Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿವಿ ಮಾಧ್ಯಮಗಳ ಶಾಸ್ತ್ರ ಅಪಾಯಕಾರಿ:...

ಟಿವಿ ಮಾಧ್ಯಮಗಳ ಶಾಸ್ತ್ರ ಅಪಾಯಕಾರಿ: ಪಂಡಿತಾರಾಧ್ಯ ಸ್ವಾಮಿ

ಕಡೂರು: ಬಸವ ಜಯಂತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ10 May 2016 10:01 PM IST
share

 ಕಡೂರು, ಮೇ 10: ಸಮಾಜದಲ್ಲಿ ಶಸ್ತ್ರ ಮತ್ತು ಶಾಸ್ತ್ರಗಳು ಅಪಾಯಕಾರಿ. ಇವುಗಳ ವಿರುದ್ಧ ಬಸವಣ್ಣ 12ನೆ ಶತಮಾನದಲ್ಲಿಯೇ ಹೋರಾಟ ನಡೆಸಿದ ಮಹಾಪುರುಷ. ಈಗಲೂ ಟಿ.ವಿ. ಮಾಧ್ಯಮಗಳಲ್ಲಿ ಶಾಸ್ತ್ರ ಹೇಳುವವರು ಸಮಾಜದ ಅಪಾಯಕಾರಿಗಳು. ಅವರ ಭವಿಷ್ಯವನ್ನು ಜನ ನಂಬಬಾರದು ಎಂದು ಹೊಸದುರ್ಗ ಸಾಣೇಹಳ್ಳಿ ಪೀಠಾಧ್ಯಕ್ಷ ಶ್ರೀಪಂಡಿತಾರಾಧ್ಯ ಶಿವಾಚಾರ್ಯಸ್ವಾಮಿಗಳು ಅಭಿಪ್ರಾಯಿಸಿದ್ದಾರೆ.

ಅವರು ತಾಲೂಕಿನ ಬಿಳುವಾಲ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದ ಪ್ರಯುಕ್ತ ವಿನೂತನ ಕಾರ್ಯಕ್ರಮ ಅನುಭವ ಮಂಟಪದ ಪರಿಕಲ್ಪನೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.

ನಾಡಿನಲ್ಲಿ ಕಾರ್ಯಕ್ರಮಗಳಿಗೆ ಬರವಿಲ್ಲ. ಅನೇಕ ಜಯಂತಿ ಕಾರ್ಯಕ್ರಮಗಳು ತುಂಬಾ ವಿಜೃಂಭಣೆಯಿಂದ ನಡೆಯುತ್ತವೆ. ಆದರೆ, ಜನಪರವಾದ ಕಾರ್ಯಕ್ರಮಗಳಿಗೆ ಕೊರತೆ ಇದೆ. ಮೇ 1ನೆ ದಿನದ ಕಾರ್ಮಿಕರ ದಿನಾಚರಣೆಯನ್ನು ವಿಶ್ವಕಾಯಕದ ದಿನಾಚರಣೆ ಎಂದು ಸರಕಾರ ಮಾಡಬೇಕಿದೆ ಎಂದರು.

