Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಸುಂಬೆಗಿಂತ ತ್ವರಿತವಾಗಿ ಬಣ್ಣ...

ಗೋಸುಂಬೆಗಿಂತ ತ್ವರಿತವಾಗಿ ಬಣ್ಣ ಬದಲಿಸುತ್ತಿರುವ ಮೋದಿ ಸರಕಾರ: ಶಿವಸೇನೆಯ ಟೀಕಾ ಪ್ರಹಾರ

ವಾರ್ತಾಭಾರತಿವಾರ್ತಾಭಾರತಿ4 May 2016 6:01 PM IST
share
ಗೋಸುಂಬೆಗಿಂತ ತ್ವರಿತವಾಗಿ ಬಣ್ಣ ಬದಲಿಸುತ್ತಿರುವ ಮೋದಿ ಸರಕಾರ: ಶಿವಸೇನೆಯ ಟೀಕಾ ಪ್ರಹಾರ

ಮುಂಬೈ,ಮೇ 4: ಕಾಶ್ಮೀರಿ ನಾಯಕರು ಯಾವುದೇ ದೇಶದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲು ನಿರ್ಬಂಧವಿಲ್ಲ ಎಂದು ಹೇಳಿರುವುದಕ್ಕಾಗಿ ಮೋದಿ ಸರಕಾರದ ವಿರುದ್ಧ ತೀವ್ರ ಟೀಕಾಪ್ರಹಾರವನ್ನು ನಡೆಸಿರುವ ಮಿತ್ರಪಕ್ಷ ಶಿವಸೇನೆಯು, ಬಿಜೆಪಿ ಸರಕಾರವು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲು ಪ್ರತ್ಯೇಕತಾವಾದಿಗಳಿಗೆ ‘ವಿನಾಯಿತಿ’ ನೀಡಿದೆ ಮತ್ತು ಗೋಸುಂಬೆಗಿಂತ ತ್ವರಿತವಾಗಿ ಬಣ್ಣವನ್ನು ಬದಲಿಸುತ್ತಿದೆ ಎಂದು ಹೇಳಿದೆ.
ಹುರಿಯತ್ ಕುರಿತಂತೆ ಕೇಂದ್ರವು ತನ್ನ ನಿಲುವಿನಿಂದ ಸಂಪೂರ್ಣವಾಗಿ ವಿಮುಖವಾಗಿರುವುದು ಅಯೋಧ್ಯೆಯ ರಾಮಮಂದಿರವನ್ನು ಬಾಬ್ರಿ ಮಸೀದಿಯೆಂದು ಕರೆದಂತೆ ಎಂದು ಅದು ಹೇಳಿದೆ.
ಹುರಿಯತ್ ಕಾನ್ಫರೆನ್ಸ್ ಈಗ ಕಾಶ್ಮೀರ ಕುರಿತಂತೆ ಪಾಕಿಸ್ತಾನದೊಂದಿಗೆ ಚರ್ಚಿಸಲಿದೆ ಮತ್ತು ಕೇಂದ್ರ ಸರಕಾರವು ಅವರಿಗೆ ಈ ವಿನಾಯಿತಿಯನ್ನು ನೀಡಿದೆ. ನಾಳೆ ಕಾಶ್ಮೀರ ಕುರಿತಂತೆ ಮಸೂದ ಅಝರ್,ದಾವೂದ್ ಇಬ್ರಾಹೀಂ ಮತ್ತು ಝಕಿಯುರ್ ರಹಮಾನ್ ಲಖ್ವಿ ಜೊತೆ ಮಾತುಕತೆ ನಡೆಯುತ್ತದೆ ಎಂದು ಶಿವಸೇನೆ ತನ್ನ ಮುಖವಾಣಿ ‘ಸಾಮನಾ’ದ ಬುಧವಾರದ ಸಂಪಾದಕೀಯ ಲೇಖನದಲ್ಲಿ ಹೇಳಿದೆ.
ಅವರು ಗೋಸುಂಬೆಗಿಂತ ವೇಗವಾಗಿ ಬಣ್ಣ ಬದಲಿಸುತ್ತಿದ್ದರೆ ಇತ್ತ ಜನರು ಅವರು(ಮೋದಿ ಸರಕಾರ) ಇದನ್ನು ಹೇಗೆ ನಿಭಾಯಿಸುತ್ತಾರೆ ಎಂದು ಅಚ್ಚರಿ ಪಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವೇನಾದರೂ ಹುರಿಯತ್ ಮತ್ತು ಕಾಶ್ಮೀರ ಬಿಕ್ಕಟ್ಟು ಕುರಿತಂತೆ ಹೀಗೆ ತಿಪ್ಪರಲಾಗ ಹೊಡೆದಿದ್ದರೆ ಅದನ್ನು ಪಾಕಿಸ್ತಾನದ ಏಜಂಟ್ ಎಂದು ಇದೇ ಬಿಜೆಪಿ ಮತ್ತು ಸಂಘ ಪರಿವಾರ ಬಣ್ಣಿಸುತ್ತಿದ್ದವು ಎಂದಿರುವ ಸಂಪಾದಕೀಯವು, ಆಗ ಕಾಂಗ್ರೆಸ್ ದೇಶವನ್ನು ಮಾರಾಟ ಮಾಡುತ್ತಿದೆ ಎಂದು ಅವು ಆರೋಪಿಸುತ್ತಿದ್ದವು ಮತ್ತು ಕಾಂಗ್ರೆಸ್ ಸರಕಾರದ ಪದಚ್ಯುತಿಗೆ ಆಗ್ರಹಿಸುತ್ತಿದ್ದವು ಎಂದಿದೆ.
ಕಾಶ್ಮೀರವೊಂದನ್ನು ಹೊರತು ಪಡಿಸಿ ಇತರೆಲ್ಲ ವಿಷಯಗಳನ್ನು ಪಾಕಿಸ್ತಾನದೊಂದಿಗೆ ಚರ್ಚಿಸುವುದಾಗಿ ಮೋದಿ ಸರಕಾರವು ನಿನ್ನೆಯವರೆಗೂ ಹೇಳುತ್ತಿತ್ತು. ಇದೀಗ ಅದು ತನ್ನ ನಿಲುವನ್ನು ಬದಲಿಸಿದೆ. ಹಿಂದಿನ ಕಾಂಗ್ರೆಸ್ ಸರಕಾರವು ಸಹ ತಳೆದಿರದಂಥ ದುರ್ಬಲ ನಿಲುವನ್ನು ತಳೆದಿದೆ ಎಂದು ಸೇನೆಯು ಟೀಕಿಸಿದೆ.
ವಾಸ್ತವದಲ್ಲಿ ಈ ನಿಲುವು ಬದಲಾವಣೆಯಿಂದ ದೇಶವು ಅಚ್ಚರಿ ಪಡಬೇಕಾಗಿಲ್ಲ. ಅಧಿಕಾರಕ್ಕಾಗಿ ಬಿಜೆಪಿಯು ಪಾಕಿಸ್ತಾನದ ಬಗ್ಗೆ ಸಹಾನುಭೂತಿ ಹೊಂದಿರುವ ಮತ್ತು ಭಯೋತ್ಪಾದಕರನ್ನು ಬೆಳೆಸಿರುವ ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಂಡಾಗಲೇ ಜನರು ಇದನ್ನು ಗಮನಿಸಿದ್ದರು ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X