Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಾದಿಕ್ ಖಾನ್ ಲಂಡನ್‌ನ ಪ್ರಥಮ ಮುಸ್ಲಿಮ್...

ಸಾದಿಕ್ ಖಾನ್ ಲಂಡನ್‌ನ ಪ್ರಥಮ ಮುಸ್ಲಿಮ್ ಮೇಯರ್

ವಾರ್ತಾಭಾರತಿವಾರ್ತಾಭಾರತಿ8 May 2016 12:03 AM IST
share
ಸಾದಿಕ್ ಖಾನ್ ಲಂಡನ್‌ನ ಪ್ರಥಮ ಮುಸ್ಲಿಮ್ ಮೇಯರ್


ಲಂಡನ್, ಮೇ 7: ಸಾದಿಕ್ ಖಾನ್ ಲಂಡನ್‌ನ ಪ್ರಥಮ ಮುಸ್ಲಿಂ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅವರನ್ನು ತೀವ್ರವಾದಿಗಳೊಂದಿಗೆ ಸಮೀಕರಿಸಿ ಕಳಂಕಿತಗೊಳಿಸುವ ಪ್ರಯತ್ನಗಳನ್ನು ಮತದಾರರು ತಿರಸ್ಕರಿಸಿದ್ದಾರೆ. ದಕ್ಷಿಣ ಲಂಡನ್‌ನ ಬಸ್ ಚಾಲಕರೋರ್ವರ ಮಗ ಚುನಾವಣೆಯಲ್ಲಿ ನಿರ್ಣಾಯಕ ವಿಜಯವನ್ನು ಸಂಪಾದಿಸಿದ್ದಾರೆ.

ತನ್ನ ವಿಜಯವನ್ನು ‘‘ಭೀತಿಯ ವಿರುದ್ಧ ಭರವಸೆಯ ವಿಜಯ ಮತ್ತು ವಿಭಜನೆಯ ವಿರುದ್ಧ ಏಕತೆಯ ವಿಜಯ’’ ಎಂಬುದಾಗಿ ನೂತನ ಮೇಯರ್ ಬಣ್ಣಿಸಿದ್ದಾರೆ. ಲೇಬರ್ ಪಕ್ಷದ ಅಭ್ಯರ್ಥಿ ಸಾದಿಕ್ 13 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದರು. ಅಂದರೆ ಚಲಾವಣೆಯಾದ ಮತಗಳ 57 ಶೇಕಡವನ್ನು ಅವರು ಗಳಿಸಿದರು. ಅವರ ಎದುರಾಳಿ ಕನ್ಸರ್ವೇಟಿವ್ ಪಕ್ಷದ ಝ್ಯಾಕ್ ಗೋಲ್ಡ್‌ಸ್ಮಿತ್ 43 ಶೇಕಡ ಮತಗಳಿಗೆ ತೃಪ್ತರಾದರು. ಈ ಬಾರಿ 45.6 ಶೇಕಡ ಮತದಾನವಾಗಿದ್ದು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಉತ್ತಮ ಮತದಾನವಾಗಿದೆ. 2012ರಲ್ಲಿ ಕೇವಲ 38 ಶೇಕಡ ಮತದಾನವಾಗಿತ್ತು. ಅರ್ಧ ಮತ ಎಣಿಕೆ ಆಗುತ್ತಿರುವ ಹೊತ್ತಿಗೆ ಸಾದಿಕ್‌ರ ವಿಜಯ ಖಚಿತವೆಂಬಂತೆ ಗೋಚರಿಸಿತ್ತು. ಮಧ್ಯರಾತ್ರಿಯ ಬಳಿಕ ಅಧಿಕೃತ ಘೋಷಣೆ ಹೊರಬಿತ್ತು.
ಕನ್ಸರ್ವೇಟಿವ್ ಪಕ್ಷದ ಮೇಯರ್ ಬೊರಿಸ್ ಜಾನ್ಸನ್‌ರ ಸ್ಥಾನದಲ್ಲಿ ಸಾದಿಕ್ ಬಂದಿದ್ದಾರೆ. ಜಿದ್ದಾಜಿದ್ದಿನ ಚುನಾವಣಾ ಪ್ರಚಾರ ಕಾಳಗದಲ್ಲಿ ನಕಾರಾತ್ಮಕ ಅಂಶಗಳನ್ನು ತರಲಾಗಿತ್ತು. ಶ್ರೀಮಂತ ಪರಿಸರವಾದಿ ಗೋಲ್ಡ್‌ಸ್ಮಿತ್ ಸಾದಿಕ್‌ರನ್ನು ವಿಭಜನವಾದಿ ಎಂಬುದಾಗಿ ಕರೆದಿದ್ದರು ಹಾಗೂ ಅವರು ಇಸ್ಲಾಮಿಕ್ ತೀವ್ರವಾದಿಗಳೊಂದಿಗೆ ವೇದಿಕೆ ಹಂಚಿಕೊಳ್ಳುತ್ತಾರೆ ಎಂಬುದಾಗಿ ಆರೋಪಿಸಿದ್ದರು. ಈ ಆರೋಪವನ್ನು ಪ್ರಧಾನಿ ಡೇವಿಡ್ ಕ್ಯಾಮರೂನ್ ಮತ್ತು ಕನ್ಸರ್ವೇಟಿವ್ ಪಕ್ಷದ ಇತರ ಹಿರಿಯ ನಾಯಕರೂ ಪುನರುಚ್ಚರಿಸಿದ್ದಾರೆ.


