ಯಕ್ಷಗಾನ ಕಲಾವಿದರಿಗೆ ಅಳಿಕೆ ಸಹಾಯ ನಿಧಿ
ಮಂಗಳೂರು, ಮೇ 3: ಯಕ್ಷಗಾನ ರಂಗದ ಪ್ರಸಿದ್ಧ ವೇಷಧಾರಿ ದಿ. ಅಳಿಕೆ ರಾಮಯ್ಯ ರೈಯವರ ಸ್ಮರಣಾರ್ಥ ನೀಡಲಾಗುವ ‘ಅಳಿಕೆ ಯಕ್ಷ ಸಹಾಯ ನಿಧಿ’ಗೆ ಯಕ್ಷಗಾನ ಕಲಾ ವಿದರಾದ ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿ ಮತ್ತು ಹಿರಿಯ ವೇಷಧಾರಿ ಬೆಳ್ಳಾರೆ ವಿಶ್ವನಾಥ ರೈ ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ಸಲಹೆಗಾರ ಭಾಸ್ಕರ ರೈ ಕುಕ್ಕುವಳ್ಳಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. 2009ರಲ್ಲಿ ಸ್ಥಾಪನೆಯಾದ ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ವತಿಯಿಂದ ಮೇ 5ರಂದು ಅಳಿಕೆ ಟ್ರಸ್ಟ್ ಪದಾಧಿಕಾರಿಗಳು ಅನಾರೋಗ್ಯದಲ್ಲಿರುವ ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿ ಮತ್ತು ಬೆಳ್ಳಾರೆ ವಿಶ್ವನಾಥ ರೈಯವರ ನಿವಾಸಕ್ಕೆ ತೆರಳಿ ಗೃಹ ಸನ್ಮಾನದೊಂದಿಗೆ ಇಬ್ಬರಿಗೂ ತಲಾ 10,000 ರೂ. ಸಹಾಯ ನಿಧಿ ಹಾಗೂ ಸನ್ಮಾನ ಫಲಕಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಚಾಲಕ ಅಳಿಕೆ ದುರ್ಗಾಪ್ರಸಾದ್ ರೈ, ಉಬರಡ್ಕ ಉಮೇಶ್ ಶೆಟ್ಟಿ, ಬಾಲಕೃಷ್ಣ ರೈ ಉಪಸ್ಥಿತರಿದ್ದರು.
Next Story