Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಎಸ್‌ಟಿಸಿ ಪ್ರಕರಣ ಸುಖಾಂತ್ಯ: 13 ವರ್ಷಗಳ...

ಎಸ್‌ಟಿಸಿ ಪ್ರಕರಣ ಸುಖಾಂತ್ಯ: 13 ವರ್ಷಗಳ ಬಳಿಕ ಮನೆಗೆ ಮರಳಿದ ಇಬ್ಬರು ಮಂಗಳೂರಿಗರು

ಐಎಫ್‌ಎಫ್ ಮತ್ತು ದಾನಿಗಳ ನಿರಂತರ ಶ್ರಮದ ಫಲಶ್ರುತಿ

ವಾರ್ತಾಭಾರತಿವಾರ್ತಾಭಾರತಿ9 May 2016 8:01 PM IST
share
ಎಸ್‌ಟಿಸಿ ಪ್ರಕರಣ ಸುಖಾಂತ್ಯ: 13 ವರ್ಷಗಳ ಬಳಿಕ ಮನೆಗೆ ಮರಳಿದ ಇಬ್ಬರು ಮಂಗಳೂರಿಗರು

ಮಂಗಳೂರು, ಮೇ 9: ಸುಧೀರ್ಘ 13 ವರ್ಷಗಳಿಂದ ಸೌದಿ ಅರೇಬಿಯಾದ ಜಿದ್ದಾ ಜೈಲಿನಲ್ಲಿದ್ದ ಮಂಗಳೂರು ಮೂಲದ ಅನಿವಾಸಿ ಭಾರತೀಯರಿಬ್ಬರು ಬಿಡುಗೊಂಡು ರವಿವಾರ ತಾಯ್ನಾಡಿಗೆ ಮರಳಿದ್ದಾರೆ.

ಉಳ್ಳಾಲದ ಫೈರೋಝ್ ಮತ್ತು ಬಜ್ಪೆಯ ರಿಯಾಝ್ ಎಂಬವರು ತಾಯ್ನೆಡಿಗೆ ಮರಳಿ ತಮ್ಮ ಕುಟುಂಬದವರನ್ನು ಸೇರಿಕೊಂಡಿದ್ದಾರೆ. ಇಂಡಿಯಾ ಫ್ರೆಟರ್ನಿಟಿ ಫೋರಂ (ಐಎಫ್‌ಎಫ್) ಹಾಗೂ ದಾನಿಗಳ ಸಹಕಾರದಿಂದ ಇವರು ಬಿಡುಗಡೆಗೊಂಡಿದ್ದಾರೆ.

ಘಟನೆಯ ಹಿನ್ನೆಲೆ

2003ರಲ್ಲಿ ನಡೆದಿದ್ದ ಎನ್ನಲಾದ ಹುಂಡಿ ಕರೆ ಪ್ರಕರಣವೊಂದಕ್ಕೆ ಸಂಬಂಧಿಸಿ ಸೌದಿ ಅರೇಬಿಯಾದ ಟೆಲಿಕಾಂ ಕಂಪೆನಿಯು ಒಟ್ಟು 8 ಮಂದಿ ಮಂಗಳೂರಿಗರನ್ನು ಬಂಧಿಸಿತ್ತು. ಅಲ್ಲದೆ, ಭಾರೀ ಪ್ರಮಾಣದ ದಂಡವನ್ನು ವಿಧಿಸಿತ್ತು. ಬಂಧಿತರ ಪೈಕಿ ಅಯ್ಯೂಬ್ ಕಣ್ಣೂರು ಎಂಬಾತನನ್ನು ಈ ಮೊದಲೇ ಬಿಡುಗಡೆಗೊಳಿಸಲಾಗಿತ್ತು. ಇತರ ಮೂವರನ್ನು ಅವರ ಕುಟುಂಬದವರೇ ಮಧ್ಯಪ್ರವೇಶಿಸಿ ದಂಡ ಪಾವತಿಸಿ ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಐಎಫ್‌ಎಫ್‌ನ ಸಹಕಾರದಿಂದ ಇಬ್ಬರು ಬಿಡುಗಡೆಗೊಳ್ಳುವ ಮೂಲಕ ಪ್ರಕರಣದಲ್ಲಿ ಒಟ್ಟು 6 ಮಂದಿ ಬಿಡುಗಡೆಗೊಂಡಂತಾಗಿದೆ. ಉಳಿದಿಬ್ಬರಾದ ಬಂದರ್‌ನ ಅಬ್ದುಲ್ ನಾಸಿರ್ ಶರೀಫ್ ಕಣ್ಣೂರು ಎಂಬವರು ಶೀಘ್ರದಲ್ಲೇ ಬಿಡುಗಡೆಗೊಳ್ಳುವ ನಿರೀಕ್ಷೆಯನ್ನು ಐಎಫ್‌ಎಫ್ ವ್ಯಕ್ತಪಡಿಸಿದೆ.

ನಾಸಿರ್ ವಾರದೊಳಗೆ ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದ್ದು, ಶರೀಫ್ ಬಿಡುಗಡೆಯ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಇಂಡಿಯಾ ಫ್ರೆಟರ್ನಿಟಿ ಪೋರಂ ತಿಳಿಸಿದೆ.

ಕಳೆದ 6 ವರ್ಷಗಳಿಂದ ಪ್ರಕರಣದ ಇತ್ಯರ್ಥಕ್ಕಾಗಿ ನಿರಂತರ ಶ್ರಮಿಸಿದ ಐಎಫ್‌ಎಫ್‌ನ ಕಾರ್ಯಕರ್ತರು, ದಾನಿಗಳು ಮತ್ತು ಹಿತೈಷಿಗಳನ್ನು ಐಎಫ್‌ಎಫ್ ಕೃತಜ್ಞತೆ ಸಲ್ಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X