Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಯಮ ಉಲ್ಲಂಘಿಸಿ ಕೊಳವೆಬಾವಿ ಕೊರೆತ...

ನಿಯಮ ಉಲ್ಲಂಘಿಸಿ ಕೊಳವೆಬಾವಿ ಕೊರೆತ ಪ್ರಕರಣ: ನನ್ನ ಪಾತ್ರವಿಲ್ಲವೆಂದ ಉಳ್ಳಾಲ ಪುರಸಭಾ ಆಯುಕ್ತೆ

ವಾರ್ತಾಭಾರತಿವಾರ್ತಾಭಾರತಿ8 May 2016 3:14 PM IST
share
ನಿಯಮ ಉಲ್ಲಂಘಿಸಿ ಕೊಳವೆಬಾವಿ ಕೊರೆತ ಪ್ರಕರಣ: ನನ್ನ ಪಾತ್ರವಿಲ್ಲವೆಂದ ಉಳ್ಳಾಲ ಪುರಸಭಾ ಆಯುಕ್ತೆ

ಮಂಗಳೂರು, ಮೇ 8: ನಗರದ ಪ್ರಭಾತ್ ಸಿನಿಮಾ ಮಂದಿರದ ಬಳಿರುವ ವಸತಿ ಸಮ್ಮುಚ್ಚಯವೊಂದರಲ್ಲಿ ನಿಯಮ ಉಲ್ಲಂಘಿಸಿ ಕೊಳವೆಬಾವಿ ಕೊರೆಸಿರುವ ಪ್ರಕರಣದಲ್ಲಿ ತನ್ನ ಪಾತ್ರವಿಲ್ಲ ಎಂದು ಉಳ್ಳಾಲ ಪುರಸಭಾ ಆಯುಕ್ತೆ ರೂಪಾ ಶೆಟ್ಟಿ ವಾರ್ತಾಭಾರತಿಗೆ ಸ್ಪಷ್ಟಪಡಿಸಿದ್ದಾರೆ. ‘‘ನಾನು ಸೇರಿದಂತೆ ಹಲವರು ವಾಸ್ತವ್ಯವಿರುವ ಈ ವಸತಿ ಸಮುಚ್ಚಯದಲ್ಲಿ ಕಳೆದ ಎರಡು ತಿಂಗಳುಗಳಿಂದ ನೀರಿನ ಸಮಸ್ಯೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ವಸತಿ ಸಮುಚ್ಚಯದ ಸೊಸೈಟಿಯವರು ಕೊಳವೆಬಾವಿ ಕೊರೆಸಲು ತೀರ್ಮಾನಿಸಿದ್ದರು. ಅದರಂತೆ ಕಳೆದ ರಾತ್ರಿ ಬೋರ್‌ವೆಲ್ ಯಂತ್ರವನ್ನು ಕರೆಸಿದ್ದಾರೆ. ಆದರೆ ನಾನು ಉಳ್ಳಾಲದಲ್ಲಿ ನಡೆಯುತ್ತಿದ್ದ ಅಬ್ಬಕ್ಕ ಉತ್ಸವದಲ್ಲಿ ಪಾಲ್ಗೊಂಡಿದ್ದೆ. ಅಲ್ಲಿಂದ ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಹಿಂದಿರುಗಿದಾಗ ಕೊಳವೆಬಾವಿ ಕೊರೆಸುತ್ತಿರುವುದು ಗಮನಕ್ಕೆ ಬಂತು. ಕೂಡಲೇ ಈ ಬಗ್ಗೆ ಮನಪಾ ಆಯುಕ್ತರ ಜೊತೆ ನಾನು ದೂರವಾಣಿ ಮೂಲಕ ಮಾತನಾಡಿ ಸಲಹೆ ಕೇಳಿದ್ದೆ. ಈ ವೇಳೆ ಅವರು ಕೊಳವೆಬಾವಿ ಕೊರೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದ ಬಗ್ಗೆ ತಿಳಿಸಿದರು. ಅದರಂತೆ ಬೊಲ್‌ವೆಲ್ ಕೊರೆಸುವುದನ್ನು ನಿಲ್ಲಿಸುವಂತೆ ಸೂಚಿಸಿದೆ. ಬಳಿಕ ಬೋರ್‌ವೆಲ್ ಕೊರೆಸುವ ಕಾರ್ಯ ಕೂಡ ಸ್ಥಗಿತಗೊಳಿಸಲಾಯಿತು’’ ಎಂದರು.

 ‘‘ನಾನೇ ಬೋರ್‌ವೆಲ್ ಕೊರೆಸಿದ್ದೇನೆ ಎಂಬ ಅಪಪ್ರಚಾರ ನಡೆಯುತ್ತಿದೆ. ಆ ವಸತಿ ಸಮುಚ್ಚಯದಲ್ಲಿ 50ಕ್ಕೂ ಅಧಿಕ ಫ್ಲಾಟ್‌ಗಳಿದ್ದು, ನಾನು ಈ ಪೈಕಿ ಫ್ಲಾಟೊಂದರ ಮಾಲಕಿ ಮಾತ್ರ. ಬಿಲ್ಡಿಂಗ್‌ನ ಒಡತಿಯಲ್ಲ. ಅದೇರೀತಿ, ವಸತಿ ಸಮುಚ್ಚಯದ ಸೊಸೈಟಿಯಲ್ಲಿ ಕಾರ್ಯದರ್ಶಿ, ಅಧ್ಯಕ್ಷೆಯೋ ಆಗಿಲ್ಲ. ಬೋರ್‌ವೆಲ್ ಕೊರೆಸಿರುವುದಕ್ಕೂ ನನಗೂ ಸಂಬಂಧವಿಲ್ಲ.ವಸತಿ ಸಮುಚ್ಚಯದಲ್ಲಿ ನಾನು ಬೋರ್‌ವೆಲ್ ಕೊರೆಸಿದ್ದೇನೆ ಎಂಬುದು ಶುದ್ಧ ಸುಳ್ಳು’’ ಎಂದು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X