Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ ಸರಕಾರಿ ಶಾಲೆಯ ಜಾಗ ಅತಿಕ್ರಮಣ: ವರ್ಷ...

ಕಡಬ ಸರಕಾರಿ ಶಾಲೆಯ ಜಾಗ ಅತಿಕ್ರಮಣ: ವರ್ಷ ಕಳೆದರೂ ಕ್ರಮ ಕೈಗೊಳ್ಳದ ಅಧಿಕಾರಿಗಳು

ಶಾಲೆಯ ಜಾಗ ಅನ್ಯರ ಪಾಲಾಗುವ ಆತಂಕ ವ್ಯಕ್ತಪಡಿಸುತ್ತಿದ್ದಾರೆ ನಾಗರಿಕರು

ವಾರ್ತಾಭಾರತಿವಾರ್ತಾಭಾರತಿ7 May 2016 5:37 PM IST
share
ಕಡಬ ಸರಕಾರಿ ಶಾಲೆಯ ಜಾಗ ಅತಿಕ್ರಮಣ: ವರ್ಷ ಕಳೆದರೂ ಕ್ರಮ ಕೈಗೊಳ್ಳದ ಅಧಿಕಾರಿಗಳು

ಕಡಬ, ಮೇ 7. ಇಲ್ಲಿನ ಕೋಡಿಂಬಾಳ ಗ್ರಾಮದ ಪನ್ಯ ಗುರಿಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ ಜಮೀನು ಅತಿಕ್ರಮಣಗೊಂಡು ವರ್ಷ ಕಳೆದರೂ ಸಂಬಂಧಪಟ್ಟ ಇಲಾಖಾಧಿಕಾರಿಗಳು ತೆರವುಗೊಳಿಸದೆ ಇರುವುದರಿಂದ ಶಾಲಾ ಜಾಗ ಅನ್ಯರ ಪಾಲಾಗಲಿದೆ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಕೋಡಿಂಬಾಳ ಗ್ರಾಮದ ಪನ್ಯದಲ್ಲಿ ಸರ್ವೆ ನಂ. 196/3 ರಲ್ಲಿ ಶಾಲೆಗೆ ಸೇರಿದ 60 ಸೆಂಟ್ಸ್ ಜಾಗ ಇದೆ. ಈ ಜಾಗದಲ್ಲಿ ಸುಮಾರು 9 ಜೋಪಡಿಗಳ ನಿರ್ಮಾಣವಾಗಿ ವರ್ಷವೇ ಕಳೆದಿದೆ. ಆದರೆ ಅದನ್ನು ತೆರವುಗೊಳಿಸಲು ಶಾಲೆಗೆ ಸಂಬಂಧಿಸಿದವರು ಯಾವುದೇ ಕ್ರಮ ಕೈಗೊಂಡಿಲ್ಲ. ಅದಕ್ಕೆ ಕಾರಣ ಅತಿಕ್ರಮಣ ಮಾಡಿದವರಿಗೆ ರಾಜಕೀಯ ಪಕ್ಷಗಳವರು ನೀಡುತ್ತಿರುವ ಬೆಂಬಲ. ಶಿಕ್ಷಣ ಇಲಾಖೆಯವರು ಹಾಗೂ ಕಂದಾಯ ಇಲಾಖೆಯವರು ಅತಿಕ್ರಮಣ ತೆರಮಗೊಳಿಸಲು ಮುಂದಾದಾಗಲೆಲ್ಲಾ ರಾಜಕೀಯ ಪುಡಾರಿಗಳು ಅದಕ್ಕೆ ತಡೆಯೊಡ್ಡಿದ್ದಾರೆ. ಕೆಲವು ಮಂದಿ ಮರಿ ರಾಜಕೀಯ ಪುಡಾರಿಗಳು ಜಾಗ ಅತಿಕ್ರಮಣ ಮಾಡಿ ಜೋಪಡಿ ನಿರ್ಮಿಸಿದ ಮಂದಿಯಿಂದ ಹಣ ಪಡೆದುಕೊಂಡು ಜಾಗಕ್ಕೆ ಹಕ್ಕುಪತ್ರ ಮಾಡಿಸಿಕೊಡುವುದಾಗಿ ಹೇಳಿದ ಬಗ್ಗೆಯೂ ಮಾಹಿತಿ ಇದೆ ಎನ್ನುತ್ತಾರೆ ಸ್ಥಳೀಯರು.

