ಕಲ್ಲಬೆಟ್ಟು: ಸಾಮೂಹಿಕ ಸತ್ಯನಾರಾಯಣ ಪೂಜೆ
ಮೂಡುಬಿದಿರೆ, ಮೇ 2: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ), ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಕಲ್ಲಬೆಟ್ಟು ಮೂಡುಬಿದಿರೆ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮೂಡುಬಿದಿರೆ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಲ್ಲಬೆಟ್ಟುವಿನ ಗೋವುಗುಡ್ಡೆಯ ಶ್ರೀ ಸತ್ಯನಾರಾಯಣ ಕಟ್ಟೆಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆಯು ರವಿವಾರ ನಡೆಯಿತು.
ಪೂಜಾ ಸಮಿತಿಯ ಅಧ್ಯಕ್ಷ ಜೊಸ್ಸಿ ಮಿನೇಜಸ್ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್ ಭಾಗವಹಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಸ್ಕೆಡಿಆರ್ಡಿಪಿಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ರನ್ನು ಗೌರವಿಸಲಾಯಿತು.
ಕಾರ್ಕಳ ಕೆಸಿಎಂಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ನೆಲ್ಲಿಮಾರ್ ಧಾರ್ಮಿಕ ಉಪನ್ಯಾಸ ನೀಡಿದರು.
ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ, ಕಾರ್ಕಳ ಯೋಜನಾಧಿಕಾರಿ ಕೃಷ್ಣ ಟಿ., ಪುರಸಭಾಧ್ಯಕ್ಷೆ ರೂಪಾ ಶೆಟ್ಟಿ, ಮೂಡಾ ಅಧ್ಯಕ್ಷ ಸುರೇಶ್ ಕೋಟ್ಯಾನ್, ಪೂಜಾ ಸಮಿತಿಯ ಗೌರವಾಧ್ಯಕ್ಷ ಶ್ರೀಪತಿ ಭಟ್, ಒಕ್ಕೂಟದ ವಲಯಾಧ್ಯಕ್ಷ ನಾರಾಯಣ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಪುತ್ತಿಗೆ ವಲಯದ ಮೇಲ್ವಿಚಾರಕ ಉಮೇಶ್ ಸ್ವಾಗತಿಸಿದರು. ಮೂಡುಬಿದಿರೆ ವಲಯದ ಮೇಲ್ವಿಚಾರಕಿ ಶಶಿಕಲಾ ಬಂಗೇರಾ ವರದಿ ವಾಚಿಸಿದರು. ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.
ಪೂಜಾ ಸಮಿತಿಯ ಸದಸ್ಯ ದಿನೇಶ್ ಪೂಜಾರಿ ವಂದಿಸಿದರು. ಸೇವಾ ಪ್ರತಿನಿಧಿಗಳಾದ ಪ್ರೀತಿ ಮತ್ತು ಅನಿತಾ ಸಹಕರಿಸಿದರು.