಅವ್ಯವಸ್ಥೆ ಯಿಂದ ಮಳೆಗಾಲದ ವೇಳೆ ತಗ್ಗುಪ್ರದೇಶಗಳು ಜಲಾವೃತವಾಗುವುದನ್ನು ತಪ್ಪಿಸುವ ಉದ್ದೇಶದಿಂದ ಮೇಯರ್ ಎಸ್.ಕೆ.ಮರಿಯಪ್ಪ, ಆಯುಕ್ತೆ ತುಷಾರಮಣಿಯವರು ವಿಶೇಷ ಆಸಕ್ತಿವಹಿಸಿ ರಾಜಕಾಲುವೆ ಹಾಗೂ ಮಳೆ ನೀರು ಹರಿದು ಹೋಗುವ ಪ್ರಮುಖ ಚರಂಡಿ ಮತ್ತು ತಗ್ಗು ಪ್ರದೇಶಗಳನ್ನು ಮೇಲ್ದರ್ಜೆಗೇರಿಸಲು ಕ್ರಮಕೈಗೊಂಡಿದ್ದಾರೆ.

<ಐಡಿಯಲ್ ಗೋಪಿ, ಮನಪಾ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X