Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ರಕ್ಷಣಾ ಅಕಾಡಮಿ ಸ್ಥಾಪನೆ:...

ಕೊಡಗಿನಲ್ಲಿ ರಕ್ಷಣಾ ಅಕಾಡಮಿ ಸ್ಥಾಪನೆ: ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್

ಶಾಂತೆಯಂಡ ಕಪ್ ಹಾಕಿ ಉತ್ಸವ

ವಾರ್ತಾಭಾರತಿವಾರ್ತಾಭಾರತಿ8 May 2016 10:15 PM IST
share
ಕೊಡಗಿನಲ್ಲಿ ರಕ್ಷಣಾ ಅಕಾಡಮಿ  ಸ್ಥಾಪನೆ: ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್

ಮಡಿಕೇರಿ, ಮೇ 8: ಕೊಡಗಿನಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡಮಿಯ ಶಾಖೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದೆಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಭರವಸೆ ನೀಡಿದ್ದಾರೆ.

ನಗರದಲ್ಲಿ ನಡೆದ ಶಾಂತೆಯಂಡ ಕಪ್ ಹಾಕಿ ಉತ್ಸವದ ಅಂತಿಮ ಪಂದ್ಯಾಟದ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸೇನಾನಿಗಳ ಜಿಲ್ಲೆ ಕೊಡಗಿನಲ್ಲಿ ಇನ್ನೂ ಕೂಡ ರಕ್ಷಣಾ ಅಕಾಡಮಿ ಸ್ಥಾಪನೆಯಾಗದೆ ಇರುವ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದರು. ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಹುಟ್ಟಿದ ಜಿಲ್ಲೆ ಎನ್ನುವ ಕಾರಣಕ್ಕಾಗಿ ಕೊಡಗಿಗೆ ಭೇಟಿ ನೀಡಿದ್ದೇನೆ. ಈ ಪುಟ್ಟ ಜಿಲ್ಲೆಯಿಂದ ಅನೇಕ ಸಂಖ್ಯೆಯ ಸೈನಿಕರು ಮತ್ತು ಹಾಕಿಪಟುಗಳು ಈ ದೇಶಕ್ಕೆ ಸಿಕ್ಕಿರುವುದು ಹೆಮ್ಮೆಯ ವಿಚಾರವೆಂದು ಶ್ಲಾಘಿಸಿದರು.

  

ತಾನು ಗೋವಾ ಮೂಲದವನಾಗಿದ್ದು, ಅಲ್ಲಿ ಸಂಗೀತಕ್ಕೆ ಪ್ರಾಧಾನ್ಯತೆ ಇದೆ. ಆದರೆ ಕೊಡಗು ಸೈನಿಕರಿಗೆ ಹೆಸರುವಾಸಿಯಾದ ಜಿಲ್ಲೆಯಾದರೂ ಉದಯೋನ್ಮುಖ ಹಾಕಿ ಪಟುಗಳು ಹೊರಹೊಮ್ಮುತ್ತಿರುವುದು ಸಂತಸದ ವಿಚಾರವೆಂದು ಸಚಿವ ಮನೋಹರ್ ಪಾರಿಕ್ಕರ್ ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಕೊಡವ ಕುಟುಂಬ ತಂಡಗಳ ನಡುವೆ ನಡೆಯುತ್ತಿರುವ ಈ ಅಪರೂಪದ ಪಂದ್ಯಾಟ ದೇಶದಲ್ಲೇ ಪ್ರಥಮವಾಗಿದ್ದು, ಇದು ಹೆಮ್ಮೆಯ ವಿಚಾರವೆಂದರು. ಕೊಡಗು ಕರ್ನಾಟಕ ರಾಜ್ಯದ ರತ್ನವಾಗಿದ್ದು, ಎಲ್ಲರೂ ಸೇರಿ ಜಿಲ್ಲೆಯ ಪ್ರಗತಿಗೆ ಶ್ರಮಿಸಬೇಕಿದೆ ಎಂದು ಕರೆ ನೀಡಿದ ಅವರು, ಇದೇ ಮೊದಲ ಬಾರಿಗೆ ತಾವು ಕೊಡವ ಹಾಕಿ ಪಂದ್ಯವನ್ನು ವೀಕ್ಷಿಸಲು ಆಗಮಿಸಿದ್ದು, ದೇಶದ ರಕ್ಷಣಾ ಸಚಿವರು ಉಪಸ್ಥಿತರಿರುವುದು ಹರ್ಷ ತಂದಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು. ಸಂಸದ ಪ್ರತಾಪ್ ಸಿಂಹ ಮಾತನಾಡಿ, ಕೊಡಗು ಸೈನಿಕರ ನೆಲೆ ಬೀಡು ಮಾತ್ರವಲ್ಲ ಕ್ರೀಡಾಕಲಿಗಳ ನಾಡು ಕೂಡ ಹೌದು ಎಂದರು. ಜಿಲ್ಲೆಯ ಸೈನಿಕ ಪರಂಪರೆಯ ಕುರಿತು ದೇಶದ ರಕ್ಷಣಾ ಸಚಿವರಿಗೆ ಸಂಪೂರ್ಣ ಮಾಹಿತಿಯಿದ್ದು, ಇದೇ ಅಭಿಮಾನದಿಂದ ಅವರು ಇಂದು ಜಿಲ್ಲೆಗೆ ಆಗಮಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಶಾಸಕದ್ವಯರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ರಾಜ್ಯ ಕರಕುಶಲ ನಿಗಮದ ಅಧ್ಯಕ್ಷೆ ವೀಣಾಅಚ್ಚಯ್ಯ, ಜಿಪಂ ಅಧ್ಯಕ್ಷ ಬಿ.ಎ.ಹರೀಶ್, ಕಾಂಗ್ರೆಸ್ ಪ್ರಮುಖರಾದ ಬ್ರಿಜೇಶ್ ಕಾಳಪ್ಪ, ಮಿಟ್ಟು ಚಂಗಪ್ಪ, ಪಕ್ಷದ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಕೊಡವ ಕುಟುಂಬಗಳ ಹಾಕಿ ಪಂದ್ಯಾಟದ ಜನಕ ಪಾಂಡಂಡ ಕುಟ್ಟಪ್ಪ, ಕೊಡವ ಸಾಹಿತ್ಯ ಅಕಾಡಮಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ, ಜಿಪಂ ಸದಸ್ಯೆ ಕೆ.ಪಿ.ಚಂದ್ರಕಲಾ ಮತ್ತಿತರ ಪ್ರಮುಖರು ಈ ಸಂದರ್ಭ ಹಾಜರಿದ್ದರು.

