Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೌದಿ ಅರೇಬಿಯಾ ಪ್ರವೇಶಕ್ಕೆ ಶಾಶ್ವತ...

ಸೌದಿ ಅರೇಬಿಯಾ ಪ್ರವೇಶಕ್ಕೆ ಶಾಶ್ವತ ನಿಷೇಧ

ಮಧ್ಯವರ್ತಿಯ ಪ್ರಮಾದಕ್ಕೆ ಬಲಿಯಾದ ಶಿವಮೊಗ್ಗ ವ್ಯಕ್ತಿ!

ವಾರ್ತಾಭಾರತಿವಾರ್ತಾಭಾರತಿ6 May 2016 10:11 PM IST
share

ಶಿವಮೊಗ್ಗ, ಮೇ 6: ಸೌದಿ ಅರೇಬಿಯ ದೇಶಕ್ಕೆ ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಲಾಗಿದ್ದ ಶಿವಮೊಗ್ಗದ ವ್ಯಕ್ತಿಯೋರ್ವರು, ವೀಸಾ ಮಾಡಿಕೊಡುವ ಮಧ್ಯವರ್ತಿ ಮಾಡಿದ ವಂಚನೆಯಿಂದ ಆ ದೇಶದ ಪ್ರವೇಶದ ಮೇಲೆ ಶಾಶ್ವತ ನಿರ್ಬಂಧಕ್ಕೆ ತುತ್ತಾಗಿರುವ ಘಟನೆ ವರದಿಯಾಗಿದೆ. ಅಕ್ಮಲ್ ಶರೀಫ್ ಮಧ್ಯವರ್ತಿಯ ವಂಚನೆಗೊಳಗಾಗಿ ಶಾಶ್ವತ ನಿರ್ಬಂಧಕ್ಕೆ ತುತ್ತಾಗಿರುವ ವ್ಯಕ್ತಿಯಾಗಿದ್ದಾರೆ. ಈ ಸಂಬಂಧ ಅವರು ಕೆ.ಆರ್.ಪುರಂ ರಸ್ತೆಯಲ್ಲಿರುವ ದಾವರ್ ಅಲಿ ಇಂಟರ್‌ನ್ಯಾಷನಲ್ ಕಚೇರಿಯ ಇರ್ಫಾನ್ (48) ಎಂಬವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನೆ ಹಿನ್ನೆಲೆ: ಅಕ್ಮಲ್ ಶರೀಪ್‌ರವರು 2012 ನೆ ಸಾಲಿನಲ್ಲಿ ಸೌದಿ ಅರೇಬಿಯಕ್ಕೆ ತೆರಳಿದ್ದರು. ಅವರು ಕೆಲಸ ಮಾಡುತ್ತಿದ್ದ ಮಾಲಕ ಒಂದೂವರೆ ತಿಂಗಳ ಸಂಬಳ ನೀಡಿರಲಿಲ್ಲ. ಈ ಕುರಿತಂತೆ ಅವರು ಸೌದಿ ಪೊಲೀಸರಿಗೆ ಮಾಲಕನ ವಿರುದ್ಧ ದೂರು ನೀಡಿ ಕೋರ್ಟ್‌ನ ಆದೇಶದಂತೆ ಮಾಲಕನಿಂದ ಬರಬೇಕಿದ್ದ ಹಣ ಪಡೆದು ಕೊಂಡಿದ್ದರು. ತದನಂತರ ಅಕ್ಮಲ್ ಶರೀಫ್‌ರಿಗೆ ಮಾಲಕ ಮೂರು ವರ್ಷಗಳ ಕಾಲ ಸೌದಿ ಅರೇಬಿಯ ಪ್ರವೇಶಿಸದಂತೆ ನಿಷೇಧ ಹೇರಿಸಿದ್ದನು. ಈ ಹಿನ್ನೆಲೆ ಯಲ್ಲಿ ಅವರು ಭಾರತಕ್ಕೆ ಹಿಂದಿರುಗಿ ಆರು ತಿಂಗಳ ಕಾಲವಿದ್ದರು. ಮತ್ತೆ ಕತ್ತಾರ್ ದೇಶಕ್ಕೆ ತೆರಳಿ 3 ವರ್ಷ ಕೆಲಸ ಮಾಡಿ ಸ್ವದೇಶಕ್ಕೆ ಬಂದಿದ್ದರು. ಇತ್ತೀಚೆಗೆ ಸ್ಥಳೀಯ ದಿನಪತ್ರಿಕೆಯೊಂದರಲ್ಲಿ ವೀಸಾ ಕೊಡಿಸುವ ಜಾಹೀರಾತು ಪ್ರಕಟವಾಗಿತ್ತು. ಅದರಲ್ಲಿದ್ದ ಮೊಬೈಲ್ ನಂಬರ್‌ಗೆ ಕರೆ ಮಾಡಿದಾಗ ಇರ್ಫಾನ್ ಎಂಬುವರು ಮಾತನಾಡಿ, ಕೆ.