Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವರ್ಣಸಂಕರಗಳು ಹೆಚ್ಚು ನಡೆಯಲಿ: ದೇವನೂರ...

ವರ್ಣಸಂಕರಗಳು ಹೆಚ್ಚು ನಡೆಯಲಿ: ದೇವನೂರ ಮಹದೇವ

ಮಂಡ್ಯ: ಅಂತರ್ಜಾತಿ, ಅಂತರ್ಧರ್ಮೀಯ ವಿವಾಹಿತರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ9 May 2016 11:39 PM IST
share
ವರ್ಣಸಂಕರಗಳು ಹೆಚ್ಚು ನಡೆಯಲಿ: ದೇವನೂರ ಮಹದೇವ

ಮಂಡ್ಯ, ಮೇ 9: ತಮ್ಮ ಮನೆಯ ಕುಡಿಯೊಂದು ಬೇರೆ ಜಾತಿಯ ಹುಡುಗನನ್ನು ಇಷ್ಟಪಟ್ಟ ಏಕೈಕ ಕಾರಣಕ್ಕೆ ಆಕೆಯನ್ನು ಕೊಲ್ಲುವುದು ಪೈಶಾಚಿಕ ಕೃತ್ಯವಾಗಿದೆ. ಇದಕ್ಕೆ ಕಾರಣ ಜಾತಿ ಪಿಶಾಚಿ ಮನಸ್ಸಿನ ಆಳದಲ್ಲಿ ಬೇರೂರಿರುವುದು. ಇದನ್ನು ಕೊತ್ತೊಗೆಯುವ ಕೆಲಸ ಆರಂಭವಾಗಬೇಕು ಎಂದು ಸಾಹಿತಿ ದೇವನೂರ ಮಹದೇವ ಕರೆ ನೀಡಿದ್ದಾರೆ.
ಬಸವ ಜಯಂತಿ ಅಂಗವಾಗಿ ನಗರದ ರೈತ ಸಭಾಂಗಣದಲ್ಲಿ ಪ್ರಗತಿಪರ ಸಂಘಟನೆಗಳ ವಿಶ್ವಮಾನವ ವಿಚಾರ ವೇದಿಕೆ ವತಿಯಿಂದ ಜಾತಿಮುಕ್ತ ಮನಸುಗಳ ಸಮ್ಮಿಲನ ಹೆಸರಿನಡಿ ಆಯೋಜಿಸಿದ್ದ ಅಂತರ್ಜಾತಿ ಮತ್ತು ಅಂತರ್‌ಧರ್ಮೀಯ ವಿವಾಹಿತರ ರಾಜ್ಯಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು.
  ವರ್ಣಸಂಕರ ಹೆಚ್ಚು ಅಗತ್ಯವಾಗಿದೆ. ಭಾರತದಲ್ಲಿ ವರ್ಣಸಂಕರವನ್ನು ತಡೆಗಟ್ಟಲು ಇರುವ ಕಾನೂನು ಕಟ್ಟಳೆಗಳು ಮತ್ಯಾವುದಕ್ಕೂ ಇಲ್ಲ. ಇದು ಭಾರತದಲ್ಲಿ ವರ್ಣಸಂಕರ ಅತೀ ಹೆಚ್ಚು ನಡೆದಿದೆ ಎಂದರ್ಥ. ಭಾರತೀಯರಿಗೆ ಹಲವು ಬಣ್ಣಗಳಿವೆ. ಇದು ಸಂಕರದಿಂದ ಆಗಿರುವುದು. ಇಂತಹ ವರ್ಣಸಂಕರಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದು ಅವರು ವಿಶ್ಲೇಷಿಸಿದರು.
ಪ್ರೀತಿಸುವುದಕ್ಕೆ ಹೆತ್ತ ಮಕ್ಕಳನ್ನೇ ಕೊಂದವರಿಗೆ ಮಾದರಿ ಭಗವದ್ಗೀತೆಯಲ್ಲಿದೆ. ಕೃಷ್ಣ ವರ್ಣಸಂಕರದ ಪಿತಾಮಹಾ. ಆದರೆ, ಭಗವದ್ಗೀತೆ ಇಂದು ವರ್ಣಸಂಕರಕ್ಕೆ ವಿರೋಧ ತಂದು ಭಾರತವನ್ನೇ ಚಿಂದಿ ಮಾಡುತ್ತಿದೆ. ಇದನ್ನು ಶ್ರೀ ಸಾಮಾನ್ಯರು ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.
ಶಿವಮೊಗ್ಗದ ಮತ್ತೂರಿನಲ್ಲಿ ಸಂಕೇತಿ ಬ್ರಾಹ್ಮಣರು ನಡೆಸಿದರೆನ್ನಲಾದ ಸೋಮಯಾಗದಲ್ಲಿ ಕಣ್ಣೆದುರೇ ಮೇಕೆ ಬಲಿ ನಡೆಸಿ ಸೇವನೆ ಮಾಡಲಾಯಿತು. ಆದರೆ, ಪತ್ರಿಕೆಯ ಓದುಗರ ಪತ್ರ ವಿಭಾಗದಲ್ಲಿ ಅಲ್ಲಿ ಮೇಕೆ ಬಲಿ ನಡೆದೇ ಇಲ್ಲವೆಂದು ಬರೆದಿದ್ದಾರೆ. ಸತ್ಯವನ್ನು ಮರೆಮಾಚುವಂತಹ ಇಂತಹ ನಡೆಗಳಿಗೆ ತಡೆಯೊಡ್ಡಬೇಕು ಎಂದು ದೇವನೂರು ಸಲಹೆ ಮಾಡಿದರು.
ಬಲಾಢ್ಯನಾದ ಶಿವಾಜಿ ಗೆದ್ದು ಬಂದಾಗ ಆತನನ್ನು ಪಟ್ಟಕ್ಕೆ ಏರಿಸಲು ಶೂದ್ರ ಎಂಬ ಕಾರಣಕ್ಕೆ ಬಿಡುವುದಿಲ್ಲ. ಆಗ ಪುರೋಹಿತನೊಬ್ಬ ಬಂದು ಹಿರಣ್ಯಗರ್ಭದಲ್ಲಿ ಕೂರಿಸಿ ಮಂತ್ರ ಹೇಳಿ ರಾಜನನ್ನಾಗಿ ಮಾಡುತ್ತಾನೆ. ಆದರೆ, ಆ ಪುರೋಹಿತನನ್ನು ಇತತರು ರೇಗಿಸಿ ಕೆಟ್ಟ ಪದಗಳಿಂದ ಬೈಯುತ್ತಾರೆ. ಪೈಶಾಚಿಕ ಕಾಲವಾದ ಗುಪ್ತರ ಯುಗವನ್ನು ಸುವರ್ಣ ಯುಗ ಎನ್ನುತ್ತೇವೆ. ಇದಕ್ಕೆ ಏನು ಹೇಳಬೇಕು ಎಂದು ಅವರು ವಿಷಾದಿಸಿದರು.
ಸ್ವೀಡನ್‌ನಲ್ಲಿ ವಿಷಯಾಧಾರಿತವಾಗಿ ಹೋರಾಡುತ್ತಾರೆ. ನಮ್ಮ ಸಿದ್ದಿ ಜನಾಂಗದಲ್ಲಿ ಹಿಂದು ಮುಸ್ಲಿಂ, ಹೊಲೆಯ, ಆದಿವಾಸಿ ಇತರರೆಲ್ಲಾ ಒಟ್ಟಿಗೆ ಒಂದೇ ಕುಟುಂಬದಲ್ಲಿ ವಾಸಿಸುತ್ತಾರೆ. ಅವರು ಧರ್ಮವನ್ನು ತಮ್ಮ ಹೃದಯದಲ್ಲಿಟ್ಟುಕೊಂಡಿದ್ದಾರೆಯೇ ಹೊರತು ಅದರಿಂದ ಯಾವುದೇ ತೊಂದರೆ ಅವರಿಗಿಲ್ಲ. ಅವರಿಗೆ ಸಾಧ್ಯವಾಗಿದ್ದು ನಮಗೇಕೆ ಸಾಧ್ಯವಿಲ್ಲ ಎಂದು ದೇವನೂರು ಪ್ರಶ್ನಿಸಿದರು.