ಬೇಡಿಕೆಗಳು: ಫಿೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಮಣೋತ್ತರ ಭಾರತ ರತ್ನ ನೀಡಿ ಗೌರವಿಸಬೇಕು. ರಾಷ್ಟ್ರೀಯ ರಕ್ಷಣಾ ಅಕಾಡಮಿಯ ಶಾಖೆ ಮತ್ತು ಸೇನಾ ಕಾಲೇಜು ಸ್ಥಾಪಿಸ ಬೇಕು. ನಿವೃತ್ತ ಸೈನಿಕರಿಗೆ ಉದ್ಯೋಗವಕಾಶ ಕಲ್ಪಿಸಬೇಕು. ಕೊಡಗಿನಲ್ಲಿ ಹಾಕಿ ಅಕಾಡಮಿ ಸ್ಥಾಪಿಸಬೇಕು. ಸೇನೆಯಲ್ಲಿ ಕೊಡಗು ರೆಜ್‌ಮೆಂಟ್‌ನ್ನು ಆರಂಭಿಸಬೇಕು. ಜಿಲ್ಲೆಯನ್ನು ಡಿಎಫ್

ಆರ್‌ಐ ಕೇಂದ್ರವನ್ನಾಗಿ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಬೆಳಿ್ಳ ಸಿ್ಟಕ್ ಬೆಳಿ್ಳ ಬಾಲ್: ಸಭಾ ಕಾರ್ಯಕ್ರಮದ ನಂತರ ಮೈದಾನಕ್ಕೆ ತೆರಳಿದ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಅವರು, ಪಳಂಗಂಡ ಮತ್ತು ಕಲಿಯಂಡ ತಂಡಗಳ ಆಟಗಾರರನ್ನು ಪರಿಚಯಿಸಿಕೊಂಡರು. ಬಳಿಕ ಬೆಳ್ಳಿ ಸ್ಟಿಕ್‌ನಿಂದ ಬೆಳ್ಳಿಯ ಬಾಲ್‌ಗೆ ಹೊಡೆಯುವ ಮೂಲಕ ಅಂತಿಮ ಪಂದ್ಯಾಟಕ್ಕೆ ಸಚಿವರು ಚಾಲನೆ ನೀಡಿದರು.

ರಕ್ಷಣಾ ಸಚಿವರಿಗೆ ಗೌರವ: ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನಕ್ಕೆ ಆಗಮಿಸುತ್ತಿದ್ದಂತೆ ಪಂದ್ಯಾಟ ವೀಕ್ಷಿಸಲು ಆಗಮಿಸಿದ್ದ ಸಾವಿರಾರು ಜನ ಎದ್ದು ನಿಂತು ಗೌರವ ಅರ್ಪಿಸಿದರು. ಕೊಡಗಿನ ಜನರ ಶಿಸ್ತನ್ನು ಕಂಡು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಶುಭಕೋರಿದ ಮಳೆ ಹನಿ: ಶಾಂತೆಯಂಡ ಕಪ್‌ಗಾಗಿ ಪಳಂಗಂಡ ಮತ್ತು ಕಲಿಯಂಡ ತಂಡಗಳ ನಡುವೆ ಅಂತಿಮ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಮಳೆಹನಿಗಳ ಸಿಂಚನವಾಯಿತು. ಉತ್ತಮ ಮಳೆಯಾಗುವ ಆತಂಕ ಆಯೋಜಕರಲ್ಲಿ ಇತ್ತಾದರೂ ನಂತರ ಬದಲಾದ ಉರಿ ಬಿಸಿಲಿನ ವಾತಾವರಣ ಸಾವಿರಾರು ಕ್ರೀಡಾಭಿಮಾನಿಗಳಲ್ಲಿ ಬೆವರಿಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X