ಕಾರಿನಲ್ಲಿ ನಿಷೇಧಿತ ತಂಬಾಕು ಸಾಗಾಟ: ಇಬ್ಬರ ಬಂಧನ

ಮಂಜೇಶ್ವರ, ಮೇ 10: ಕಾರಿನಲ್ಲಿ ಸಾಗಿಸಲಾಗುತ್ತಿದ್ದ 31 ಸಾವಿರ ಪ್ಯಾಕೆಟ್ ನಿಷೇಧಿತ ತಂಬಾಕುಗಳ ಸಹಿತ ಇಬ್ಬರನ್ನು ಮಂಜೇಶ್ವರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸಾಗಾಟಕ್ಕೆ ಬಳಸಿದ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಉಳಿಯತ್ತಡ್ಕ ನಿವಾಸಿಗಳಾದ ಅಬೂಬಕರ್ (31) , ಇಬ್ರಾಹೀಂ ಖಲೀಲ್(30) ಎಂಬಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಚುನಾವಣಾ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ಗಡಿ ಪ್ರದೇಶವಾದ ತಲಪಾಡಿಯಲ್ಲಿ ವಾಹನ ತಪಾಸಣೆ ವೇಳೆ ಪ್ರಕರಣವನ್ನು ಪತ್ತೆಹಚ್ಚಲಾಗಿದೆ.
Next Story