ಸಮಾವೇಶ ಉದ್ಘಾಟಿಸಿದ ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮಕುಮಾರ್, ಹುಟ್ಟುವಾಗ ಇಂತಹದೇ ಜಾತಿಯಲ್ಲಿ ಹುಟ್ಟಬೇಕೆಂದು ಯಾರೂ ಅರ್ಜಿ ಆಕಿಕೊಂಡಿರುವುದಿಲ್ಲ. ಹುಟ್ಟು ಆಕಸ್ಮಿಕ. ಹಾಗಾಗಿ ಹುಟ್ಟಿನ ಮೂಲಕ ಅಳೆಯುವ ಜಾತಿವಿನಾಶ ನಮ್ಮ ಗುರಿಯಾಗಲಿ ಎಂದು ಕರೆ ನೀಡಿದರು. ಸಂವಿಧಾನ ಗಂಡು ಹೆಣ್ಣಿನ ನಡುವೆ ಸಮಾನತೆ ಕೊಟ್ಟಿದೆ. ಎಲ್ಲರಿಗೂ ಆಯ್ಕೆಯ ಸ್ವಾತಂತ್ರ್ಯ ನೀಡಿದೆ. ಇದನ್ನು ಮೂಲಭೂತ ಸ್ವಾತಂತ್ರ್ಯ ಎಂದು ಗುರುತಿಸಲಾಗಿದೆ. ಇಂತಹ ಮೂಲಭೂತ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವಂತಹ ಬೆಳವಣಿಗೆಗಳನ್ನು ಕೊನೆಗೊಳಿಸುವ ಪ್ರಯತ್ನ ಮಾಡಬೇಕು ಎಂದವರು ತಿಳಿಸಿದರು.
ಚಿಂತಕ ಪ್ರೊ.ಎಚ್.ಎಲ್.ಕೇಶವಮೂರ್ತಿ, ರೈತನಾಯಕಿ ಸುನಂದ ಜಯರಾಂ, ಮೈಸೂರಿನ ಮಾನವ ಮಂಟಪದ ಉಗ್ರನರಸಿಂಹೇಗೌಡ, ಭಾರತೀಯ ಬೌದ್ಧ ಸಭಾದ ಶಿವರಾಜ್, ವಕೀಲ ಬಿ.ಟಿ.ವಿಶ್ವನಾಥ್, ಕರ್ನಾಟಕ ಜನಶಕ್ತಿಯ ಡಾ.ಎಚ್.ವಿ.ವಾಸು, ಮಲ್ಲಿಗೆ, ರೈತಸಂಘದ ಮುದ್ದೇಗೌಡ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X