Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಕೆರೆ ಸಂಜೀವಿನಿ’ ಯೋಜನೆ ಅನುಷ್ಠಾನಕ್ಕೆ...

‘ಕೆರೆ ಸಂಜೀವಿನಿ’ ಯೋಜನೆ ಅನುಷ್ಠಾನಕ್ಕೆ ನಿಬಂಧನೆ ಅಡ್ಡಿ

ಕೆರೆ ಹೂಳು ರೈತರೇ ಕೊಂಡೊಯ್ಯಬೇಕೆಂಬ ಸರಕಾರದ ಆದೇಶ

ವಾರ್ತಾಭಾರತಿವಾರ್ತಾಭಾರತಿ10 May 2016 9:48 PM IST
share

ಬಿ. ರೇಣುಕೇಶ್

 ಶಿವಮೊಗ್ಗ, ಮೇ 10: ರಾಜ್ಯದಲ್ಲಿ ಜನ-ಜಾನುವಾರುಗಳಿಗೆ ಉಪಯುಕ್ತವಾದ ಕೆರೆಗಳ ಹೂಳೆತ್ತಲು ಜೆಸಿಬಿ ಯಂತ್ರ ಬಳಕೆಗೆ ‘ಕೆರೆ ಸಂಜೀವಿನಿ’ ಯೋಜನೆಯಡಿ ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ. ಇದಕ್ಕಾಗಿ 25 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಜೂನ್ 15ರೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಆದೇಶ ಹೊರಡಿಸಿದೆ. ಆದರೆ ಈ ಯೋಜನೆಯ ಅನುಷ್ಠಾನಕ್ಕೆ ಸರಕಾರ ಜಾರಿಗೊಳಿಸಿರುವ ಕೆಲ ಮಾರ್ಗದರ್ಶಿ ಸೂತ್ರಗಳು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವೆಡೆ ಕಾಲಮಿತಿಯೊಳಗೆ ಯೋಜನೆ ಅನುಷ್ಠಾನ ಮಾಡಲು ಸಾಧ್ಯವಾಗದಂತಾಗಿದ್ದರೆ ಮತ್ತೆ ಕೆಲವೆಡೆ ಉಪಯುಕ್ತ ಕೆರೆಗಳನ್ನು ಈ ಯೋಜನೆಯಡಿ ಅಭಿವೃದ್ಧಿಗೊಳಿಸಲು ಆಗದಂತಾಗಿದೆ. ಇದರಿಂದ ಹಲವು ಕೆರೆಗಳಲ್ಲಿ ಯೋಜನೆಯಡಿ ಜೆಸಿಬಿ ಯಂತ್ರ ಬಳಸಿ ಹೂಳು ತೆಗೆಯಲು ಅಸಾಧ್ಯವಾಗಿ ಪರಿಣಮಿಸಿದೆ. ಈ ಹಿಂದೆ ತಮ್ಮ ಹೊಲ, ಗದ್ದೆ, ತೋಟಗಳಿಗೆ ಕೆರೆಯಿಂದ ತೆಗೆದ ಹೂಳು ಹಾಕಲು ರೈತರು ಹೆಚ್ಚಿ ನ ಆಸಕ್ತಿವಹಿಸುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಕೆರೆಯ ಹೂಳು ಕೊಂಡೊಯ್ಯಲು ಮುಂದೆ ಬರುತ್ತಿಲ್ಲ. ಮಳೆಯಾಶ್ರಿತ ಪ್ರದೇಶಗಳಲ್ಲಿ ಮಾತ್ರ ರೈತರು ಹೂಳು ಕೊಂಡೊಯ್ಯಲು ಆಸಕ್ತಿ ವಹಿಸುತ್ತಾರೆ. ನೀರಾವರಿ ಪ್ರದೇಶದ ರೈತರು ಆಸಕ್ತಿವಹಿಸುವುದಿಲ್ಲ. ಪ್ರಸ್ತುತ ಸರಕಾರವು ರೈತರು ಹೂಳು ಕೊಂಡೊಯ್ಯಲು ಮುಂದೆ ಬರುವಂತಹ ಕೆರೆಗಳನ್ನು ಮಾತ್ರ ಜೆಸಿಬಿಯ ಮೂಲಕ ಹೂಳು ತೆಗೆಯಲು ಆಯ್ಕೆ ಮಾಡುವಂತೆ ಹಾಗೂ ಇದನ್ನು ಸ್ಥಳೀಯ ಪಿಡಿಒ ಗಳಿಂದ ದೃಢೀಕರಿಸುವಂತೆ ಆದೇಶಿಸಿರುವುದು ಯೋಜನೆ ಅನುಷ್ಠಾನಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ ಎಂದು ಜಿಲ್ಲಾ ಪಂಚಾಯತ್‌ನ ಹಿರಿಯ ಅಧಿಕಾರಿಯೋರ್ವರು ಹೇಳುತ್ತಾರೆ. ಒಂದೊಮ್ಮೆ ಪ್ರಾರಂಭ ಹಂತದಲ್ಲಿ ರೈತರು ಹೂಳು ಕೊಂಡೊಯ್ಯಲು ಮುಂದೆ ಬಂದು ತದನಂತರ ಕೊಂಡೊಯ್ಯದಿದ್ದರೆ ಏನು ಮಾಡಬೇಕು? ಯಾವ ರೀತಿಯಲ್ಲಿ ಹೂಳು ಸಾಗಾಟ ಮಾಡಬೇಕು? ಇದಕ್ಕೆ ತಗಲುವ ವೆಚ್ಚ ಭರಿಸುವರ್ಯಾರು? ಎಂಬಿತ್ಯಾದಿ ಹಲವು ಪ್ರಶ್ನೆಗಳಿಗೆ ಇಲಾಖೆಯ ಮಾರ್ಗದರ್ಶಿ ಸೂತ್ರದಲ್ಲಿ ಯಾವುದೇ ಸ್ಪಷ್ಟ ಮಾಹಿತಿಯಿಲ್ಲವಾಗಿದೆ ಎಂದು ಅಧಿಕಾರಿಯೋರ್ವರು ತಿಳಿಸುತ್ತಾರೆ. *ಸಡಿಲಿಸಬೇಕು: ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆಗಳ ಹೂಳು ತೆಗೆಯಲು ಹಾಗೂ ನೀರು ಪೂರೈಕೆಯ ಕಾಲುವೆಗಳ ಅಭಿವೃದ್ಧಿಗೆ ಅವಕಾಶವಿದೆ. ಆದರೆ, ಎನ್‌ಆರ್‌ಇಜಿಯಲ್ಲಿ ಜೆಸಿಬಿ ಅಥವಾ ಇತರ ಯಂತ್ರೋಪಕರಣ ಬಳಸಿ ಹೂಳೆತ್ತುವುದರ ಮೇಲೆ ನಿರ್ಬಂಧ ವಿಧಿಸಲಾಗಿದೆ. ಸಂಪೂರ್ಣವಾಗಿ ಕಾರ್ಮಿಕರ ಮೂಲಕವೇ ಕೆಲಸ ಮಾಡಿಸಬೇಕು. ಇದರಿಂದ ಹಲವು ಕೆರೆಗಳಲ್ಲಿ ಭಾರೀ ಪ್ರಮಾಣದಲ್ಲಿ ಸಂಗ್ರಹವಾಗಿರುವ ಹೂಳನ್ನು ಕಾಲಮಿತಿಯೊಳಗೆ ತೆಗೆಯಲು ಸಾಧ್ಯವಿಲ್ಲದಂತಾಗಿದೆ. ಪ್ರಸ್ತುತ ಕೆರೆ ಸಂಜೀವಿನಿ ಯೋಜನೆಯಡಿ ಜೆಸಿಬಿ ಯಂತ್ರ ಬಳಕೆ ಮಾಡಿ ಹೂಳು ತೆಗೆಯಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಉಪಯುಕ್ತ ಕೆರೆಗಳ ಹೂಳು ತೆಗೆಯಲು ಸಾಕಷ್ಟು ಅನುಕೂಲವಾಗುತ್ತದೆ. ಆದರೆ ರೈತರು ಹೂಳು ಕೊಂಡೊಯ್ಯಲು ಮುಂದೆ ಬರುವ ಪ್ರದೇಶಗಳ ಕೆರೆಯನ್ನು ಮಾತ್ರ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸೂಚಿಸಿರುವುದು ಯೋಜನೆಯ ಅನುಷ್ಠಾನಕ್ಕೆ ಎಡರುತೊಡರು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಎಚ್.ಕೆ.ಪಾಟೀಲ್ ಹಾಗೂ ಹಿರಿಯ ಅಧಿಕಾರಿಗಳು ಈ ಮಾರ್ಗದರ್ಶಿ ಸೂತ್ರ ಸರಳೀಕರಣಕ್ಕೆ ಮುಂದೆ ಬರಬೇಕು. ಕೆರೆಯ ಹೂಳನ್ನು ಇಲಾಖೆಯ ಮೂಲಕವೇ ಸಾಗಾಟ ಮಾಡುವ ವ್ಯವಸ್ಥೆ ಮಾಡಬೇಕು. ಇದಕ್ಕೆ ಅಗತ್ಯವಾದ ಅನುದಾನ ಬಿಡುಗಡೆಗೆ ಅಥವಾ ಇಲಾಖೆಯ ಇತರ ಯೋಜನೆಗಳಡಿ ಹಣ ವ್ಯಯಿಸಲು ಅವಕಾಶ ಕಲ್ಪಿಸಬೇಕು.

