Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಸ್ನೇಕ್ ಕಿರಣ್ ಬಲೆಗೆ ಅಪರೂಪದ ‘ಪಟ್ಟೆ...

‘ಸ್ನೇಕ್ ಕಿರಣ್ ಬಲೆಗೆ ಅಪರೂಪದ ‘ಪಟ್ಟೆ ಕುಕ್ರಿ ಹಾವು’!

ವಾರ್ತಾಭಾರತಿವಾರ್ತಾಭಾರತಿ9 May 2016 10:08 PM IST
share
‘ಸ್ನೇಕ್ ಕಿರಣ್ ಬಲೆಗೆ ಅಪರೂಪದ ‘ಪಟ್ಟೆ ಕುಕ್ರಿ ಹಾವು’!

ಶಿವಮೊಗ್ಗ, ಮೇ 9: ಖ್ಯಾತ ಉರಗ ತಜ್ಞ ಸ್ನೇಕ್ ಕಿರಣ್‌ರವರು ಸೋಮವಾರ ನಗರದ ಸೋಮಿನ ಕೊಪ್ಪದ ಕೆಎಚ್‌ಬಿ ಪ್ರೆಸ್ ಕಾಲೋನಿಯಲ್ಲಿ ಅಪರೂಪದ ’ಪಟ್ಟೆ ಕುಕ್ರಿ ಹಾವ’ನ್ನು (ಬ್ಯಾಂಡೆಂಡ್ ಕುಕ್ರಿ ಅಥವಾ ಕಾಮನ್ ಕುಕ್ರಿ) ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಾಗರತ್ನ ಎಂಬುವರ ಮನೆಯ ಮುಂಭಾಗದಲ್ಲಿದ್ದ ನೀರಿನ ತೊಟ್ಟಿಯಲ್ಲಿ ಬೆಳಗ್ಗೆ ಈ ಹಾವು ಕಂಡು ಬಂದಿತ್ತು. ತಕ್ಷಣವೇ ಮನೆಯವರು ಸ್ನೇಕ್ ಕಿರಣ್‌ಗೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕಾಗಮಿಸಿದ ಸ್ನೇಕ್ ಕಿರಣ್‌ರವರು ತೊಟ್ಟಿಯ ನೀರಿನಲ್ಲಿದ್ದ ಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ರಕ್ಷಣೆ ಮಾಡಿದ್ದಾರೆ.

ತದನಂತರ ಪರಿಶೀಲನೆ ನಡೆಸಿದಾಗ ಇದು ವಿಷರಹಿತ ಹಾವುಗಳ ಜಾತಿಗೆ ಸೇರಿದ ‘ಪಟ್ಟೆ ಕುಕ್ರಿ’ ಹಾವು ಎಂಬುವುದು ತಿಳಿದು ಬಂದಿದೆ. ಈ ಹಾವು ಬಹಳ ಅಪರೂಪವಾಗಿ ಕಂಡುಬರುತ್ತದೆ. ಅದರಲ್ಲಿಯೂ ಶಿವಮೊಗ್ಗದಂತಹ ನಗರಗಳಲ್ಲಿ ವಿರಳಾತೀವಿರಳವಾಗಿದೆ ಎಂದು ಸ್ನೇಕ್ ಕಿರಣ್‌ಪತ್ರಿಕೆಗಳಿಗೆ ಮಾಹಿತಿ ನೀಡಿದರು.

‘ಈ ಹಾವು ಸರಿಸುಮಾರು ಒಂದೂವರೆ ಅಡಿಯಷ್ಟು ಉದ್ದವಿದ್ದು, ತೆಳುವಾಗಿದೆ. ಕೆರೆ ಹಾವಿನ ರೀತಿಯಲ್ಲಿ ಈ ಹಾವು ಕೂಡ ವಿಷರಹಿತವಾದುದಾಗಿದೆ. ಕಚ್ಚಿದರೂ ಯಾವುದೇ ಅನಾಹುತವಿಲ್ಲವಾಗಿದೆ’ ಎಂದು ಸ್ನೇಕ್ ಕಿರಣ್‌ರವರು ತಿಳಿಸಿದ್ದಾರೆ. ‘ಜೈವಿಕ ವ್ಯವಸ್ಥೆಯಲ್ಲಿ ಹಾವುಗಳು ಅಪರೂಪದ ಜೀವ ಪ್ರಭೇದವಾಗಿದೆ. ಯಾವುದೇ ಕಾರಣಕ್ಕೂ ಹಾವುಗಳನ್ನು ಕೊಲ್ಲಬಾರದು. ನಿಮ್ಮ ಮನೆ ಸುತ್ತಮುತ್ತಲಿನ ಪರಿಸರದಲ್ಲಿ ಹಾವುಗಳು ಕಂಡುಬಂದಲ್ಲಿ ತಮಗೆ ಮಾಹಿತಿ ನೀಡಿದರೆ, ಸುರಕ್ಷಿತವಾಗಿ ಸೆರೆ ಹಿಡಿದು ಅದನ್ನು ಸ್ಥಳಾಂತರಿಸುವ ಕೆಲಸ ಮಾಡಲಾಗುವುದು ಎಂದು ಅವರು ನಾಗರಿಕರಿಗೆ ಮನವಿ ಮಾಡಿದ್ದಾರೆ. ಸ್ನೇಕ್ ಕಿರಣ್‌ರವರ ಮೊಬೈಲ್ ಸಂಖ್ಯೆ : 94800-23580 ಗೆ ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X