ಆರ್.ಪುರಂ ರಸ್ತೆಯಲ್ಲಿರುವ ಕಚೇರಿಗೆ ಆಗಮಿಸುವಂತೆ ಸೂಚಿಸಿದ್ದರು. ಸೌದಿ ಅರೇಬಿಯಕ್ಕೆ ಹೋಗಲು ಇದ್ದ ನಿಷೇಧ ತೆರವುಗೊಳಿಸುವುದಾಗಿ ಆಪಾದಿತ ಇರ್ಫಾನ್‌ರವರು ಅಕ್ಮಲ್ ಶರೀಪ್‌ರವರಿಗೆ ಭರವಸೆ ನೀಡಿ 65 ಸಾವಿರ ರೂ.ಪಡೆದುಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕರಾರು ಪತ್ರ ಮಾಡಿಕೊಳ್ಳಲಾಗಿತ್ತು. ಆದರೆ 3 ತಿಂಗಳು ಕಳೆದರೂ ಸೌದಿ ಅರೇಬಿಯಕ್ಕೆ ಹೋಗಲು ವೀಸಾ ಕೊಟ್ಟಿಲ್ಲ. ಈ ಸಂಬಂಧ ಅಕ್ಮಲ್ ಶರೀಫ್ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಇರ್ಫಾನ್ ವಿರುದ್ಧ ದೂರು ದಾಖಲಿಸಿದ್ದರು.ಇದಾದ ನಂತರ ಆಪಾದಿತನು ವೀಸಾ ಹಾಗೂ ಸೌದಿ ಅರೇಬಿಯಾಕ್ಕೆ ಹೋಗುವ ಟಿಕೆಟ್ ಕೊಟ್ಟಿದ್ದಾನೆ. ಇದರ ಆಧಾರದ ಮೇಲೆ ಅಕ್ಮಲ್ ಷರೀಫ್‌ರವರು ಕಲೆದ ಎಪ್ರಿಲ್ 13 ರಂದು ಸೌದಿ ಅರೇಬಿಯಕ್ಕೆ ತೆರಳಿದ್ದು, ವಿಮಾನ ನಿಲ್ದಾಣದಲ್ಲಿ ಅವರ ಬೆರಳಚ್ಚು ತೆಗೆಯುವಾಗ 3ವರ್ಷಗಳ ಕಾಲ ಸೌದಿ ಅರೇಬಿಯಾಕ್ಕೆ ನಿಷೇಧ ಹೇರಿರುವುದು ಚಾಲ್ತಿಯಲ್ಲಿರುವ ವಿಷಯ ಅಲ್ಲಿನ ಅಧಿಕಾರಿಗಳಿಗೆ ತಿಳಿದಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಅಧಿಕಾರಿಗಳು ಶಾಶ್ವತವಾಗಿ ಸೌದಿ ಅರೇಬಿಯ ಪ್ರವೇಶದ ಮೇಲೆ ಅಕ್ಮಲ್ ಶರೀಪ್‌ರವರಿಗೆ ನಿಷೇಧ ಹೇರಿ ವಾಪಾಸ್ ಭಾರತಕ್ಕೆ ಕಳುಹಿಸಿದ್ದಾರೆ.

 ಹಣ ವಾಪಸ್ ಕೊಟ್ಟಿಲ್ಲ: ಇದಾದ ನಂತರ ಆಪಾದಿತ ಇರ್ಫಾನ್‌ರನ್ನು ಭೇೀಟಿಯಾಗಿ ಕೊಟ್ಟ ಹಣ ವಾಪಾಸ್ ಕೊಡುವಂತೆ ಕೇಳಿದ್ದು, ಆ ವೇಳೆ ಹಣ ವಾಪಸ್ ನೀಡುವುದಿಲ್ಲವೆಂದು ಆಪಾದಿತ ಬೆದರಿಕೆ ಹಾಕಿ ಕಳುಹಿಸಿದ್ದಾನೆ ಎಂದು ಅಕ್ಮಲ್ ಷರೀಫ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X