ಅಧಿಕಾರ ಸ್ವೀಕಾರ
ದಾಖಲೆಯ ಅಂತರದಿಂದ ವಿಜಯಿಯಾಗಿರುವ ಸಾದಿಕ್ ಖಾನ್ ಶನಿವಾರ ಲಂಡನ್‌ನ ಮೇಯರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಲಂಡನ್‌ನ ಸೌತ್‌ವಾರ್ಕ್ ಕತೀಡ್ರಲ್‌ನಲ್ಲಿ ನಡೆದ ಬಹುಧರ್ಮೀಯ ಸಮಾರಂಭವೊಂದರಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.
 

ಹೋರಾಟದ ಬದುಕು
ಖಾನ್ ಅವರ ರಾಜಕೀಯ ಯಶೋಗಾಥೆ ಒಂದು ಜೀವಂತ ದಂತಕತೆಯಂತಿದೆ. 1970ರಲ್ಲಿ ಲಂಡನ್‌ನಲ್ಲಿ ಪಾಕಿಸ್ತಾನದ ದಂಪತಿಗೆ ಜನಿಸಿದ ಖಾನ್, ಹೆತ್ತವರ ಏಳು ಮಕ್ಕಳ ಪೈಕಿ ಐದನೆಯವರು. ಅವರಿಗೆ ಒಬ್ಬ ಸೋದರಿ ಇದ್ದಾರೆ. ಅವರ ತಂದೆ ಲಂಡನ್‌ನಲ್ಲಿ ಬಸ್ ಚಾಲಕರಾಗಿ ಕೆಲಸ ಮಾಡಿದವರು. ಅವರ ಒಬ್ಬ ಸೋದರ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ. ಮಾನವ ಹಕ್ಕುಗಳ ಹೋರಾಟಗಾರರಾಗಿ ಕೆಲಸ ಮಾಡಿರುವ ಅವರಿಗೆ ಬಹಳಷ್ಟು ಜೀವಬೆದರಿಕೆಗಳೂ ಇದ್ದವು. ಸಲಿಂಗಕಾಮಿಗಳ ಪರವಾದ ಹೋರಾಟ ಅವರಿಗೆ ಜೀವ ಬೆದರಿಕೆಗಳನ್ನೂ ಒಡ್ಡಿತ್ತು. ಪತ್ನಿ ಸಾದಿಯ್ಯಿ ಮತ್ತು ಇಬ್ಬರು ಪುತ್ರಿಯರೊಂದಿಗೆ ವಾಸವಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X