ಇದರಿಂದ ಸರಕಾರ ನಿಗದಿಪಡಿಸಿರುವ ಜೂನ್ 15 ರ ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನ ಮಾಡಲು ಸಾಧ್ಯವಾಗಲಿದೆ. ಇಲ್ಲ

ದಿದ್ದರೆ ಹಲವು ಪ್ರದೇಶಗಳಲ್ಲಿ ಯೋಜನೆ ಅನುಷ್ಠಾನ ಕಷ್ಟ ಸಾಧ್ಯವಾಗಲಿದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಯೋರ್ವರು ಹೇಳುತ್ತಾರೆ. ಒಟ್ಟಾರೆ ರಾಜ್ಯ ಸರಕಾರ ಜಾರಿಗೊಳಿಸಿರುವ ಮಹತ್ವದ ಯೋಜನೆಯೊಂದು ನಿಬಂಧನೆಯೊಂದರ ಕಾರಣದಿಂದಲೇ ಅನುಷ್ಠಾನ ವಿಳಂಬವಾಗುವಾಗಲು ಕಾರಣವಾಗಿದೆ. ತಕ್ಷಣವೇ ಸರಕಾರ ನಿಯಮ ಸರಳೀಕರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಮುಂದಾಗಲಿ

ದೆಯೇ ಎಂಬುವುದನ್ನು ಕಾದು ನೋಡಬೇಕಾಗಿದೆ. ಅಡ್ಡಿಯೇನು?:

ಕುಡಿಯುವ ನೀರು ಸರಬರಾಜು ಯೋಜನೆಗಳ ಜಲಮೂಲ ಅಭಿವೃದ್ಧಿಗೆ ಸಹಕಾರಿಯಾಗುವ ಕೆರೆಗಳಲ್ಲಿ ಹೂಳೆತ್ತಲು ಹೆಚ್ಚಿನ ಆದ್ಯತೆ ನೀಡಬೇಕು. ಡಿಸಿ-ಸಿಇಒ ಅಧ್ಯಕ್ಷತೆಯ ಸಮಿತಿಯ ಸಭೆಯ ಅನುಮೋದನೆ ಪಡೆಯಬೇಕು. ಗಂಟೆಗೆ ಇಂತಿಷ್ಟೆ ಪ್ರಮಾಣದಲ್ಲಿ ಜೆಸಿಬಿಯಿಂದ ಹೂಳು ತೆಗೆಸಬೇಕು ಎಂಬಿತ್ಯಾದಿ ನಿಬಂಧನೆಗಳನ್ನು ಹಾಕಲಾಗಿದೆ. ಆದರೆ ಈ ನಿಬಂಧನೆಗಳಲ್ಲಿ ರೈತರು ಹೂಳು ತೆಗೆದುಕೊಂಡು ಹೋಗಲು ಮುಂದೆ ಬರುವಂತಹ ಕೆರೆಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು. ಸ್ಥಳೀಯ ಗ್ರಾಪಂ ಪಿಡಿಒ (ಪಂಚಾಯತ್ ಅಭಿವೃದ್ಧಿ ಅಧಿಕಾರಿ) ಗಳು ರೈತರು ಹೂಳು ಕೊಂಡೊಯ್ಯುತ್ತಾರೆ ಎಂಬುವುದನ್ನು ದೃಢೀಕರಿಸಬೇಕು ಎಂಬ ಷರತ್ತು ಯೋಜನೆಗೆ ಅಡ್ಡಿಯಾಗಿ ಪರಿಣಮಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X