Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಬ್ಬು ಬೆಳೆ ಇಳಿಕೆ- ಸಕ್ಕರೆ ಬೆಲೆ...

ಕಬ್ಬು ಬೆಳೆ ಇಳಿಕೆ- ಸಕ್ಕರೆ ಬೆಲೆ ಹೆಚ್ಚಳವಾಗುವ ನಿರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ3 May 2016 6:45 PM IST
share
ಕಬ್ಬು ಬೆಳೆ ಇಳಿಕೆ- ಸಕ್ಕರೆ ಬೆಲೆ ಹೆಚ್ಚಳವಾಗುವ ನಿರೀಕ್ಷೆ

ಬೆಂಗಳೂರು.ಮೇ.3: ರಾಜ್ಯದಲ್ಲಿ ಕಬ್ಬು ಬೆಳೆ ಗಣನೀಯವಾಗಿ ಇಳಿಕೆಯಾಗಿದ್ದು, ಬರುವ ವರ್ಷ ಸಕ್ಕರೆ ಬೆಲೆ ಗಣನೀಯವಾಗಿ ಹೆಚ್ಚಳವಾಗುವ ನಿರೀಕ್ಷೆಯಿದೆ.
ಜಲಾಶಯಗಳಲ್ಲಿ ನೀರಿಲ್ಲದೇ ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಕಬ್ಬು ಇಳುವರಿ ಸುಮಾರು 70 ಲಕ್ಷ ಟನ್‌ನಷ್ಟು ಕಡಿಮೆಯಾಗಲಿದೆ. ಇದರಿಂದಾಗಿ ಸಕ್ಕರೆ ಬೆಲೆ 40ರೂ ದಾಟುವ ಸಾಧ್ಯತೆಯಿದೆ.

ಈ ಬಾರಿ 450 ಲಕ್ಷ ಮೆಟ್ರಿಕ್ ಟನ್ ಕಬ್ಬು ದೊರೆಯುವ ನಿರೀಕ್ಷೆಯಿತ್ತು. ಆದರೆ ಹಿಂದಿನ ಅಂದಾಜಿಗೆ ವ್ಯತಿರಿಕ್ತವಾಗಿ ಈ ಪ್ರಮಾಣ 380 ಲಕ್ಷ ಟನ್‌ಗಳಷ್ಟು ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಕಳೆದ ವರ್ಷ ಹೆಚ್ಚಿನ ಕಬ್ಬು ಇಳುವರಿ ಬಂದ ಹಿನ್ನೆಲೆಯಲ್ಲಿ ಕಬ್ಬಿಗೆ ಬೇಡಿಕೆ ಕಡಿಮೆಯಾಗಿದೆ. ಇದರಿಂದಾಗಿ ಸಕ್ಕರೆ ಬೆಲೆ 20 ರೂ ಆಸುಪಾಸಿನಲ್ಲಿತ್ತು. ಇದೀಗ ಸಕ್ಕರೆ ದರ 27 ರಿಂದ 30 ರೂ ನಷ್ಟಿದೆ. ಶೀಘ್ರದಲ್ಲೇ ದರ ದುಪ್ಪಟ್ಟ್ಟಾಗಲಿದೆ.

ಅಂದ ಹಾಗೆ ಕಬ್ಬಿನ ಉತ್ಪಾದನೆ ಪ್ರಮಾಣ ಹೆಚ್ಚಿದ್ದುದರಿಂದ ಕಳೆದ ಮೂರು ವರ್ಷಗಳಲ್ಲಿ ಬೆಳೆದ ಕಬ್ಬನ್ನು ನಿಗದಿತ ಪ್ರಮಾಣದಲ್ಲಿ ಅರೆಯಲು ಸಕ್ಕರೆ ಕಾರ್ಖಾನೆಗಳು ವಿಫಲವಾಗಿದಲ್ಲದೆ ತಾವು ಅರೆದ ಕಬ್ಬಿಗೆ ಪ್ರತಿಯಾಗಿ ಕಬ್ಬಿಗೆ ನಿಗದಿಯಾದ ಬೆಲೆಯನ್ನು ಕೊಡಲು ಹಿಂದೇಟು ಹಾಕಿದ್ದವು.
ಇದೇ ಕಾರಣಕ್ಕಾಗಿ 2013-14 ರ ಸಾಲಿಗೆ ಸಂಬಂಧಿಸಿದಂತೆ ಪ್ರತಿ ಕೆಜಿ ಸಕ್ಕರೆಗೆ ನೂರು ರೂ.ಗಳಂತೆ ರೈತರಿಗೆ ಬಾಕಿ ಪಾವತಿ ಮಾಡಬೇಕಿದ್ದು ಕಳೆದ ಎರಡು ವರ್ಷಗಳ ಅವಧಿಯ ಸಾವಿರಾರು ಕೋಟಿ ರೂಪಾಯಿ ಹಣವನ್ನು ಕೊಡಬೇಕಿದೆ.

ಲಭ್ಯವಾಗುತ್ತಿರುವ ಕಬ್ಬಿಗೂ, ಸಕ್ಕರೆಯ ಮೌಲ್ಯಕ್ಕೂ ಪರಸ್ಪರ ಹೊಂದಾಣಿಕೆಯಾಗದೆ ಇರುವುದರಿಂದ ರೈತರಿಗೆ ನಿಗದಿ ಮಾಡಿದ ಬೆಲೆ ಕೊಡಲಾಗುತ್ತಿಲ್ಲ ಎಂದು ಕಾರ್ಖಾನೆಗಳು ತಕರಾರು ಎತ್ತಿದ್ದವು. ಇದೇ ಕಾರಣಕ್ಕಾಗಿ ಸರ್ಕಾರ ಕೂಡಾ ಹಲವು ರೀತಿಯ ರಿಯಾಯ್ತಿಗಳನ್ನು ನೀಡಿತ್ತಾದರೂ 2013-14 ನೇ ಸಾಲಿನ ಕಬ್ಬು ಬಾಕಿಯೇ ಪಾವತಿಯಾಗಿಲ್ಲ.

ಇದೀಗ ಬರಗಾಲದ ಕಾರಣಕ್ಕಾಗಿ ಕಬ್ಬು ಬೆಳೆಯ ಉತ್ಪಾದನೆಯೇ ಕುಸಿದು ಹೋಗಿರುವ ಕಾರಣದಿಂದ ಕಾರ್ಖಾನೆಗಳು ಕಬ್ಬಿಗಾಗಿ ಹಪಹಪಿಸುವ ಪರಿಸ್ಥಿತಿ ಬಂದಿದ್ದು ಕಬ್ಬು ಉತ್ಪಾದನೆ ಕಡಿಮೆಯಾಗಿರುವುದರಿಂದ ಸಕ್ಕರೆಯ ಮೌಲ್ಯ ಹೆಚ್ಚಲಿದೆ. ಹೀಗೆ ಸಕ್ಕರೆಯ ಮೌಲ್ಯ ಹೆಚ್ಚಾದರೆ ರಾಜ್ಯದ ಸಕ್ಕರೆ ಕಾರ್ಖಾನೆಗಳು ರೈತರ ಕಬ್ಬಿಗೆ ನಿಗದಿ ಮಾಡಿದ ಪ್ರಮಾಣದಷ್ಟು ಬೆಲೆ ನೀಡಲು ಸಾಧ್ಯವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X