ಹೈಕೋರ್ಟ್ ಆದೇಶ ಪ್ರಶ್ನಿಸಿ ಉತ್ತರಾಖಂಡ್ ಅನರ್ಹಗೊಂಡ ಶಾಸಕರು ಸುಪ್ರೀಂ ಮೊರೆ
ಮಧ್ಯಾಹ್ನ 2 ಗಂಟೆಗೆ ತುರ್ತಾಗಿ ಅರ್ಜಿಯ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ನೈನಿತಾಲ್, ಮೇ 9: ತಮ್ಮ ಅರ್ಜಿಯನ್ನು ವಜಾಗೊಳಿರುವ ಉತ್ತರಾಖಂಡ್ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಅನರ್ಹಗೊಂಡ 9 ಮಂದಿ ಶಾಸಕರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಇಂದು ಮಧ್ಯಾಹ್ನ 2 :00ಗಂಟೆಗೆ ಅನರ್ಹಗೊಂಡ ಶಾಸಕರ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ. ಮಂಗಳವಾರ ಉತ್ತರಾಖಂಡ್ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿರುವ ವಿಚಾರಣೆಯು ಕುತೂಹಲ ಕೆರಳಿಸಿದೆ. ಉತ್ತರಾಖಂಡ್ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಅನರ್ಹಗೊಂಡ ಶಾಸಕರ ಅರ್ಜಿಯನ್ನು ಇಂದು ವಜಾಗೊಳಿಸಿದ್ದ ಹೈಕೋರ್ಟ್ ಮಂಗಳವಾರ ನಡೆಯಲಿರುವ ವಿಸ್ವಾಸಮತದ ವೇಳೆ ಅನರ್ಹಗೊಂಡ ಶಾಸಕರಿಗೆ ಮತದಾನದ ಹಕ್ಕು ಇಲ್ಲ ಮತ್ತು ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು. ಇದನ್ನು ಪ್ರಶ್ನಿಸಿ ಶಾಸಕರು ಸುಪ್ರೀಂಕೊರ್ಟ್ನ ಮೊರೆ ಹೋಗಿದ್ದಾರೆ.
ಮಾಜಿ ಮುಖ್ಯ ಮಂತ್ರಿ ಹರೀಶ್ ರಾವತ್ ನೇತೃತ್ವದ ಕಾಂಗ್ರೆಸ್ ಸರಕಾರದ 9 ಮಂದಿ ಶಾಸಕರು ಬಂಡಾಯ ಎದ್ದು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು. ಅನರ್ಹಗೊಂಡ 9 ಮಂದಿ ಶಾಸಕರು ಅನರ್ಹಗೊಳಿಸಿದ್ದ ಸ್ವೀಕರ್ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ್ದರು.
ಅರ್ಜಿಯ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಸ್ವೀಕರ್ ಆದೇಶವನ್ನು ಎತ್ತಿ ಹಿಡಿದು, ಶಾಸಕರ ಮನವಿಯನ್ನು ತಿರಸ್ಕರಿಸಿತ್ತು.





