Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೊಹ್ಲಿ ಎರಡನೆ ಶತಕದ ಕೊಯ್ಲು;...

ಕೊಹ್ಲಿ ಎರಡನೆ ಶತಕದ ಕೊಯ್ಲು; ಆರ್‌ಸಿಬಿಗೆ ಜಯ

ವಾರ್ತಾಭಾರತಿವಾರ್ತಾಭಾರತಿ7 May 2016 10:52 PM IST
share
ಕೊಹ್ಲಿ ಎರಡನೆ ಶತಕದ ಕೊಯ್ಲು; ಆರ್‌ಸಿಬಿಗೆ ಜಯ

 ಬೆಂಗಳೂರು, ಮೇ 7: ನಾಯಕ ವಿರಾಟ್ ಕೊಹ್ಲಿ ಐಪಿಎಲ್‌ನ 9ನೆ ಆವೃತ್ತಿಯ ಟ್ವೆಂಟಿ-20 ಪಂದ್ಯದಲ್ಲಿ ಔಟಾಗದೆ ದಾಖಲಿಸಿದ ಎರಡನೆ ಶತಕದ ಸಹಾಯದಿಂದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಇಂದು ರೈಸಿಂಗ್ ಪುಣೆ ಸೂಪರ್‌ಜಯಂಟ್ಸ್ ವಿರುದ್ಧ ಏಳು ವಿಕೆಟ್‌ಗಳ ಜಯ ಗಳಿಸಿದೆ.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 192 ರನ್‌ಗಳ ಕಠಿಣ ಸವಾಲನ್ನು ಪಡೆದ ಆರ್‌ಸಿಬಿ ತಂಡಕ್ಕೆ ನಾಯಕ ಕೊಹ್ಲಿ ಔಟಾಗದೆ 108 ರನ್(58ಎ,8ಬೌ, 7ಸಿ) ದಾಖಲಿಸಿ ತಂಡವನ್ನು ಇನ್ನೂ 3 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ದಡ ತಲುಪಿಸಿದರು.
ಇನಿಂಗ್ಸ್ ಆರಂಭಿಸಿದ ಕೊಹ್ಲಿ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆ.ಎಲ್ ರಾಹುಲ್ ಮೊದಲ ವಿಕೆಟ್‌ಗೆ 11.1 ಓವರ್‌ಗಳಲ್ಲಿ 94 ರನ್‌ಗಳ ಜೊತೆಯಾಟ ನೀಡಿದರು.
ರಾಹುಲ್ 35 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 38ರನ್ ಗಳಿಸಿ ಪೆವಿಲಿಯನ್ ಸೇರಿದರು. ರಾಹುಲ್ ಅವರು ಝಾಂಪ ಎಸೆತದಲ್ಲಿ ಬೈಲಿಗೆ ಕ್ಯಾಚ್ ನೀಡಿದರು. ಕ್ರೀಸ್‌ಗೆ ಆಗಮಿಸಿದ ಎಬಿ ಡಿವಿಲಿಯರ್ಸ್‌ (1)ಅದೇ ಓವರ್‌ನ ಕೊನೆಯ ಎಸೆತದಲ್ಲಿ ಪೆರೆರಾಗೆ ವಿಕೆಟ್ ಒಪ್ಪಿಸಿದರು. ಮೂರನೆ ವಿಕೆಟ್‌ಗೆ ಕೊಹ್ಲಿಗೆ ಜೊತೆಯಾದ ವ್ಯಾಟ್ಸನ್ ಸ್ಫೋಟಕ ಬ್ಯಾಟಿಂಗ್‌ಗೆ ಒತ್ತು ನೀಡಿದರು.