ಶಾಲೆಗೆ ಸೇರಿದ 60 ಸೆಂಟ್ಸ್ ಜಾಗದ ಪಕ್ಕದಲ್ಲಿ ಪನ್ಯ ಅಂಗನವಾಡಿ ಕೇಂದ್ರಕ್ಕೆ ಸೇರಿದ 10 ಸೆಂಟ್ಸ್ ಜಾಗವೂ ಇದೆ. ಅದು ಕೂಡ ಅತಿಕ್ರಮಣಗೊಂಡಿದೆ. ಸದ್ರಿ ಜಮೀನಿನಲ್ಲಿ ಸ್ತ್ರೀ ಶಕ್ತಿ ಸಂಘದ ಕಟ್ಟಡ ನಿರ್ಮಿಸುವ ಸಲುವಾಗಿ ಅತಿಕ್ರಮಣವನ್ನು ತೆರವು ಮಾಡಿಕೊಡಬೇಕೆಂದು ಕಂದಾಯ ಇಲಾಖೆಗೆ ಮಾಡಿಕೊಂಡ ಮನವಿಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಒಟ್ಟಿನಲ್ಲಿ ಅಧಿಕಾರಿಗಳ ನಿರಾಸಕ್ತಿಯ ಪರಿಣಾಮವಾಗಿ ಹಿರಿಯರು ಶಾಲೆಗಾಗಿ ಕಾದಿರಿಸಿದ ಜಾಗಗಳು ಯಾರದೋ ಪಾಲಾಗುವ ಪರಿಸ್ಥಿತಿ ಎದುರಾಗಿದೆ.

ಈ ಜಮೀನನ್ನು ಪನ್ಯ ಗುರಿಯಡ್ಕ ಶಾಲೆಗೆ ಮಂಜೂರುಗೊಳಿಸಿ ಸುಮಾರು 30 ವರ್ಷಗಳಾಗಿದೆ. ಆದರೆ ಶಾಲೆಯವರ ಬೇಜವಾಬ್ದಾರಿಯಿಂದಾಗಿ ಅತಿಕ್ರಮಣಗೊಂಡಿದೆ. ಶಾಲೆಗೆ ಸೇರಿದ ಜಾಗವನ್ನು ಭದ್ರಪಡಿಸಿಕೊಳ್ಳುವುದು ಶಾಲೆಯವರ ಕರ್ತವ್ಯ. ಆ ಬಗ್ಗೆ ಯಾವುದೇ ಆಸಕ್ತಿ ವಹಿಸದೇ ಈಗ ಜಾಗ ಅತಿಕ್ರಮಣಗೊಂಡಾಗ ಅದನ್ನು ತೆರವುಗೊಳಿಸಿಕೊಡಬೇಕೆಂದು ಮನವಿ ಸಲ್ಲಿಸಿದ್ದಾರೆ. ಈ ಕುರಿತು ಗಡಿ ಗುರುತು ಮಾಡಿಕೊಡಲು ಸರ್ವೆ ವಿಭಾಗಕ್ಕೆ ಪತ್ರ ಬರೆಯಲಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖಾಧಿಕಾರಿಯವರಿಗೂ ನೋಟಿಸ್ ಜಾರಿಗೊಳಿಸಿ ಅವರ ಸಮಕ್ಷಮದಲ್ಲಿ ಶೀಘ್ರದಲ್ಲಿ ಗಡಿ ಗುರುತು ಮಾಡಿಕೊಡಲಾಗುವುದು. ಅತಿಕ್ರಮಣವನ್ನು ತೆರವುಗೊಳಿಸಲು ಶಿಕ್ಷಣ ಇಲಾಖೆಗೆ ಸಹಕರಿಸಲಾಗುವುದು.