 ಜನರನ್ನು ವಿವೇಕಶೀಲರನ್ನಾಗಿ ಮಾಡಿರುವುದು ಶರಣರು. 12ನೆ ಶತಮಾನದಲ್ಲೇ ವೌಢ್ಯಗಳನ್ನು ಬಸವಣ್ಣನವರು ವಿರೋಧಿಸಿದ್ದರೂ 21ನೆ ಶತಮಾನದಲ್ಲೂ ವೌಢ್ಯಗಳು ಮುಂದುವರಿದಿ ರುವುದು ಅಪಾಯಕಾರಿ ಬೆಳವಣಿಗೆ ಎಂದು ಅಭಿಪ್ರಾಯಿಸಿದ ಶ್ರೀಗಳು, ಭಾರತ ವೌಢ್ಯ ಮುಕ್ತ, ಮದ್ಯಮುಕ್ತ ಸಮಾಜವಾಗಬೇಕಿದ್ದು, ಗ್ರಾಮ ಗಳು ಬಯಲು ಶೌಚಾ ಲಯ ಮುಕ್ತವಾಗಬೇಕು ಎಂದರು. ಸಮಾ ರಂಭದಲ್ಲಿ ಹೊಸದುರ್ಗ ಬ್ರಹ್ಮವಿದ್ಯಾನಗರ ಮುದ್ರೆ ಮಠದ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮಿಗಳು ಮಾತನಾಡಿ, ಕ್ರಾಂತಿಕಾರಕ ವಿಷಯಗಳೊಂದಿಗೆ 12ನೆ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪವನ್ನು ಸೃಷ್ಟಿಸಿದರು. ವಚನಗಳ ಮೂಲಕ ಸಮಾಜದಲ್ಲಿ ನಡೆದ ಶೋಷಣೆಗಳನ್ನು ಸಾಮಾನ್ಯ ಜನರಿಗೆ ತಿಳಿಸುತ್ತಿದ್ದರು. ಮೇಲುಕೀಳು ಎಂಬ ಭೇದಭಾ   ವನ್ನು ತೊಡೆದು ಹಾಕಲು ಬಸವಣ್ಣನವರು ಎಲ್ಲರನ್ನೂ ಒಂದೇ ವೇದಿಕೆಯಡಿ ತಂದರು ಇದು ಬಸವಣ್ಣನವರಿಗೆ ಸಮಾಜದ ಮೇಲಿದ್ದ ಕಳಕಳಿಯನ್ನು ತೋರುತ್ತಿದೆ ಎಂದರು. ಕಾಯಕದ ಪರಿಕಲ್ಪನೆಯ ಮೇರೆಗೆ ಶಾಸಕರ ನೇತೃತ್ವದಲ್ಲಿ 1 ಕಿ.ಮೀ. ರಸ್ತೆ ನಿರ್ಮಾಣವಾಗಿದೆ. ಇದು ಎಲ್ಲಾ ರಾಜಕಾರಣಿಗಳಿಗೂ ಮಾದರಿಯಾಗಬೇಕಿದೆ. ಎಲ್ಲವನ್ನು ಸರಕಾರ ಮಾಡಲು ಸಾಧ್ಯವಿಲ್ಲ. ಗ್ರಾಮಸ್ಥರು ಕಾಯಕದ ಮೂಲಕ ಇಂತಹ ಕಾರ್ಯ ಮಾಡಬೇಕಿದೆ. ಎಲ್ಲರಿಗೂ ಸಮಾನತೆಗೊಂಡಾಗ ಕಲ್ಯಾಣ ಗ್ರಾಮವಾಗಲಿದೆ. ಸಮಾಜದಲ್ಲಿ ಪರಿವರ್ತನೆಯನ್ನು ಕಾಣಬೇಕಿದೆ. ಎಲ್ಲರಲ್ಲೂ ಪರಿಸರದ ರಕ್ಷಣೆಯ ಮನೋಭಾವ ಬರಬೇಕಿದೆ ಎಂದು ತಿಳಿಸಿದರು. ಶಾಸಕ ವೈ.ಎಸ್.ವಿ. ದತ್ತ ಮಾತನಾಡಿ, ಅನುಭವ ಮಂಟಪ ಪಕ್ಷ ರಾಜಕಾರಣದಿಂದ ಹೊರಗಿಟ್ಟು ನಡೆಸಲಾಗುವುದು. ಈ ಅನುಭವ ಮಂಟಪದ ಮೂಲಕ ಪ್ರತಿ ತಿಂಗಳ ಕೊನೆಯ ಸೋಮವಾರ ಕಾಯಕದ ದಿನವನ್ನಾಗಿ ಮಾಡಿ ಗ್ರಾಮಗಳ ಶುಚಿತ್ವಗೊಳಿಸುವುದು. ಸಸಿಗಳನ್ನು ನೆಡಿಸುವುದು, ಗ್ರಾಮಗಳ ರಸ್ತೆ ನಿರ್ಮಿಸುವುದು, ಶೌಚಾಲಯಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುವುದು. ಪ್ರತಿ ತಿಂಗಳು ಒಂದು ಗ್ರಾಮವನ್ನು ಆಯ್ಕೆ ಮಾಡಿ ಕಾಯಕ ಮಾ ಡಲಾಗುವುದು, ಪಾನಮುಕ್ತಕ್ಕೆ ಆದ್ಯತೆ ನೀಡಲಾಗುವುದು, ಪ್ರತಿ ಜನಾಂಗದವರು ಅನುಭವ ಮಂಟಪದ ಸದಸ್ಯರಾಗುವ ಮೂಲಕ ಹೊಸ ರೂಪವನ್ನು ಈ ಕ್ಷೇತ್ರದಲ್ಲಿ ತರಲು ಎಲ್ಲರೂ ಸಹಕರಿಸಬೇಕು ಎಂದು ವಿನಂತಿಸಿದರು. ಈ ಸಂದರ್ಭ ಅನುಭವ ಮಂಟಪದಲ್ಲಿ ಎಲ್ಲಾ ಸಮಾಜದವರು ಉಪಸ್ಥಿತರಿದ್ದರು. 12ನೆ ಶತಮಾನದ ಅನುಭವ ಮಂಟಪದ ಅನುಭವ ಮೂಡುವಂತಿತ್ತು. ಇಡೀ ರಾಜ್ಯದಲ್ಲಿ ಎಲ್ಲೂ ನಡೆಯದ ಅಪರೂಪದ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮದ ನಂತರ ಸಾಮೂಹಿಕ ದಾಸೋಹ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X