13 ಎಸೆತಗಳನ್ನು ಎದುರಿಸಿದ ವ್ಯಾಟ್ಸನ್ 5 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಲ್ಲಿ 36 ರನ್‌ಗಳ ಅಮೂಲ್ಯ ಕೊಡುಗೆ ನೀಡಿದರು. 13 ಓವರ್‌ಗಳ ಮುಕ್ತಾಯಕ್ಕೆ ಆರ್‌ಸಿಬಿ 103 ರನ್ ಗಳಿಸಿತ್ತು. 42 ಎಸೆತಗಳಲ್ಲಿ 89 ರನ್ ಗಳಿಸಬೇಕಾದ ಒತ್ತಡಕ್ಕೆ ಸಿಲುಕಿತ್ತು. ಆರ್‌ಸಿಬಿಯ ಗೆಲುವಿಗೆ ಹಾದಿ ಸುಲಭವಾಗಿರಲಿಲ್ಲ. ವ್ಯಾಟ್ಸನ್ 14ನೆ ಓವರ್‌ನಲ್ಲಿ ಪೆರೆರಾ ಓವರ್‌ನ ಎಸೆತಗಳಲ್ಲಿ 5 ಬಾರಿ ಚೆಂಡನ್ನು ಬೌಂಡರಿ ಗೆರೆ ದಾಟಿಸಿದರು. 20 ರನ್‌ಗಳನ್ನು ತಂಡದ ಖಾತೆಗೆ ಸೇರಿಸಿದರು.
 ರಜತ್ ಭಾಟಿಯಾ ಅವರ 15ನೆ ಓವರ್‌ನಲ್ಲಿ ಮೊದಲ ಎಸೆತದಲ್ಲಿ ಚೆಂಡನ್ನು ವಿರಾಟ್ ಕೊಹ್ಲಿ ಬೌಂಡರಿಗೆ ಅಟ್ಟಿದರು. ಬಳಿಕ ವ್ಯಾಟ್ಸನ್ ಎರಡು ಸಿಕ್ಸರ್ ಬಾರಿಸಿ ಆ ಓವರ್‌ನಲ್ಲಿ ಈ ಜೋಡಿ 19 ರನ್ ಕಬಳಿಸಿತು. ಮುಂದಿನ ಓವರ್‌ನಲ್ಲಿ ವ್ಯಾಟ್ಸನ್ ಔಟಾದರು.
18ನೆ ಓವರ್‌ನಲ್ಲಿ 2 ಸಿಕ್ಸರ್ ಮತ್ತು 1 ಬೌಂಡರಿ, 19ನೆ ಓವರ್‌ನಲ್ಲಿ 2 ಸಿಕ್ಸರ್ ಮತ್ತು ಅಂತಿಮ ಓವರ್‌ನಲ್ಲಿ ಒಂದು ಬೌಂಡರಿ ಬಾರಿಸಿದ ಕೊಹ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಅಜಿಂಕ್ಯ ರಹಾನೆ ಮತ್ತು ಸೌರಭ್ ತಿವಾರಿ ಅವರ ಆಕರ್ಷಕ ಅರ್ಧಶತಕದ ನೆರವಿನಲ್ಲಿ ರೈಸಿಂಗ್ ಪುಣೆ ಸೂಪರ್‌ಜಯಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 191 ರನ್ ಗಳಿಸಿತ್ತು.
 ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ರೈಸಿಂಗ್ ಪುಣೆ ತಂಡ ಆರಂಭಿಕ ದಾಂಡಿಗ ಉಸ್ಮಾನ್ ಖ್ವಾಜಾ ವಿಕೆಟ್‌ನ್ನು ಬೇಗನೆ ಕಳೆದುಕೊಂಡರೂ, ಎರಡನೆ ವಿಕೆಟ್‌ಗೆ 106 ರನ್ ತಂಡದ ಖಾತೆಗೆ ಸೇರ್ಪಡೆಗೊಂಡಿತು. ಅಜಿಂಕ್ಯ ರಹಾನೆ ಮತ್ತು ಸೌರಭ್ ತಿವಾರಿ ತಂಡವನ್ನು ಆಧರಿಸಿದರು.
ರಹಾನೆ 48 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 74 ರನ್, ಸೌರಭ್ ತಿವಾರಿ 52 ರನ್(39ಎ, 9ಬೌ) ಕೊಡುಗೆ ನೀಡಿದರು.
ಧೋನಿ 9 ರನ್, ತಿಸ್ಸರಾ ಪೆರೆರಾ 14ರನ್, ರಜತ್ ಭಾಟಿಯಾ ಔಟಾಗದೆ 9ರನ್ ಮತ್ತು ಆರ್.ಅಶ್ವಿನ್ ಔಟಾಗದೆ 10 ರನ್ ಗಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X