Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಯೋತ್ಪಾದಕರೆಂದು ಆರೋಪಿಸಿ ಬಂಧಿಸಿದ...

ಭಯೋತ್ಪಾದಕರೆಂದು ಆರೋಪಿಸಿ ಬಂಧಿಸಿದ ನಾಲ್ವರ ಬಿಡುಗಡೆ !

ವಾರ್ತಾಭಾರತಿವಾರ್ತಾಭಾರತಿ8 May 2016 8:15 PM IST
share
ಭಯೋತ್ಪಾದಕರೆಂದು ಆರೋಪಿಸಿ ಬಂಧಿಸಿದ ನಾಲ್ವರ ಬಿಡುಗಡೆ !

ಹೊಸದಿಲ್ಲಿ ಮೇ 8: ಭಯೋತ್ಪಾದಕ ಸಂಬಂಧವಿದೆ ಎಂದಾರೋಪಿಸಿ ದಿಲ್ಲಿ ಪೊಲೀಸರು ಕಸ್ಟಡಿಗೆ ಪಡೆದಿದ್ದವರಲ್ಲಿ ನಾಲ್ವರನ್ನು ಬಿಟ್ಟು ಬಿಡಲಾಗಿದೆ.ದಿಲ್ಲಿಯಲ್ಲಿ ಸ್ಫೋಟ ನಡೆಸುವ ಸಿದ್ಧತೆ ಮಾಡಿದ್ದ ಭಯೋತ್ಪಾದಕ ಸಂಘಟನೆ ಜೈಶೆ ಮುಹಮ್ಮದ್ ನ ಸದಸ್ಯರಿವರೆಂದು ಆರೋಪಿಸಿ ಮೇ ಮೂರರಂದು ಪೊಲೀಸರು ಬಂಧಿಸಿದ್ದರು. ನಾಲ್ಕು ದಿವಸ ಕಾಲ ಪ್ರಶ್ನಿಸಿದ ನಂತರ ಅವರನ್ನುಪೊಲೀಸರು ಬಿಡುಗಡೆಗೊಳಿಸಿದರೆಂದು ವರದಿಗಳು ತಿಳಿಸಿವೆ. ಇವರ ವಿರುದ್ಧ ಸಾಕ್ಷ್ಯಗಳನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದು ದಿಲ್ಲಿ ಪೊಲೀಸ್ ಸ್ಪೆಶಲ್ ಸೆಲ್ ಮೂಲಗಳು ತಿಳಿಸಿವೆ.

 ಈಗ ಬಿಡುಗಡೆಗೊಳಿಸಿರುವವರ ಸಹಿತ ಹದಿಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇದರಲ್ಲಿ ಮೂವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದೆ. ಇನ್ನೂ ಆರು ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ದಿಲ್ಲಿ ಲೋಧಿ ರಸ್ತೆಯ ಸ್ಪೆಶಲ್ ಸೆಲ್‌ನ ಕೇಂದ್ರ ಕಚೇರಿಯಲ್ಲಿ ಇವರನ್ನು ಪ್ರಶ್ನಿಸಲಾಗುತ್ತಿದೆ.

ಪಾಕಿಸ್ತಾನದಲ್ಲಿರುವವರ ಸಹಾಯದಿಂದ ದಿಲ್ಲಿಯ ವಿವಿಧ ಜಾಗಗಳಲ್ಲಿ ಸ್ಫೋಟ ನಡೆಸಲು ಇವರೆಲ್ಲ ಸಿದ್ಧತೆ ನಡೆಸುತ್ತಿದ್ದರು ಎಂದು ದಿಲ್ಲಿ ಪೊಲೀಸ್ ಈ ಮೊದಲು ತಿಳಿಸಿತ್ತು. ಇವರಿಂದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಪೊಲೀಸರು ಹೇಳಿದ್ದರು.

 ಜಮ್ಮು-ಕಾಶ್ಮೀರ ಸರಕಾರದ ಶರಣಾಗತಿ ಯೋಜನೆ ಪ್ರಕಾರ ಶರಣಾಗತನಾಗಿ ಪಾಕಿಸ್ತಾನ ಕಾಶ್ಮೀರದಿಂದ ನೇಪಾಲದ ದಾರಿಯಾಗಿ ಭಾರತಕ್ಕೆ ಬಂದಿದ್ದ ಲಿಯಾಖತ್ ಎಂಬ ಕಾಶ್ಮೀರ ನಿವಾಸಿಯನ್ನು ದಿಲ್ಲಿ ಪೊಲೀಸರು ಬಂಧಿಸಿದ್ದರು. ಹೋಳಿ ಆಚರಣೆ ವೇಳೆ ಉತ್ತರ ಭಾರತದಲ್ಲಿ ಸ್ಫೊಟ ನಡೆಸಲಿಕ್ಕಾಗಿ ಲಿಯಾಖತ್ ಬಂದಿದ್ದಾನೆಂದು ಪೊಲೀಸರು ತಿಳಿಸಿದ್ದರು. ಘಟನೆ ವಿವಾದಗೊಂಡಾಗ ಕೇಸನ್ನು ವಹಿಸಿಕೊಂಡ ಎನ್‌ಐಎ ದಿಲ್ಲಿ ಪೊಲೀಸರ ಕಥೆಯನ್ನು ನಿರಾಕರಿಸಿ ಲಿಯಾಖತ್‌ನನ್ನು ಬಿಡುಗಡೆಗೊಳಿಸಿತ್ತು. ಕೇಸುಗಳು ಕೋರ್ಟ್‌ನಲ್ಲಿ ಸೋತಾಗ ದಿಲ್ಲಿ ಪೊಲೀಸ್ ಲಜ್ಜಿಸಬೇಕಾಗಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಜೈಶ್  ಸಂಬಂಧವನ್ನು ಆರೋಪಿಸಿ ಬಂಧಿಸಿದ್ದ ನಾಲ್ವರನ್ನು ಕೋರ್ಟ್ ಬಿಡುಗಡೆಗೊಳಿಸಿತು ಎನ್ನಲಾಗಿದೆ.

ಭಯೋತ್ಪಾದಕರ ಸಂಬಂಧವನ್ನು ಆರೋಪಿಸಿ ದಿಲ್ಲಿ ಪೊಲೀಸ್ ಸ್ಪೆಶಲ್ ಸೆಲ್ ಬಂಧಿಸಿ ಆರೋಪ ಪಟ್ಟಿಯನ್ನು ಸಲ್ಲಿಸಿದ ಹಲವು ಕೇಸುಗಳಲ್ಲಿ ಕೋರ್ಟ್ ಆರೋಪಿಗಳನ್ನು ನಿರಪರಾಧಿಗಳೆಂದು ಹೇಳಿ ಈ ಮೋದಲು ಖುಲಾಸೆಗೊಳಿಸಿತ್ತು ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X