Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೀರಠ್ ನ ಶಾಂತಿದೂತ ' ಮೌಲಾನ ಚತುರ್ವೇದಿ...

ಮೀರಠ್ ನ ಶಾಂತಿದೂತ ' ಮೌಲಾನ ಚತುರ್ವೇದಿ '

ವಾರ್ತಾಭಾರತಿವಾರ್ತಾಭಾರತಿ8 May 2016 2:33 PM IST
share
ಮೀರಠ್ ನ ಶಾಂತಿದೂತ  ಮೌಲಾನ ಚತುರ್ವೇದಿ

ಮೀರಠ್ , ಮೇ 8 : ಉತ್ತರ ಪ್ರದೇಶದ ಕೋಮು ಸೂಕ್ಷ್ಮ ಪ್ರದೇಶವೆಂದೇ ಕುಖ್ಯಾತಿ ಗಳಿಸಿರುವ ಮೀರತ್ ನಲ್ಲಿ ' ಮೌಲಾನ ಚತುರ್ವೇದಿ ' ಅವರು ಶಾಂತಿದೂತ ಎಂದೇ ಖ್ಯಾತರಾಗಿದ್ದಾರೆ. ಜ್ಞಾನಾರ್ಜನೆಗೆ ಜಾತಿ, ಧರ್ಮದ ಹಂಗಿಲ್ಲ ಹಾಗು ಸಹಬಾಳ್ವೆಗೆ ಧರ್ಮ ಅಡೆತಡೆ ಅಲ್ಲ  ಎಂಬುದಕ್ಕೆ ಈ ಮೌಲಾನ ಚತುರ್ವೇದಿ ಅತ್ಯುತ್ತಮ ಉದಾಹರಣೆ . 

ಹಿರಿಯ ಮುಸ್ಲಿಂ ಧಾರ್ಮಿಕ ವಿದ್ವಾಂಸ  ಹಾಗು ಇಲ್ಲಿನ 130 ವರ್ಷಗಳ ಇತಿಹಾಸವಿರುವ ಮದ್ರಸಾ ಇಮ್ದಾದುಲ್ ಇಸ್ಲಾಂ ನ ಪ್ರಾಂಶುಪಾಲ ಮೌಲಾನ ಶಾಹೀನ್ ಜಮಾಲಿ ' ಚತುರ್ವೇದಿ' ಅವರು ಇಲ್ಲಿನ ಹಿಂದೂ ಬಹುಸಂಖ್ಯಾತ ಸದರ್ ಪ್ರದೇಶದಲ್ಲಿ ಬಡ ಕುಟುಂಬಗಳಿಂದ ಬಂದ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಧಾರ್ಮಿಕ ವಿದ್ಯಾಭ್ಯಾಸ ನೀಡುತ್ತಿದ್ದಾರೆ.

ಬಿಹಾರದ ಚಂಪಾರಣ್  ಮೂಲದ ಮೌಲಾನ ದಾರುಲ್ ಉಲೂಂ ದೇವಬಂದ್ ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದವರು. ಬಳಿಕ ಆಲಿಂ ಹಾಗು ಮುಫ್ತಿ ಪದವಿ ಪಡೆದರೂ ಅವರ ಜ್ಞಾನದಾಹ ತಣಿಯಲಿಲ್ಲ. 

"ನಾನು ಕುರ್ ಆನ್ ನ ಬಗ್ಗೆ ಪಿ ಎಚ್ ಡಿ ಮಾಡಿದೆ. ಬಳಿಕ ಅಲಿಗಡ್ಹ್ ಮುಸ್ಲಿಂ ವಿವಿಯಲ್ಲಿ ಸಂಸ್ಕೃತದಲ್ಲಿ ಎಂ ಎ ಮಾಡಿದೆ. ಅಲ್ಲಿ ಸಂಸ್ಕೃತದಲ್ಲಿ ಆಸಕ್ತಿ ಬೆಳೆದು ವೇದ, ಗೀತೆ ಹಾಗು ಇತರ ಧಾರ್ಮಿಕ ಗ್ರಂಥಗಳನ್ನು ' ಪಂಡಿತ್ ಬಶೀರುದ್ದೀನ್ ' ಅವರಲ್ಲಿ  ಅಧ್ಯಯನ ಮಾಡಿದೆ " ಎಂದು ಮೌಲಾನ ಚತುರ್ವೇದಿ ಹೇಳುತ್ತಾರೆ. ' ಪಂಡಿತ್ ಬಶೀರುದ್ದೀನ್ ' ಅವರ ಹೆಸರೂ ಆಸಕ್ತಿಕರವಾಗಿದೆ. ತಮ್ಮ ಗುರು ಬಶೀರುದ್ದೀನ್ ಅವರು ಸಂಸ್ಕೃತ ಹಾಗು ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಹೊಂದಿದ್ದ ಪಾಂಡಿತ್ಯವನ್ನು ಗೌರವಿಸಿ ಮಾಜಿ ಪ್ರಧಾನಿ ಪಂಡಿತ್ ನೆಹರೂ ಅವರು ಬಶೀರುದ್ದೀನ್ ಅವರಿಗೆ ' ಪಂಡಿತ್ ' ಪದವಿ ನೀಡಿ ಗೌರವಿಸಿದ್ದರು. 

ತಮ್ಮ ಗುರುಗಳೊಂದಿಗೆ ಆ ದಿನಗಳಲ್ಲಿ ಮೌಲಾನ ಅವರು ಹಲವಾರು ಧಾರ್ಮಿಕ ಸಮಾವೇಶಗಳಿಗೆ ಹೋಗುತ್ತಿದ್ದರು. ಕರ್ನಾಟಕದಲ್ಲಿ ನಡೆದ ಅಂತಹದೊಂದು ಕಾರ್ಯಕ್ರಮದಲ್ಲಿ ಯುವ ಮೌಲಾನ ಶಾಹೀನ್ ಅವರು ಸಂಸ್ಕೃತ ಹಾಗು ವೇದಗಳಲ್ಲಿ ಸಂಪಾದಿಸಿರುವ ಅಪಾರ ಜ್ಞಾನದ ಪರಿಚಯವಾದ ವಿದ್ವಾಂಸರು ಅವರಿಗೆ 'ಚತುರ್ವೇದಿ' ( ಎಲ್ಲ ನಾಲ್ಕು ವೇದಗಳಲ್ಲಿ ಪಾಂಡಿತ್ಯ ಹೊಂದಿರುವವರು ) ಎಂಬ ಬಿರುದು ನೀಡಿ ಗೌರವಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X