Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ನೀರಿನ ಕೊರತೆಯಿಂದಾಗಿ...

ಬೆಳ್ತಂಗಡಿ: ನೀರಿನ ಕೊರತೆಯಿಂದಾಗಿ ಸಾವಿರಾರು ಮೀನುಗಳು ನಾಶ

ವಾರ್ತಾಭಾರತಿವಾರ್ತಾಭಾರತಿ4 May 2016 2:37 PM IST
share
ಬೆಳ್ತಂಗಡಿ: ನೀರಿನ ಕೊರತೆಯಿಂದಾಗಿ ಸಾವಿರಾರು ಮೀನುಗಳು ನಾಶ

ಬೆಳ್ತಂಗಡಿ, ಮೇ 4: ನೀರಿನ ಕೊರತೆಯಿಂದಾಗಿ ಸಾವಿರಾರು ದೇವರ ಮೀನುಗಳು ನಾಶ ಹೊಂದುತ್ತಿರುವ ವಿದ್ಯಮಾನ ಕರಂಬಾರು ಗ್ರಾಮದ ಶ್ರೀ ಕೇಳ್ಕರೇಶ್ವರ ದೇವಸ್ಥಾನದ ಸನಿಹದ ನದಿಯಲ್ಲಿ ನಡೆಯುತ್ತಿದೆ.

ಗುರುವಾಯನಕೆರೆಯಿಂದ ಸುಮಾರು ಏಳೆಂಟು ಕಿ.ಮೀ ದೂರದಲ್ಲಿರುವ ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿ ಫಲ್ಗುಣಿ ನದಿ ಹರಿಯುತ್ತಿದೆ. ಇಲ್ಲಿ ದೇವರ ಗುಂಡಿಯಲ್ಲಿ ನಾನಾ ಜಾತಿಯ ಮೀನುಗಳಿವೆ ಪೆರುವೊಳು, ಪುರಿಯೊಳು, ತರು, ಕೊಡ್ಯೆಲೆ ಮತ್ತಿತರ ಅಪೂರ್ವಜಾತಿಯ ದೊಡ್ಡದೊಡ್ಡ ಮೀನುಗಳು ಇದ್ದು ದೇವಸ್ಥಾನಕ್ಕೆ ಬರುವ ಭಕ್ತರನ್ನು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಜೊತೆಗೆ ಮಡೆಂಜಿ, ಏಡಿ, ಸಿಗಡಿಗಳೂ ಇವೆ. ಪ್ರಸ್ತುತ ಬಿರು ಬೇಸಗೆಯಿಂದಾಗಿ ಕಳೆದ ನಾಲ್ಕು ದಿನಗಳಿಂದೀಚೆಗೆ ಮೀನುಗಳ ಮಾರಣ ಹೋಮ ನಡೆಯುತ್ತಿದೆ. ನದಿಯಲ್ಲಿ ನೀರಿನ ಹರಿವು ಕಾಣೆಯಾಗಿದೆ ಅಲ್ಲದೆ ಇರುವ ಬೃಹತ್ ಹೊಂಡದಲ್ಲಿ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿವೆ. ಈ ಹೊಂಡದಲ್ಲೇ ಸಾವಿರಾರು ಮೀನುಗಳು ಇವೆ. ಕಳೆದ ನಾಲ್ಕು ದಿನಗಳಿಂದ ನೀರಿನ ಮತ್ತಷ್ಟು ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಹೊಂಡದ ನೀರು ಬಿಸಿಯಾಗತೊಡಗಿದೆ. ಅಲ್ಲದೆ ಹೊಂಡದ ಸುತ್ತಲೂ ಬಂಡೆಗಲ್ಲುಗಳೇ ತುಂಬಿವೆ. ಇದರಿಂದ ನೀರು ಇನ್ನಷ್ಟು ಬಿಸಿಯಾಗುತ್ತಿದೆ. ಬಿಸಿ ನೀರಿನ ಪ್ರಭಾವದಿಂದಾಗಿ, ಹೊಸ ನೀರು ಇಲ್ಲದೆ ಇರುವ ನೀರಿನಲ್ಲಿ ಆಮ್ಲಜನಕ ಕಡಿಮೆಯಾಗಿ ಮೀನುಗಳು, ಇನ್ನಿತರ ಜಲಚರಗಳು ಒಂದೊಂದಾಗಿ ಸಾಯತೊಡಗಿವೆ. ಕಳೆದ ನಾಲ್ಕು ದಿನಗಳಿಂದ ಸಾವಿರಾರು ಮೀನುಗಳು ಸತ್ತುತೇಲುತ್ತಿದ್ದು ಸ್ಥಳೀಯರು ಅವನ್ನೆಲ್ಲ ಮೇಲಕ್ಕೆತ್ತಿ ಸಮಾಧಿ ಮಾಡಿದ್ದಾರೆ. ಸತ್ತ ಮೀನುಗಳನ್ನು ಎಷ್ಟೇ ಮೇಲಕ್ಕೆತ್ತಿದರೂ ಮತ್ತೂ ಮತ್ತೂ ತೇಲುವ ದೃಶ್ಯಕಾಣುತ್ತಿದೆ.

ಪರಿಸರ ದುರ್ವಾಸನೆ ಬೀರುತ್ತಿದೆ
  ದೇವಸ್ಥಾನದ ವ್ಯವಸ್ಥಾಪನಾ ಸಮಿತಿ   ಅಧ್ಯಕ್ಷ ನವೀನ್ ಸಾಮಾನಿ, ಸ್ಥಳೀಯರು ಮೀನುಗಳನ್ನುಳಿಸಲು ಹರ ಸಾಹಸ ಪಡುತ್ತಿದ್ದಾರೆ. ಸನಿಹದ ಕೊಳವೆ ಬಾವಿಯಿಂದ ನೀರನ್ನು ಹೊಂಡಕ್ಕೆ ಹಾಯಿಸಿದ್ದಾರೆ. ದೇವಸ್ಥಾನಕ್ಕೆ ಬರುವ ರಸ್ತೆಯ ಡಾಮರೀಕರಣ ನಡೆಯುತ್ತಿದ್ದು ಅದರ ಗುತ್ತಿಗೆದಾರರು ಟ್ಯಾಂಕರ್ ಮೂಲಕ ನೀರುತಂದು ಹೊಂಡ ತುಂಬಿಸುತ್ತಿದ್ದಾರೆ. ಎಷ್ಟೇ ಏನೇ ಮಾಡಿದರೂ ಮೀನುಗಳನ್ನುಳಿಸಲು ಕಷ್ಟಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೆರಡು ದಿನಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಲ್ಲಿ ಮಾತ್ರ ಉಳಿದ ಲಕ್ಷಾಂತರ ಮೀನುಗಳು ಉಳಿಯಲು ಸಾಧ್ಯ ಎಂಬತಾಗಿದೆ  ಇಲ್ಲಿನ ಸ್ಥಿತಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X