Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಪಗ್ರಹವನ್ನು ಕಕ್ಷೆಯಲ್ಲಿರಿಸಿ...

ಉಪಗ್ರಹವನ್ನು ಕಕ್ಷೆಯಲ್ಲಿರಿಸಿ ಯಶಸ್ವಿಯಾಗಿ ಭೂಮಿಗೆ ಮರಳಿದ ರಾಕೆಟ್

‘ಸ್ಪೇಸ್‌ಎಕ್ಸ್’ ಬಾಹ್ಯಾಕಾಶ ಕಂಪೆನಿಯ ಯಶೋಗಾಥೆ

ವಾರ್ತಾಭಾರತಿವಾರ್ತಾಭಾರತಿ6 May 2016 11:31 PM IST
share

ಕೇಪ್ ಕ್ಯಾನವರಲ್ (ಫ್ಲೋರಿಡ), ಮೇ 6: ಫ್ಲೋರಿಡದಿಂದ ಶುಕ್ರವಾರ ಉಡಾಯಿಸಲಾದ ‘ಸ್ಪೇಸ್‌ಎಕ್ಸ್’ ಬಾಹ್ಯಾಕಾಶ ಕಂಪೆನಿಯ ಮಾನವರಹಿತ ‘ಫಾಲ್ಕನ್ 9’ ರಾಕೆಟ್, ಸಂಪರ್ಕ ಉಪಗ್ರಹವೊಂದನ್ನು ಯಶಸ್ವಿಯಾಗಿ ಕಕ್ಷೆಯಲ್ಲಿ ಇರಿಸಿತು. ಅಷ್ಟೇ ಅಲ್ಲ, ಬಳಿಕ ಭೂಮಿಯತ್ತ ಪ್ರಯಾಣಿಸಿ ಸಾಗರದಲ್ಲಿರುವ ನಿಲುಗಡೆ ವೇದಿಕೆಯಲ್ಲಿ ಸುರಕ್ಷಿತವಾಗಿ ಇಳಿಯಿತು.
ಉದ್ಯಮಿ ಎಲನ್ ಮಸ್ಕ್‌ರ ಸ್ಪೇಸ್‌ಎಕ್ಸ್ ರಾಕೆಟೊಂದು ಬಾಹ್ಯಾಕಾಶಕ್ಕೆ ಹಾರಿ ಬಳಿಕ ಹಿಮ್ಮುಖ ಪ್ರಯಾಣ ಕೈಗೊಂಡು ಸಮುದ್ರದಲ್ಲಿ ಯಶಸ್ವಿಯಾಗಿ ಭೂಸ್ಪರ್ಶ ನಡೆಸಿರುವುದು ಇದು ಎರಡನೆ ಬಾರಿಯಾಗಿದೆ.

ಈ ಮಾದರಿಯ ರಾಕೆಟ್‌ಗಳ ಯಶಸ್ಸಿನ ಹಿನ್ನೆಲೆಯಲ್ಲಿ, ರಾಕೆಟ್‌ಗಳನ್ನು ಮರು ಬಳಕೆ ಮಾಡಿ ಕಡಿಮೆ ವೆಚ್ಚದಲ್ಲಿ ಉಪಗ್ರಹಗಳನ್ನು ಉಡಾಯಿಸುವ ಕೊಡುಗೆಯನ್ನು ನೀಡಲು ಕಂಪೆನಿ ಮುಂದಾಗಿದೆ.
ರಾಕೆಟ್ ಸಮುದ್ರದಲ್ಲಿ ಭೂಸ್ಪರ್ಶ ನಡೆಸಿದ ಬಳಿಕ, ಟ್ವಿಟರ್‌ನಲ್ಲಿ ‘‘ವೋ.... ಹೋ...’’ ಎಂಬ ಸಂದೇಶವೊಂದನ್ನು ಮಸ್ಕ್ ಹಾಕಿದರು. ‘‘ರಾಕೆಟ್ ಸಂಗ್ರಹಾಗಾರದ ಗಾತ್ರವನ್ನು ಹಿಗ್ಗಿಸಬೇಕಾದ ಅಗತ್ಯವಿದೆ’’ ಎಂದು ಇನ್ನೊಂದು ಟ್ವೀಟ್‌ನಲ್ಲಿ ಹೇಳಿದರು.

ನಾಲ್ಕು ವಿಫಲ ಯತ್ನಗಳ ಬಳಿಕ, ಸ್ಪೇಸ್‌ಎಕ್ಸ್ ಎಪ್ರಿಲ್‌ನಲ್ಲಿ ಬಾಹ್ಯಾಕಾಶದಿಂದ ಹಿಂದಕ್ಕೆ ಬಂದ ರಾಕೆಟೊಂದನ್ನು ಯಶಸ್ವಿಯಾಗಿ ಸಮುದ್ರದ ವೇದಿಕೆಯಲ್ಲಿ ಇಳಿಸಿತ್ತು. ಇನ್ನೊಂದು ಫಾಲ್ಕನ್ ರಾಕೆಟ್ ಡಿಸೆಂಬರ್‌ನಲ್ಲಿ ಕೇಪ್ ಕ್ಯಾನವರಲ್‌ನಲ್ಲಿ ನೆಲದ ಮೇಲಿನ ಇಳಿದಾಣ ವೇದಿಕೆಯಲ್ಲಿ ಯಶಸ್ವಿಯಾಗಿ ಇಳಿದಿತ್ತು. ಶುಕ್ರವಾರ ಹಾರಿ ಬಿಡಲಾದ ರಾಕೆಟ್ ಕಳೆದ ತಿಂಗಳು ಹಾರಿಸಲಾದ ರಾಕೆಟ್‌ಗಿಂತ ದುಪ್ಪಟ್ಟು ವೇಗದಲ್ಲಿ ಹಾರಿತು. ಅದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ 32,200 ಕಿಲೋಮೀಟರ್ ದೂರದಲ್ಲಿರುವ ಕಕ್ಷೆಯೊಂದರಲ್ಲಿ ಟೋಕಿಯೊದ ದೂರಸಂಪರ್ಕ ಕಂಪೆನಿಯೊಂದರ ಬೃಹತ್ ಟಿವಿ ಪ್ರಸಾರ ಉಪಗ್ರಹವನ್ನು ಕೂರಿಸಿತು. ಬಾಹ್ಯಾಕಾಶ ನಿಲ್ದಾಣವು ಭೂಮಿಯಿಂದ 400 ಕಿ.ಮೀ. ಮೇಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X