-ಬಿ.ಲಿಂಗಯ್ಯ, ಕಡಬ ತಹಶೀಲ್ದಾರ್


ಜಮೀನು ಶಾಲೆಯಿಂದ ಸ್ವಲ್ಪ ದೂರದಲ್ಲಿ ಇರುವುದರಿಂದ ಅತಿಕ್ರಮಣ ಆಗಿರುವುದು ಆರಂದಲ್ಲಿ ನಮ್ಮ ಗಮನಕ್ಕೆ ಬರಲಿಲ್ಲ. ಶಾಲೆಯ ಜಾಗವನ್ನು ಸಂರಕ್ಷಣೆ ಮಾಡಿಕೊಳ್ಳುವುದು ಇಲಾಖೆಯ ಜವಾಬ್ದಾರಿ. ಅದಕ್ಕೆ ಊರವರ ಹಾಗೂ ಜನಪ್ರತಿನಿಧಿಗಳ ಸಹಕಾರದ ಅಗತ್ಯವಿದೆ. ಅತಿಕ್ರಮಣವನ್ನು ತೆರವುಗೊಳಿಸಿಕೊಡುವಂತೆ ಕಂದಾಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಕಡಬ ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವುದರಿಂದ ಇಲಾಖೆಗೆ ಜಮೀನಿನ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಪ್ರೌಢಶಾಲೆ ಅಥವಾ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕಟ್ಟಡಗಳ ನಿರ್ಮಾಣಕ್ಕೆ ಜಮೀನು ಬೇಕು. ಈ ಕುರಿತು ವಾರದೊಳಗೆ ಆಡಳಿತಾತ್ಮಕ ಕ್ರಮ ತೆಗೆದುಕೊಂಡು ಕಂದಾಯ ಇಲಾಖೆಯ ನೆರವಿನೊಂದಿಗೆ ಪೊಲೀಸ್ ರಕ್ಷಣೆಯಲ್ಲಿ ಅತಿಕ್ರಮಣ ತೆರವುಗೊಳಿಸಿ ನಮ್ಮ ಜಾಗವನ್ನು ಬೇಲಿ ಹಾಕಿ ಭದ್ರಪಡಿಸಿಕೊಳ್ಳುತ್ತೇವೆ.


 -ಶಶಿಧರ ಜಿ.ಎಸ್., ಕ್ಷೇತ್ರ ಶಿಕ್ಷಣಾಧಿಕಾರಿ, ಪುತ್ತೂರು.


  ಶಾಲಾಭಿವೃದ್ಧಿ ಸಮಿತಿಯಿಂದ ಅತಿಕ್ರಮಣ ತೆರವುಗೊಳಿಸಿಕೊಡುವಂತೆ ಕಂದಾಯ ಇಲಾಖೆ ಮತ್ತು ಶಿಕ್ಷಣ ಇಲಾಖೆಗೆ ಹಲವಾರು ಬಾರಿ ಪತ್ರ ಬರೆಯಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಯವರು ಅತಿಕ್ರಮಣ ತೆರವುಗೊಳಿಸಿಕೊಡುವಂತೆ ತಿಂಗಳ ಹಿಂದೆ ಕಡಬ ತಹಶೀಲ್ದಾರರಿಗೆ ಮನವಿ ಮಾಡಿಕೊಂಡಿದ್ದಾರೆ. ಪನ್ಯದಿಂದ ಕಡಬಕ್ಕೆ ಸುಮಾರು 5 ಕಿ.ಮೀ. ದೂರ ಇರುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪನ್ಯದಲ್ಲಿ ಪ್ರೌಢಶಾಲೆ ಆಗಬೇಕು ಎನ್ನುವುದು ನಮ್ಮ ಆಶಯ. ಅದಕ್ಕೆ ಸದ್ರಿ ಜಮೀನನ್ನು ಉಪಯೋಗಿಸಲು ಕಾದಿರಿಸಬೇಕು. ಶಾಲಾಭಿವೃದ್ಧಿ ಸಮಿತಿಯ ಸಬೆಯಲ್ಲಿ ಕೂಡ ಈ ಬಗ್ಗೆ ನಿರ್ಣಯ ಕೈಗೊಂಡು ಇಲಾಖಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಅತೀ ಶೀಘ್ರದಲ್ಲಿ ಅತಿಕ್ರಮಣ ತೆರವುಗೊಳಿಸಿ ಜಾಗವನ್ನು ಶಾಲೆಯ ಸುರ್ದಿಗೆ ಒಪ್ಪಿಸಬೇಕು ಎನ್ನುವುದು ಊರವರ ಆಗ್ರಹ.

ಇಬ್ರಾಹಿಂ ಟಿ.ಎಚ್, ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ ಪನ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X